2ನೇ ಹಂತದಲಿ ಕೊರೊನಾ ಲಸಿಕೆ ನೀಡಲು ಸಿದ್ಧತೆ

ಪೊಲೀಸ್‌, ಕಂದಾಯ, ಗೃಹ ರಕ್ಷಕ, ಆರ್‌ಡಿಪಿಆರ್‌ ಇಲಾಖೆ ಅಧಿಕಾರಿ, ಸಿಬ್ಬಂದಿಗೆ ಲಸಿಕೆ ನೀಡಿ: ವಂದಿತಾ ಶರ್ಮಾ ಸೂಚನೆ

Team Udayavani, Feb 7, 2021, 2:19 PM IST

corona vacin

ಹಾಸನ: ಎರಡನೇ ಹಂತದಲ್ಲಿ ಪೊಲೀಸ್‌, ಕಂದಾಯ,ಗೃಹ ರಕ್ಷಕರು, ಗ್ರಾಮೀಣಾಭಿವೃದ್ಧಿ ಮತ್ತು ಗ್ರಾಮ ಪಂಚಾಯತ್‌ ಇಲಾಖೆಗಳ ಅಧಿಕಾರಿಗಳು ಮತ್ತು ನೌಕರರಿಗೆ ಲಸಿಕೆ ನೀಡಬೇಕು ಎಂದು ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದ ಜಿಲ್ಲಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶನಿವಾರ ವಿಡಿಯೋ ಸಂವಾದ ನಡೆಸಿದ ಅವರು, ಕೊರೊನಾ ಲಸಿಕೆಯನ್ನು ಪೊಲೀಸ್‌ ಸಿಬ್ಬಂದಿಗೆ ನೀಡಿ ನಂತರ ಇತರೆ ಆರೋಗ್ಯ  ಸಿಬ್ಬಂದಿ ಪ್ರೇರಣೆಗೊಂಡು ಲಸಿಕೆ ಹಾಕಿಸಿಕೊಳ್ಳಲು ಮುಂದಾಗುತ್ತಾರೆ ಹಾಗೂ ಲಸಿಕೆ  ಹಾಕಿಸಿಕೊಳ್ಳುವಂತೆ ಹೆಚ್ಚು ಪ್ರಚಾರ ಮಾಡಿ ಎಂದು ನಿರ್ದೇಶಿಸಿದರು.

ಪ್ರಾಮಾಣಿಕರಿಸಿದ ನಂತರವೇ ಲಸಿಕೆ: ಕೊರೊನಾ ಲಸಿಕೆ ಹಾಕಿಸಿಕೊಳ್ಳುವುದು ಸ್ವಯಂ ಪ್ರೇರಿತವಾಗಿದ್ದು, ಸೋಂಕಿನ ವಿರುದ್ಧ ತಮ್ಮನ್ನು ರಕ್ಷಿಸಿಕೊಳ್ಳುವ ಹಾಗೂ ತಮ್ಮ ನಿಕಟ ಸಂಪರ್ಕದಲ್ಲಿರುವ ಕುಟುಂಬ ಸದಸ್ಯರು, ಸ್ನೇಹಿತರು, ಸಂಬಂಧಿಕರು ಮತ್ತು ಸಹೋದ್ಯೋಗಿಗಳಿಗೆ ಸೂಕ್ತ ಲಸಿಕೆ ಹಾಕಲಾಗುತ್ತದೆ.  ಸುರಕ್ಷತೆ ಮತ್ತು ಪರಿಣಾಮದ ಆಧಾರದ ಮೇಲೆ ನಿಯಂತ್ರಣ ಸಂಸ್ಥೆಗಳು ಅದನ್ನು ಪ್ರಾಮಾಣಿಕರಿಸಿದ ನಂತರವೇ ಲಸಿಕೆ ನೀಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

