ಶೋಷಿತರಿಗೆ ಮೀಸಲಾತಿ ಕೈ ತಪ್ಪುವ ಭೀತಿ


Team Udayavani, Mar 15, 2021, 1:53 PM IST

Untitled-1

ಹಾಸನ: ಶೋಷಿತ ವರ್ಗಗಳ ಪರಿಸ್ಥಿತಿ ಶೋಚನೀಯವಾಗುತ್ತಿದ್ದು, ಮೀಸಲಾತಿಯನ್ನು ಕಳೆದುಕೊಳ್ಳು ಪರಿಸ್ಥಿತಿ ನಿರ್ಮಾಣವಾಗಿದೆಎಂದು ಚಿಂತಕ ಹಾಗೂ ನಿವೃತ್ತ ಪ್ರಾಂಶುಪಾಲ ಎಚ್‌.ಎಂ.ರುದ್ರಸ್ವಾಮಿ ಆತಂಕ ವ್ಯಕ್ತಪಡಿಸಿದರು.

ನಗರದ ಅಂಬೇಡ್ಕರ್‌ ಭವನದಲ್ಲಿ ಕರ್ನಾಟಕ ದಲಿತ ಚಳವಳಿಯ ನಾಯಕ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕರಲ್ಲೊಬ್ಬರಾಗಿದ್ದ ದಿವಂಗತ ಬಿ.ವಿ.ಚಂದ್ರಪ್ರಸಾದ್‌ತ್ಯಾಗಿ ಅವರ 15ನೇ ಸಂಸ್ಮರಣೆ ಹಾಗೂ ಆರ್‌ .ಬಿ. ಮೋರೆ ಮತ್ತು ಡಾ.ಆನಂದ ತೇಲ್ತುಂಬೆ ಅವರ “ಮಹಾಡ್‌ ಕೆರೆ ಸತ್ಯಾಗ್ರಹ ಮತ್ತುಮಹಾಡ್‌ ಮೊದಲ ದಲಿತ ಬಂಡಾಯ ಕೃತಿಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಮೀಸಲಾತಿಯ ಗದ್ದಲ ಜೋರಾಗಿದೆ. ಸಾಮಾನ್ಯ ವರ್ಗದಲ್ಲಿರುವವರು ಬಿಸಿಎಂಗೆ ಬರಲುಮುಂದಾದರೇ, ಬಿಸಿಎಂ ಸಮುದಾಯದವರು ಎಸ್ಸಿಗೆ ಬರಬೇಕೆಂದು, ಎಸ್‌ಟಿಯವರು ಎಸ್‌ಇಗೆ ಬರುವ ತವಕದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಚಂದ್ರ ಪ್ರಸಾದ್‌ ತ್ಯಾಗಿ ಅವರುಇದ್ದರೇ ಸರ್ಕಾರದ ವಿರುದ್ಧ ಪ್ರಬಲ ಹೋರಾಟಕ್ಕಿಳಿಯುತ್ತಿದ್ದರು ಎಂದು ಎಚ್ಚರಿಕೆ ನೀಡಿದರು.

