![supreme-Court](https://www.udayavani.com/wp-content/uploads/2025/02/supreme-Court-5-415x249.jpg)
![supreme-Court](https://www.udayavani.com/wp-content/uploads/2025/02/supreme-Court-5-415x249.jpg)
Team Udayavani, Jun 12, 2019, 12:31 PM IST
ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ 75ರ ಅಭಿವೃದ್ಧಿ ಕಾಮಗಾರಿಯನ್ನು ವಿನಾಕಾರಣ ತಡ ಮಾಡಲಾಗುತ್ತಿದ್ದು, ಕೂಡಲೇ ಕಾಮಗಾರಿಯನ್ನು ವೇಗವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಭಜರಂಗದಳ ರಾಜ್ಯ ಸಹ ಸಂಯೋಜಕ ರಘು ಒತ್ತಾಯಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಶಾಸಕ ಎಚ್.ಕೆ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ ನಂತರ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ 75ರ ಅಭಿವೃದ್ಧಿ ಕಾಮಗಾರಿ ತಾಲೂಕು ವ್ಯಾಪ್ತಿಯಲ್ಲಿ ಮಂದಗತಿಯಲ್ಲಿ ಸಾಗುತ್ತಿದ್ದು ಇದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು, ಮುಂತಾದ ಧಾರ್ಮಿಕ ಸ್ಥಳಗಳಿಗೆ ಭಕ್ತಾದಿಗಳು ಹೋಗಲು ಅನಾನು ಕೂಲವಾಗಿದೆ. ಹೆದ್ದಾರಿಯಲ್ಲಿ ಅಭಿವೃದ್ಧಿ ಕಾಮಗಾರಿ ಆರಂಭಿಸಿ ಸುಮಾರು 2 ವರ್ಷಗಳಾಗುತ್ತಿದೆ. ಆದರೆ ಕಾಮಗಾರಿ ಕುಂಟುತ್ತಾ ಸಾಗುತ್ತಿದೆ ಎಂದರು.
ಭೂ ಕುಸಿತದಿಂದ ತೊಂದರೆ: ಕಳೆದ ಮಳೆಗಾಲದಲ್ಲಿ ಹೆದ್ದಾರಿಯಲ್ಲಿ ಭೂ ಕುಸಿತ ಉಂಟಾಗಿ ಹಲವು ಕಡೆಗಳಲ್ಲಿ ಅಪಾಯ ಸಂಭವಿಸಿತ್ತು. ಆದರೂ ಸಹ ಯಾವುದೇ ಸುರ ಕ್ಷತಾ ಕ್ರಮಗಳನ್ನು ಅಧಿಕಾರಿಗಳು ಕೈಗೊಂಡಿಲ್ಲ. ಆದ್ದರಿಂದ ಹೆದ್ದಾರಿಯಲ್ಲಿ ಯಾವುದೇ ಅವಘಡಗಳು ಸಂಭವಿಸ ದಂತೆ ರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸಲು ಶಾಸಕರು ಕ್ರಮ ಕೈಗೊಳ್ಳಬೇಕು ಎಂದರು.
ಪುರಸಭೆ ಮಳಿಗೆ ಹರಾಜು ಮಾಡಿ: ಪುರಸಭೆಯ ಮಾಜಿ ಅಧ್ಯಕ್ಷರೊಬ್ಬರು ಅನಧಿಕೃತವಾಗಿ ಪುರಸಭೆಯ ಮಳಿಗೆಗಳನ್ನು ತಮಗೆ ಬೇಕಾದವರಿಗೆ ಬಾಡಿಗೆ ನೀಡಿದ್ದು ಇದರಿಂದ ಪುರಸಭೆಗೆ ಬರಬೇಕಾದ ಆದಾಯಕ್ಕೆ ಧಕ್ಕೆ ಉಂಟಾಗಿದೆ. ಕೂಡಲೇ ಈ ಮಳಿಗೆಗಳನ್ನು ಹರಾಜು ಮಾಡುವ ಮೂಲಕ ಪುರಸಭಾ ಆಡಳಿತ ವರ್ಗ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದಲ್ಲಿ ಪುರಸಭೆ ಮುಂಭಾಗ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.
ಶಾಸಕರ ಭರವಸೆ: ಮನವಿ ಸ್ವೀಕರಿಸಿದ ಶಾಸಕ ಎಚ್.ಕೆ ಕುಮಾರಸ್ವಾಮಿ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿ ತಡವಾಗಿರುವುದು ನನ್ನ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಕಾಮಗಾರಿಯನ್ನು ವೇಗವಾಗಿ ಮಾಡುವಂತೆ ಸೂಚಿಸಲಾಗುವುದು ಹಾಗೂ ಈ ಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೂ ಸಹ ತರ ಲಾಗುವುದು ಎಂದರು. ಭಜರಂಗದಳ ಮುಖಂಡರಾದ ಶ್ರೀಜಿತ್, ಶ್ರೀಕಾಂತ್, ಕೌಶಿಕ್, ಆಟೋ ಲೋಕೇಶ್, ನಿಖೀಲ್ ಬೆಳಗೋಡು ಮುಂತಾದವರು ಹಾಜರಿದ್ದರು.
R. Ashok: ನವೆಂಬರ್ ಬಳಿಕ ಕಾಂಗ್ರೆಸ್ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್ ಅಪರಾಧವಲ್ಲ: ಸುಪ್ರೀಂಕೋರ್ಟ್
Modern City: ದುಬಾೖ ಮಾದರಿ ದೇಶದಲ್ಲೂ ಫಿನ್ಟೆಕ್ ಸಿಟಿ ನಿರ್ಮಾಣ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
You seem to have an Ad Blocker on.
To continue reading, please turn it off or whitelist Udayavani.