8 ವಾರ ಮುಂದೂಡಬಹುದು: ನಿಗದಿ ಪಡಿಸಲಾದ ಲಸಿಕೆಯ ಸಂಪೂರ್ಣ ಡೋಸ್‌ಗಳನ್ನು  ಪಡೆಯುವುದು ಸೂಕ್ತ ಹಾಗೂ ಸೋಂಕಿನ ವಿರುದ್ಧ ರೋಗನಿರೋಧಕ ಶಕ್ತಿಯನ್ನು ಬೆಳೆಸಿಕೊಳ್ಳಲು ಲಸಿಕೆ ಹಾಕಿಸಿಕೊಳ್ಳುವುದು ಅಗತ್ಯ. ಸೋಂಕಿತ ಅಥವಾ ದೃಢಪಟ್ಟ ವ್ಯಕ್ತಿಯು ಲಸಿಕೆ ಹಾಕುವ ಸ್ಥಳದಲ್ಲಿ ಇತರರಿಗೆ ಹರಡುವ ಸಾಧ್ಯತೆ ಇರುವುದರಿಂದ ಸೋಂಕನ್ನು ಹೊಂದಿರುವ ವ್ಯಕ್ತಿಗಳು ಲಕ್ಷಣಗಳು ಕಡಿಮೆಯಾದ ನಂತರ 8 ವಾರಗಳ ಲಸಿಕೆ ಹಾಕಿಸಿಕೊಳ್ಳುವುದನ್ನು ಮುಂದೂಡಬಹುದು ಎಂದು ತಿಳಿಸಿದರು.

ಆನ್ಲೈನ್ ಮೂಲಕ ನೋಂದಣಿ: ಲಸಿಕೆಯನ್ನು ಪಡೆಯುವ ವ್ಯಕ್ತಿಯು ಭಾವಚಿತ್ರರುವ ಗುರುತಿನ ಚೀಟಿಯನ್ನು ನೋಂದಣಿ ಮಾಡಕೂಳ್ಳವುದು ಮತ್ತು ಲಸಿಕಾ ಪಡೆಯುವ ಸಮಯದಲ್ಲಿ ಗುರುತಿನ

ಚೀಟಿಯ ಪರಿಶೀಲನೆ ಅಗತ್ಯವಿರುತ್ತದೆ. ಲಸಿಕೆ ಪಡೆಯುವ ಫ‌ಲಾನುಭವಿಯು ಆನ್‌ಲೈನ್‌ ನೋಂದ ಣಿಯ ನಂತರ ತಮ್ಮ ನೋಂದಾಯಿತ ಮೊಬೈಲ್‌ ಸಂಖ್ಯೆಗೆ ನಿಗದಿತ ದಿನಾಂಕ, ಸ್ಥಳ ಮತ್ತು ಲಸಿಕೆ ನೀಡುವ ಸಮಯದ ಮಾಹಿತಿಯನ್ನು ಎಸ್‌ಎಂಎಸ್‌ ಮೂಲಕ ಪಡೆಯಬಹುದು ಎಂದು ವಿವರಿಸಿದರು.

ಇದನ್ನೂ ಓದಿ :ರಾಷ್ಟ್ರೀಯ ಹೆದ್ದಾರಿ ತಡೆದು ಹೋರಾಟ

ಲಸಿಕೆ ಪಡೆದವರಿಗೆ ಪತ್ರ: ಲಸಿಕೆಯ ಡೋಸ್‌ ಪಡೆದ ನಂತರ ಫ‌ಲಾನುಭವಿಗಳಿಗೆ ಅವರ  ನೋಂದಾಯಿಸಿದ ಮೊಬೈಲ್‌ ಸಂಖ್ಯೆಗೆ ಎಸ್‌ಎಂಎಸ್‌ ಸಂದೇಶ ಕಳುಹಿಸಲಾಗುತ್ತದೆ. ಸೂಚಿತ ಎಲ್ಲ ಡೋಸ್‌ ನೀಡಿಕೆ ನಂತರ ಕ್ಯೂ ಆರ್‌ ಕೋಡ್‌ ಇರುವ ಪತ್ರವನ್ನು ಸಹ ಕಳುಹಿಸಲಾಗುತ್ತದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಆರ್‌.ಗಿರೀಶ್‌, ಅಪರ ಜಿಲ್ಲಾಧಿಕಾರಿ ಕವಿತಾರಾಜಾರಾಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ಕುಮಾರ್‌, ತಹಶೀಲ್ದಾರ್‌ ಶಿವಶಂಕರಪ್ಪ ಹಾಜರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.