ಕೋಟಿ ರೂ. ವೆಚ್ಚದಲ್ಲಿ ಅಮಾನಿ ಕೆರೆ ಅಭಿವೃದ್ಧಿ
Team Udayavani, Sep 2, 2019, 3:32 PM IST
ಚನ್ನರಾಯಪಟ್ಟಣ ಅಮಾನಿಕೆರೆಗೆ ಶಾಸಕ ಬಾಲಕೃಷ್ಣ, ಬಾಗಿನ ಅರ್ಪಿಸಿದರು.
ಚನ್ನರಾಯಪಟ್ಟಣ: ಪಟ್ಟಣದ ಅಮಾನಿ ಕೆರೆಯನ್ನು ಒಂದು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಬಾಲಕೃಷ್ಣ ತಿಳಿಸಿದರು.
ಪಟ್ಟಣದ ಹೊರವಲಯದಲ್ಲಿರುವ ಅಮಾನಿಕೆರೆ ಭೂಮಿ ಕ್ಷೇಮಾಭಿವೃದ್ಧಿ ಸಂಘದಿಂದ ಬಾಗಿನ ಅರ್ಪಿಸಿ ಮಾತ ನಾಡಿದ ಅವರು, ಪಟ್ಟಣದ ಚರಂಡಿ ನೀರು ಕೆರೆಗೆ ಹೋಗದಂತೆ ತಡೆಯ ಲಾಗಿದೆ. ಸಾರ್ವಜನಿಕರ ಉಪಯೋಗ ಕ್ಕಾಗಿ 2 ಸೋಪಾನಕಟ್ಟೆ ನಿರ್ಮಾಣ ಮಾಡಲಾಗುವುದು. ಕೆರೆ ಸ್ವಚ್ಛತೆ ಅಗತ್ಯ ಇರುವ ಎಲ್ಲಾ ಕಾಮಗಾರಿ ಮಾಡಿಸ ಲಾಗುವುದು ಎಂದರು.
ಕೆರೆ ಒತ್ತುವರಿ ತೆರವು: ಯಾವುದೇ ಪ್ರಭಾವಿ ವ್ಯಕ್ತಿಗಳು ಕೆರೆಯನ್ನು ಒತ್ತುವರಿ ಮಾಡಿದ್ದರೂ ಮುಲಾಜಿಲ್ಲದೇ ತೆರವು ಗೊಳಿಸಲಾಗುವುದು. ಕೆರೆ ಉಳಿದರೆ ಮಾತ್ರ ನೀರಿನ ಸಮಸ್ಯೆ ಹೋಗಲಾಡಿ ಸಲು ಸಾಧ್ಯವಾಗುತ್ತದೆ. ಜೀವಜಲದ ಸಂಗ್ರಹ ತಾಣವಾಗಿರುವ ಕೆರೆಗಳ ಸ್ವಚ್ಛತೆ ಕಾಪಾಡಿಕೊಳ್ಳುವಲ್ಲಿ ಸ್ಥಳೀಯರ ಸಹ ಕಾರ ಬಹುಮುಖ್ಯ ಎಂದರು.
90 ಕೆರೆಗಳಿಗೆ ಹೇಮಾವತಿ ನೀರು: ಹೇಮಾವತಿ ನಾಲೆ ಮೂಲಕ ಕೆರೆ ತುಂಬಿ ಸುವ ಯೋಜನೆಯಡಿ ತಾಲೂಕಿನ 90 ಕೆರೆಗಳಿಗೆ ನೀರು ಹರಿಸಲಾಗಿದೆ. ನಾಲೆ ನೀರನ್ನು ಉಪಯೋಗಿಸಿ ಕೊಂಡು ಜೋಳ ಹಾಗೂ ರಾಗಿ ಬೆಳೆ ಮಾಡಲು ರೈತರು ಮುಂದಾಗಬೇಕು. ನವಿಲೆ, ಬಾಗೂರು ಏತನೀರಾವರಿ ಯೋಜನೆಯಡಿ ಕೆರೆಗಳಿಗೆ ನೀರು ಹರಿ ಸಲಾಗುತ್ತಿದೆ. 2 ದಿನದಲ್ಲಿ ಬಾಗೂರು ಕೆರೆ ಕೋಡಿ ಬೀಳಲಿದೆ. ನುಗ್ಗೇಹಳ್ಳಿ ಏತ ನೀರಾವರಿ ಯೋಜನೆ ಕಾಮಗಾರಿ ತ್ವರಿತವಾಗಿ ಸಾಗುತ್ತಿದ್ದು, ಇನ್ನೊಂದು ತಿಂಗಳಲ್ಲಿ ಕಾರ್ಯರಂಭ ಮಾಡಲಿದೆ ಎಂದು ತಿಳಿಸಿದರು.
ಕುರುವಂಕ ಹಾಗೂ ಗೊಲ್ಲರಹೊಸಹಳ್ಳಿ ಗ್ರಾಮದ ಕೆರೆಗೂ ಹೇಮಾವತಿ ಎಡದಂಡೆ ನಾಲೆಯಿಂದ ನೀರು ಹರಿಸಿದ್ದು, ಆ ಭಾಗದ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ. ಸಂತೆಶಿವರ ಹಾಗೂ ಅಗ್ರಹಾರ ಬೆಳಗುಲಿ ಗ್ರಾಮದ ಕೆರೆಗಳು ಇದೇ ಮೊದಲ ಬಾರಿಗೆ ತುಂಬಿವೆ ಎಂದರು.
ನೀರಿನ ವಿಷಯದಲ್ಲಿ ರಾಜಕೀಯ ಬೇಡ: ಕತ್ತರಿಘಟ್ಟ ಮೆಳಿಯಮ್ಮ ಆಧ್ಯಾತ್ಮಿಕ ಕೇಂದ್ರದ ಚಂದ್ರಶೇಖರ್ ಗುರೂಜಿ ಮಾತನಾಡಿ, ರೈತರು ಹಾಗೂ ನೀರಾವರಿ ವಿಷಯವಾಗಿ ರಾಜಕೀಯ ಮಾಡದೇ ಉತ್ತಮ ಆಡಳಿತ ನಡೆಸುವ ಶಾಸಕರು ನಮ್ಮಲ್ಲಿದ್ದಾರೆ. ತಾಲೂಕಿನ ಗ್ರಾಮೀಣ ಭಾಗದ ಕರೆಗಳು ತುಂಬಿಸುವ ನಿಟ್ಟಿನಲ್ಲಿ ಜಿಲ್ಲೆಯ ಶಾಸಕರು ಮುಂದಾಗಬೇಕು ಎಂದರು.
ತಹಶೀಲ್ದಾರ್ ಜೆ.ಬಿ.ಮಾರುತಿ, ಪುರಸಭೆ ಸಿಒ ಕುಮಾರ್, ಪುರಸಭಾ ಸದಸ್ಯ ಗಣೇಶ್, ಲಯನ್ಸ್ ಕ್ಲಬ್ ಅಧ್ಯಕ್ಷ ಡಾ.ಮಹೇಶ್, ಭೂಮಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜಕುಮಾರ್, ಕಾರ್ಯದರ್ಶಿ ನಾಗರಾಜ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.