ಹುತಾತ್ಮರ ದಿನದಂದು ಸಂಭ್ರಮ: ಕಾಂಗ್ರೆಸ್‌ ಪ್ರತಿಭಟನೆ


Team Udayavani, Feb 5, 2019, 7:10 AM IST

hutatma.jpg

ಹಾಸನ: ಹುತಾತ್ಮರ ದಿನವಾದ ಜ.30 ರಂದು ಉತ್ತರ ಪ್ರದೇಶದಲ್ಲಿ ಮಹಾತ್ಮಗಾಂಧೀಜಿಯವ ಹತ್ಯೆಯ ಅಣಕು ನಡೆಸಿ ಹಿಂದೂ ಮಹಾಸಭಾ ಮತ್ತು ಬಿಜೆಪಿ ಕಾರ್ಯಕರ್ತರು ದವರು ಸಂಭ್ರಮಿಸಿದ್ದಾರೆಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ದಿನ ಜ.30ರಂದು ಹುತಾತ್ಮರಾದ ದಿನದಂದು ಹತ್ಯೆ ಮಾಡಿದ ನಾಥೂರಾಮ್‌ ಗೋಡ್ಸೆಗೆ ಜೈಕಾರ ಹಾಕಿರುವವರ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪಕ್ಷದಿಂದ ಅಂಬೇಡ್ಕರ್‌ ಪ್ರತಿಮೆ ಕೆಳಗೆ ಪ್ರತಿಭಟನೆ ಮಾಡಿ ಆಕ್ರೋಶವ್ಯಕ್ತಪಡಿಸಲಾಯಿತು.

ಅಂಬೇಡ್ಕರ್‌ ಪ್ರತಿಮೆ ಬಳಿ ಧರಣಿ: ನಗರದ ಬಿ.ಎಂ. ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್‌ ಪಕ್ಷದ ಕಚೇರಿಯಿಂದ ಮೆರವಣಿಗೆ ಹೊರಟ ಕಾಂಗ್ರೆಸ್‌ ಮುಖಂಡರು ಮತ್ತು ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಅಂಬೇಡ್ಕರ್‌ ಪ್ರತಿಮೆ ಬಳಿ ಧರಣಿ ನಡೆಸಿದರು. ಹಿಂದೂ ಮಹಾಸಭಾದವರು ಗಾಂಧೀಜಿಯವರ ಪ್ರತಿಕೃತಿಗೆ ಶೂಟ್ ಮಾಡಿ ನಾಥೂರಾಂಗೋಡ್ಸೆಗೆ ಜೈಕಾರ ಹಾಕಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ ಎಂದು ಆಕ್ರೋಶವ್ಯಕ್ತಪಡಿಸಿದರು.

ಗೋಡ್ಸೆ ವೈಭವೀಕರಣಕ್ಕೆ ಖಂಡನೆ: ಜಿಲ್ಲಾ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಜಾವಗಲ್‌ ಮಂಜುನಾಥ್‌ ಮಾತ ನಾಡಿ, ಮಹಾತ್ಮಗಾಂಧೀಜಿ ಹತ್ಯೆಯಾದ ದಿನವನ್ನು ದೇಶದಲ್ಲಿ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತಿದೆ. ವಿಶ್ವವೇ ಗಾಂಧೀಜಿಯವರನ್ನು ಒಪ್ಪಿಕೊಂಡಿದೆ. ಆದರೆ ಬಿಜೆಪಿಯನ್ನು ಬೆಂಬಲಿಸುತ್ತಿರುವ ಸಂಘಟನೆಗಳು ಈ ಬಾರಿ ಹುತಾತ್ಮರ ದಿನ ಆಚರಣೆಯಲ್ಲಿ ಹಿಂದೂ ಮಹಾಸಭಾದವರು ಗಾಂಧೀಜಿಯವರ ಪ್ರತಿಕೃತಿಗೆ ಶೂಟ್ ಮಾಡುವುದರ ಮೂಲಕ ಮತ್ತು ನಾಥೂರಾಂಗೋಡ್ಸೆಯನ್ನು ವೈಭವೀಕರಿಸಿ ವಿಕೃತಿ ಮೆರೆದಿದ್ದಾರೆ. ಇದು ದೇಶವೇ ದೇಶ ತಲೆತಗ್ಗಿಸುವ ವಿಚಾರವಾಗಿದೆ. ಎಐಸಿಸಿ ಅಧ್ಯಕಷ ರಾಹುಲ್‌ಗಾಂಧಿಯವರ ಕರೆಯಂತೆ ಇಂದು ದೇಶಾದ್ಯಂತ ಮೌನ ಪ್ರತಿಭಟನೆ ನಡೆಯುತ್ತಿದೆ ಎಂದರು.

ರಾಷ್ಟ್ರದ್ರೋಹದ ಕೃತ್ಯ: ರಾಜ್ಯಸಭಾ ಮಾಜಿ ಸದಸ್ಯ ಎಚ್.ಕೆ. ಜವರೇಗೌಡ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ವನ್ನು ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಯವರ ಹತ್ಯೆ ದಿನವನ್ನು ಹುತಾತ್ಮ ದಿನಾಚರಣೆ ಯನ್ನಾಗಿ ಆಚರಿಸಿ ಹುತಾತ್ಮರಿಗೆ ಮುಕ್ತಿ ಸಿಗಲಿ ಎನ್ನುವ ಪ್ರಾರ್ಥಿಸುವ ದಿನದಂದು ಗಾಂಧೀಜಿಯವರ ಹತ್ಯೆನ್ನು ಸಂಭ್ರಮಿಸುವ ಮನಸ್ಥಿತಿಯು ರಾಷ್ಟ್ರ ದ್ರೋಹದ ಕೃತ್ಯ. ಇಂತಹವರು ಭಾರತದಲ್ಲಿರಲು ಯೋಗ್ಯರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಣಕು ಪ್ರದರ್ಶನ ನಡೆಸಿದವರು ಹಾಗೂ ಅದರ ಹಿಂದೆ ಇರುವವರನ್ನು ಬಂಧಿಸಿ ದೇಶದಲ್ಲಿ ಇಂತಹ ವಿಕೃತಿಗಳು ಮತ್ತೆ ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದೂ ಅವರು ಒತ್ತಾಯಿಸಿದರು. ವಿಧಾನ ಪರಿಷತ್‌ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಶ್ವೇತಾ, ಮಾಜಿ ಶಾಸಕ ಸಿ.ಎಸ್‌. ಪುಟ್ಟೇಗೌಡ, ಕಾಂಗ್ರೆಸ್‌ ಮುಖಂಡ ಎಚ್.ಕೆ. ಮಹೇಶ್‌, ಬಾಗೂರು ಮಂಜೇಗೌಡ, ಅಸ್ಲಾಂ ಪಾಷಾ, ತಮ್ಲಾಪುರ ಗಣೇಶ್‌, ಮುಬಾಷೀರ ಅಹಮದ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal-revanna

Hasana Pendrive Case; ಪ್ರಜ್ವಲ್‌ ಸಮರ್ಥ ಪುರುಷ: ವೈದ್ಯಕೀಯ ವರದಿ

Murder-Represent

Hasana: ಪತ್ನಿಯ ಕೊಂದ ಪಿಸಿಗೆ ಅಕ್ರಮ ಸಂಬಂಧ ?

Hassan ಕಾರು ಪಲ್ಟಿಯಾಗಿ ಮಹಿಳೆ ಸಾವು; ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ

Hassan ಕಾರು ಪಲ್ಟಿಯಾಗಿ ಮಹಿಳೆ ಸಾವು; ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.