ಕಟ್ಟಡ ಕಾರ್ಮಿಕರ ಪ್ರತಿಭಟನೆ


Team Udayavani, Dec 13, 2018, 4:05 PM IST

has-1.jpg

ಹಾಸನ: ಕಾರ್ಮಿಕರಿಗೆ ಸೌಲಭ್ಯಗಳನ್ನು ಮಂಜೂರು ಮಾಡುವಲ್ಲಿ ಆಗುತ್ತಿರುವ ವಿಳಂಬ ವಿರೋಧಿಸಿ ಎಐಟಿಯುಸಿ ನೇತೃತ್ವದಲ್ಲಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಅರಳೀಕಟ್ಟೆ ವೃತ್ತದ ಬಳಿ ಇರುವ ಕಾರ್ಮಿಕ ಇಲಾಖೆ ಕಚೇರಿ ಬಳಿ ಕೆಲ ಕಾಲ ಪ್ರತಿಭಟನೆ ನಡೆಸಿದ ಕಾರ್ಮಿಕರು ಸಹ್ಯಾದ್ರಿವೃತ್ತ, ಹೇಮಾವತಿ ಪ್ರತಿಮೆ ಬಳಿ ಮೂಲಕ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಆವರಣಕ್ಕೆ ತೆರಳಿ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಎಐಟಿಯುಸಿ ಹಾಗೂ ಇತರ ಕಟ್ಟಡ ಕಾರ್ಮಿಕ ಸಂಘಟನೆಗಳ ಹೋರಾಟಗಳ ಪರಿಣಾಮ ವಾಗಿ ರಾಜ್ಯ ಸರ್ಕಾರ ಕ್ಷೇಮಾಭಿ ವೃದ್ಧಿ ಮಂಡಳಿಯನ್ನು ರಚಿಸಿದೆ. ರಾಜ್ಯಾದ್ಯಂತ ಲಕ್ಷಾಂತರ ಮಂದಿ ಕಟ್ಟಡ ಕಾರ್ಮಿಕರು
ಅದರ ಪ್ರಯೋಜನ ಪಡೆಯುತ್ತಿದ್ದಾರೆ. ಎಂದರು.

ಇತ್ತೀಚಿನ ದಿನಗಳಲ್ಲಿ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯು ಕಾರ್ಮಿಕರಿಗೆ ಸವಲತ್ತುಗಳನ್ನು ಒದಗಿಸದೇ ಕಟ್ಟಡ ಕಾರ್ಮಿಕರನ್ನು ಕಡೆಗಣಿಸುತ್ತಿವೆ ಎಂದು ಆಪಾದಿಸಿದರು. ಅಪಘಾತ ಪರಿಹಾರವನ್ನು ಮಂಜೂರು ಮಾಡುವಲ್ಲಿ ವೈದ್ಯಕೀಯ ವೆಚ್ಚಗಳನ್ನು ಹಾಗೂ ವಿದ್ಯಾರ್ಥಿ ವೇತನಗಳನ್ನು ಮಂಜೂರು ಮಾಡುವಲ್ಲಿ ವರ್ಷಾನುಗಟ್ಟಲೆ ವಿಳಂಬವಾಗುತ್ತಿದ್ದು, ಫ‌ಲಾನುಭವಿಗಳು ಪರದಾಡುವಂತಾಗಿದೆ ಎಂದು ದೂರಿದರು.

ಭ್ರಷ್ಟಾಚಾರ ನಿಯಂತ್ರಿಸಿ: ಕಾರ್ಮಿಕ ಇಲಾಖೆಯ ಕೆಲವು ನೌಕರರಲ್ಲಿನ ಭ್ರಷ್ಟಾಚಾರ, ಅಸಹನೆಯ ವರ್ತನೆಗಳಿಂದ ಸವಲತ್ತುಗಳು ಕಾರ್ಮಿಕರಿಗೆ ದೊರೆಯಲು ವಿಳಂಬವಾಗುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಾರ್ಮಿಕ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಕಾರ್ಯ ವೈಖರಿಯನ್ನು ಬದಲಾಯಿ ಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಕಾರ್ಮಿಕ ನಿಧಿ ನರೇಗಾಕ್ಕೆ ಬೇಡ: ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ನಿಧಿಯನ್ನು ನರೇಗಾ ಕಾರ್ಮಿಕರಿಗೆ ಬಳಸಕೂಡದು. ಹೃದ್ರೋಗ, ಕಿಡ್ನಿ ಕಸಿ, ಮೂಳೆ ಶಸ್ತ್ರಚಿಕಿತ್ಸೆ,
ಪಿತ್ತಕೋಶದಲ್ಲಿ ಕಲ್ಲು ತೆಗೆಯುವುದು ಮತ್ತಿತತರ ರೋಗಳಿಗೆ ಮಂಡಳಿಯು ನೇರವಾಗಿ ಚಿಕಿತ್ಸಾ ವೆಚ್ಚವನ್ನು ದಾಖಲಾದ ಆಸತ್ರೆಗೆ ಭರಿಸಿಕೊಡಬೇಕು. ಭಾಗ್ಯಲಕ್ಷ್ಮೀ ಬಾಂಡ್‌ ಕೊಡುವುದನ್ನು ನಿಲ್ಲಿಸಿ, ಮದುವೆ ನಿಮಿತ್ತದ ಸಹಾಯಧನವನ್ನು ಫ‌ಲಾನುಭಗಳಿಗೆ ನೇರವಾಗಿ ನೀಡಬೇಕು ಎಂದು ಮನವಿ ಮಾಡಿದರು.

