![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 11, 2023, 5:52 AM IST
ಹಾಸನ: ರಾಜ್ಯ ಹಾಗೂ ರೈತರ ಆಸ್ತಿ ನಂದಿನಿ. ಅದನ್ನು ಉಳಿಸಬೇಕು, ಬೆಳೆಸಬೇಕು. ನಂದಿನಿ ಸ್ಥಾನವನ್ನು ಅಮುಲ್ ಆಕ್ರಮಿಸಲು ಅವಕಾಶ ಕೊಡಕೂಡದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಹೇಮಾವತಿ ಪ್ರತಿಮೆ ಬಳಿ ಇರುವ ನಂದಿನಿ ಹಾಲಿನ ಮಾರಾಟ ಮಳಿಗೆಯಲ್ಲಿ ಸೋಮವಾರ ಬೆಳಗ್ಗೆ “ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಖರೀದಿಸಿ ನಂದಿನಿ ಉಳಿಸಿ ಅಭಿಯಾನ’ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರೈತರೇ ಕಟ್ಟಿ ಬೆಳೆಸಿರುವ ಹೈನೋದ್ಯಮದ ಬೃಹತ್ ಸಂಸ್ಥೆ ಕೆಎಂಎಫ್ ಉಳಿಯಬೇಕು. ನಂದಿನಿ ಬ್ರ್ಯಾಂಡ್ಗೆ ಎಂದೆಂದಿಗೂ ಧಕ್ಕೆ ಆಗಬಾರದು ಎಂಬುದು ಮಹನೀಯರ ಆಶಯವಾಗಿತ್ತು. ಅವರ ಆಶಯಗಳನ್ನು ಗೌರವಿಸಿ ನಂದಿನಿ ಬೇಕೇ, ಅಮುಲ್ ಬೇಕೇ ಎಂಬುದನ್ನು ಸರಕಾರ ನಿರ್ಧರಿಸಲಿ ಎಂದರು.
ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅಮುಲ್ ಮಾರಾಟವನ್ನು ನಾವು ತಡೆಯಲು ಆಗುವುದಿಲ್ಲ ಎಂದು ಹೇಳುತ್ತಿದ್ದಾರೆ.
ಹಾಗಾದರೆ ರೇಷ್ಮೆ ದರ ಕುಸಿದಾಗ ನಿಯಂತ್ರಣಕ್ಕಾಗಿ ರೇಷ್ಮೆ ಆಮದು ತಡೆಯಲಿಲ್ಲವಾ? ಮುಕ್ತ ಮಾರುಕಟ್ಟೆ ಸರಿ. ಆದರೆ ನಮ್ಮ ರೈತರನ್ನೂ ಉಳಿಸಿಕೊಳ್ಳಬೇಕು. ನಂದಿನಿ ಉಳಿದರೆ ರಾಜ್ಯದ ರೈತರು ಉಳಿಯುತ್ತಾರೆ. ದುಬಾರಿ ದರ ನೀಡಿ ಅಮುಲ್ ಖರೀದಿಸುವ ಅಗತ್ಯವೂ ಇಲ್ಲ. ಇದನ್ನೆಲ್ಲ ಸರಕಾರ ಅರ್ಥ ಮಾಡಿಕೊಂಡು ನಿರ್ಧಾರ ತೆಗೆದುಕೊಳ್ಳಲಿ ಎಂದರು.
R. Ashok: ನವೆಂಬರ್ ಬಳಿಕ ಕಾಂಗ್ರೆಸ್ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.