
15ಕ್ಕೆ ಕಾಮಗಾರಿಗಳಿಗೆ ಸಿಎಂ ಚಾಲನೆ
Team Udayavani, Feb 11, 2019, 7:23 AM IST

ಚನ್ನರಾಯಪಟ್ಟಣ: ತಾಲೂಕಿನ ದಂಡಿನಗಹಳ್ಳಿ ಹೋಬಳಿ ಎರಡು ಪ್ರಮುಖ ಏತನೀರಾವರಿಗೆ ಫೆ.15ರಂದು ಮುಖ್ಯ ಮಂತ್ರಿ ಕುಮಾರಸ್ವಾಮಿ ಶಂಕುಸ್ಥಾಪನೆ ಮಾಡುವ ಮೂಲಕ ಈ ಭಾಗದ ನೀರಿನ ಸಮಸ್ಯೆ ಬಗೆ ಹರಿಸಲಿದ್ದಾರೆ ಎಂದು ಜಿಲ್ಲಾ ಮಂತ್ರಿ ಎಚ್.ಡಿ. ರೇವಣ್ಣ ಭರವಸೆ ನೀಡಿದರು.
ತಾಲೂಕಿನ ಉದಯಪುರ ಗ್ರಾಮದಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಯ ನೂತನ ಕಟ್ಟಡ ಶಂಕುಸ್ಥಾಪನೆ ಹಾಗೂ ಪ್ರಥಮ ದರ್ಜೆ ಕಾಲೇಜಿನ ಕೊಠಡಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಈಗಾಗಲೇ ದೋಸ್ತಿ ಸರ್ಕಾರದ ಬಜೆಟ್ನಲ್ಲಿ ದಂಡಿಗನಹಳ್ಳಿ ಹೋಬಳಿ ಕಾಚೇನಹಳ್ಳಿ ಏತನೀರಾವರಿಗೆ 100 ಕೋಟಿ ರೂ., ಆಲಗೊಂಡನಹಳ್ಳಿ ಏತ ನೀರಾವರಿಗೆ 41 ಕೋಟಿ ರೂ. ಮೀಸಲಿಡಲಾಗಿದೆ.
ಚುನಾವಣೆ ವೇಳೆ ನಾನು ಹಾಗೂ ಕುಮಾರಸ್ವಾಮಿ ಹೋಬಳಿ ಜನ ತೆಗೆ ಭರವಸೆ ಈಡೇರಿಸಿದ್ದೇವೆ ಎಂದರು. ಶೀಘ್ರದಲ್ಲಿ ಕಾಮಗಾರಿ ಮುಕ್ತಾಯ ಮಾಡಿ ಎರಡನೇ ಹಂತದ ಎಲ್ಲಾ ಕೆರೆಗಳಿಗೆ ನೀರು ಹರಿಸಲಾಗುವುದು ಎಂದು ಹೇಳಿದರು.
ಉದಯಪುರದ ಬಾಲಕಿರ ವಸತಿ ನಿಲಯ ಆರಂಭಿಸಿ ದಂಡಿಗನಹಳ್ಳಿ ಹೋಬಳಿಯ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಲಾಗು ವುದು. ಲೋಕೋಪಯೋಗಿ ಇಲಾಖೆಗೆ ಹೆಚ್ಚಿನ ಅನುದಾನ ನೀಡಿದ್ದು, ಹೋಬಳಿಯ ಎಲ್ಲಾ ಗ್ರಾಮಗಳ ರಸ್ತೆ ಡಾಂಬರೀಕರಣ ಮಾಡಲಾಗುವುದು ಎಂದರು.
ತಹಶೀಲ್ದಾರ್ ಜೆ.ಬಿ.ಮಾರುತಿ, ತಾಪಂ ಇಒ ಚಂದ್ರಶೇಖರ್, ಹಾಸನ ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಪುಟ್ಟಸ್ವಾಮಿ, ಎಪಿಎಂಸಿ ನಿರ್ದೇಶಕ ರಂಗಸ್ವಾಮಿ ಇದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Save Life: ಚಾರ್ಮಾಡಿ ಘಾಟ್ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.