ಅರ್ಜಿಗೆ ಹಿಂಬರಹ ನೀಡಿ: ಕಟ್ಟಡ ಕಾರ್ಮಿಕರ ಸೌಲಭ್ಯಗಳನ್ನು ಕೇಳಿ ಸಲ್ಲಿಸಿದ ಅರ್ಜಿಗಳನ್ನು ಹಿಂಬರಹ ನೀಡದೆ ತಿರಸ್ಕೃತಗೊಳಿಸುತ್ತಿದ್ದು ಅರ್ಜಿದಾರರಿಗೆ ಸೂಕ್ತ
ಮಾಹಿತಿಯನ್ನು ಹಿಂಬರಹದ ಮೂಲಕ ನೀಡಬೇಕು. ಅಲ್ಲದೆ ಆಯಾಯ ತಾಲೂಕು ಕಚೇರಿಗಳಲ್ಲಿ ಅವುಗಳಲ್ಲಿ ಸರಿಪಡಿಸಿ ನಂತರ ಪೂರ್ಣಗೊಂಡ ಅರ್ಜಿಗಳನ್ನು ಮುಂದಕ್ಕೆ ರವಾನಿಸಬೇಕು. ನೋಂದಣಿ ಹಾಗೂ ನವೀಕರಣಕ್ಕೆ ಹಲವು ಕಾರ್ಮಿಕರ ವಂತಿಗೆಯನ್ನು ಒಂದೆ ಚಲನ್‌ನಲ್ಲಿ ತುಂಬಲು ಸಂಘಟನೆಗಳಿಗೆ ಅವಕಾಶ ನೀಡಬೇಕು.

ಏಕೆಂದರೆ ಬ್ಯಾಂಕ್‌ಗಳಲ್ಲಿ ಬಿಡಿ ಬಿಡಿಯಾಗಿ ಚಲನ್‌ಗಳನ್ನು ಕಟ್ಟಿಸಿಕೊಳ್ಳದೆ ಸತಾಯಿಸಲಾಗುತ್ತಿದೆ. ಫ‌ಲಾನುಭಗಳಿಗೆ ಸಕಾಲ ಯೋಜನೆಯಡಿ ನಿಗದಿತ ಸಮಯ ದೊಳಗೆ ಕಾರ್ಡ್‌ಗಳನ್ನು ವಿತರಿಸಬೇಕೆಂದು ಒತ್ತಾಯಿಸಿದರು. ಎಐಟಿಯುಸಿ ಮುಖಂಡ ಎಂ.ಸಿ. ಡೋಂಗ್ರೆ, ಮಲೆನಾಡು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಎಚ್‌.ಸ್ವಾಮಿ, ರಾಜ್ಯ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಮಂಜೇಗೌಡ, ಜೈಮಾರುತಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಸಂಘದ ರಾಜಣ್ಣ, ಹಾಸನಾಂಬಾ ಸಂಘದ ಶಶಿಧರ, ಕಾಳಿಕಾಂಬ ಕಾರ್ಮಿಕರ ಸಂಘದ ಅಧ್ಯಕ್ಷ ಗಣೇಶ್‌ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕಾರ್ಮಿಕರಿಗೆ ಗುರುತಿನ ಚೀಟಿ ನೀಡಿ
ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳ ಅಡಿಯಲ್ಲಿ ನಿವೇಶನ ಮತ್ತು ವಾಸಿಸಲು – ಮನೆಗಳನ್ನು ಮಂಜೂರು ಮಾಡಬೇಕು. ನೋಂದಣಿಯಾದ ಕಟ್ಟಡ ಕಾರ್ಮಿಕರಿಗೆ ಗುರುತಿನ ಕೊಡದೇ ವಿಳಂಬ ನೀತಿಯನ್ನು ಅನುಸರಿಸಲಾಗುತ್ತಿದೆ. ಮಹಿಳಾ ಕಟ್ಟಡ ಕಾರ್ಮಿಕರಿಗೆ ನೋಂದಣಿಯಾಗಿ ಮೂರು ವರ್ಷ ಕಳೆದರೂ ಹೆರಿಗೆ ಧನ ಸಹಾಯ ಮಂಜೂರಾಗಿಲ್ಲ. ಇದನ್ನು ಪರಿಶೀಲಿಸಿ ತಕ್ಷಣ ಮಂಜೂರು ಮಾಡಬೇಕು. ಕಾರ್ಮಿಕರು ನೋಂದಣಿಯಾಗಿ 11 ವರ್ಷ ಕಳೆದರೂ ಸಹ ಅವರಿಗೆ ಕೆಲಸದ ಸಾಮಗ್ರಿಗಳನ್ನು ತೆಗೆದುಕೊಳ್ಳಲು ಸಹಾಯಧನ ನೀಡಿಲ್ಲ ಎಂದು ದೂರಿದರು. ಈ ಮೊದಲು ಜಿಲ್ಲಾ ಕೇಂದ್ರದಲ್ಲಿ ನೋಂದಣಿಯಾಗಿರುವ ಫ‌ಲಾನುಭವಿಗಳ ಮೂಲ ದಾಖಲೆಗಳನ್ನು ಆಯಾಯ ತಾಲೂಕು ವೃತ್ತಗಳಿಗೆ ವರ್ಗಾಯಿಸಬೇಕು. ತಾಲೂಕು ವೃತ್ತಗಳಲ್ಲಿ ಖಾಲಿ ಇರುವ ಕಾರ್ಮಿಕ ನಿರೀಕ್ಷಕ ಹುದ್ದೆಗಳನ್ನು ಭರ್ತಿ ಮಾಡಿ ಕಾಯಂ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.