ಧ್ವನಿ ಇಲ್ಲದಂತೆ ಮಾಡಿದ್ದಾರೆ: ಇಂದು ಸಂವಿಧಾನದ ಆಶಯ ಈಡೇರಿಸುವ ಭರವಸೆ ನೀಡಿ ಅಧಿಕಾರಕ್ಕೆ ಬಂದವರು ಭಾರತೀಯರಿಗೆ ಧ್ವನಿ ಇಲ್ಲದಂತೆ ಮಾಡಿದ್ದಾರೆ. ದೇಶ ಭಕ್ತಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಮಹಿಳೆ ಯರ ಮೇಲೆ ಬಡವರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಈ ಬೆಳವಣಿಗೆ ಯನ್ನು ಗಮನಿಸಿದರೆ ದೇಶ ಸಾಗುತ್ತಿರುವ ಮಾರ್ಗ ಭಯಾನಕವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸಮಾಜವಾದಿ ಚಳವಳಿ ಶುರು: ಶೋಷಿತ ಸಮುದಾಯಗಳಿಗೆ ಅನ್ಯಾಯವಾಗುವುದುಕಂಡು ಬಂದರೆ ತಕ್ಷಣದಲ್ಲಿ ಹೋರಾಟಕ್ಕಿಳಿದುನ್ಯಾಯ ಕೊಡಿಸುತ್ತಿದ್ದ ಅಪರೂಪದ ನಾಯಕ ಬಿ.ವಿ.ಚಂದ್ರಪ್ರಸಾದ್‌ ತ್ಯಾಗಿ ಎಂದ ಅವರು,ದಲಿತರ ನಾಗರಿಕಗಳ ಹಕ್ಕುಗಳಿಗಾಗಿ ಹಾಸನಜಿಲ್ಲೆಯಲ್ಲಿ ಒಂದು ಸಂಚಲನ ಪ್ರಾರಂಭವಾಗಿದ್ದೇ ಸಮಾಜವಾದಿ ಅಂದೋಲನದಿಂದಒಡನಾಡಿಗಲಾಗಿದ್ದ ತ್ಯಾಗಿ ಅವರಂತಹನಾಯಕ ಕಾಲದಲ್ಲಿ. ಪ್ರೊ.ಎಂ.ಡಿ. ನಂಜುಂಡಸ್ವಾಮಿ, ಪಿ.ಲಂಕೇಶ್‌, ಕೆ.ಪಿ. ಪೂರ್ಣಚಂದ್ರತೇಜಸ್ವಿಯಂತಹ ಇನ್ನು ಅನೇಕರಿಂದ ಸಮಾಜವಾದಿ ಚಳವಳಿ ಶುರು ವಾಯಿತು ಎಂದು ಸ್ಮರಿಸಿದರು.

ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಸಂಚಾಲಕ ಎಂ.ಜಿ.ಪೃಥ್ವಿ, ದಲಿತ್‌ ಶೋಷಣ್‌ ಮುಕ್ತಿ ಮಂಚ್‌ ಅಖೀಲ ಭಾರತ ಸಮಿತಿ ಸದಸ್ಯ ಎನ್‌.ನಾಗರಾಜು, ಎವಿಕೆ ಕಾಲೇಜು ಸಹಪ್ರಾ ಧ್ಯಾಪಕ ಡಾ.ಸಿ.ಚ.ಯತೀಶ್ವರ್‌, ಚಿತ್ರಕಲಾವಿದಕೆ.ಟಿ.ಶಿವಪ್ರಸಾದ್‌, ದಲಿತ ಸಂಘರ್ಷ ಸಮಿತಿಕೃಷ್ಣದಾಸ್‌, ಹಿರಿಯ ರೈತ ಮುಖಂಡ ಎಸ್‌. ಎನ್‌.ಮಂಜುನಾಥ್‌ ದತ್ತ, ದಲಿತಸಂಘಟನೆಗಳ ಮುಖಂಡರಾದ ನಾರಾಯಣದಾಸ್‌, ಎಚ್‌.ಕೆ.ಸಂದೇಶ್‌, ಕೆ.ಈರಪ್ಪ, ರಾಜಶೇಖರ್‌, ಸಿಐಟಿಯು ಮುಖಂಡಧರ್ಮೇಶ್‌, ಜಿ.ಚಂದ್ರಶೇಖರ್‌, ಪ್ರಮೀಳಾ, ಕೊಟ್ಟೂರು ಶ್ರೀನಿವಾಸ್‌, ಅಂಬುಗ ಮಲ್ಲೇಶ್‌, ಮಾದಿಗ ದಂಡೋರ ಜಿಲ್ಲಾಧ್ಯಕ್ಷ ಟಿ.ಆರ್‌. ವಿಜಯಕುಮಾರ್‌ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮಧು ಸೂದನ್‌ಸ್ವಾಗತಿಸಿದರು. ಬಿ.ಎಸ್‌.ಲಿಂಗರಾಜು ನಿರೂಪಿಸಿದರು.

 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.