ಮತದಾನ ಬಹಿಷ್ಕರಿಸದಂತೆ ರೈತರ ಮನವೊಲಿಕೆ ಯತ್ನ ವಿಫ‌ಲ


Team Udayavani, Mar 27, 2019, 12:58 PM IST

matadana

ಚನ್ನರಾಯಪಟ್ಟಣ/ಹಿರೀಸಾವೆ: ಹೋಬಳಿ ದಿಡಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಯಿಂದ ಲೋಕಸಭೆ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಶಾಸಕರನ್ನು ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಜೆ.ಬಿ.ಮಾರುತಿ ಹಾಗೂ ಸಹಾಯಕ ಚುನಾವಣಾಧಿಕಾರಿ ಶ್ರೀನಿವಾಸಗೌಡ ದಿಡಗ ಗ್ರಾಮಕ್ಕೆ ಭೇಟಿ ನೀಡಿ ಮತದಾನ ಮಾಡುವಂತೆ ಸಾರ್ವಜನಿಕರ ಮನವೊಲಿಸಿದರು.

ಅಧಿಕಾರಿಗಳು ಮತದಾನ ಮಾಡುವಂತೆ ರೈತರಿಗೆ ತಿಳಿ ಹೇಳಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಹಲವು ಮಂದಿ ಮತದಾನ ಬಹಿಷ್ಕಾರ ಮಾಡುವುದೇ ಸೂಕ್ತ ಎಂಬ ನಿರ್ಧಾರಕ್ಕೆ ಬಂದರು.

ಜನ ಪ್ರತಿನಿಧಿಗಳಿಗೆ ತಕ್ಕ ಪಾಠ: ಈ ವೇಳೆ ಕೆಲವರು ಮಾತನಾಡಿ, ಈ ಭಾಗದ ಜನತೆ ಚುನಾವಣೆ ಬಹಿಷ್ಕಾರ ಮಾಡುವ ಮೂಲಕ ಜನಪ್ರತಿನಿಧಿಗಳಿಗೆ ತಕ್ಕ ಉತ್ತರ ನೀಡಬೇಕು ಇಲ್ಲದಿದ್ದರೆ ಇವರ ಕಳ್ಳಾಟ ತಡೆಯಲು ಸಾಧ್ಯವಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಕಳೆದ 10 ವರ್ಷಗಳಿಂದ ದಿಡಗ, ಕಬ್ಬಳಿ ವ್ಯಾಪ್ತಿಯಲ್ಲಿ ಮಳೆಯಾಗದೆ ಇರುವುದರಿಂದ ಕೆರೆ ಕಟ್ಟೆಗಳಲ್ಲಿ ನೀರಿಲ್ಲ, ಇದರ ಪರಿಣಾಮ ಅಂತರ್ಜಲದ ಮಟ್ಟ ಕುಸಿತವಾಗಿದೆ, ಕೊಳವೆ ಬಾವಿಗಳು ಬತ್ತಿಹೋಗಿವೆ, ಕುಡಿಯಲು ನೀರಿಲ್ಲ, ಸಾವಿರಾರು ತೆಂಗಿನ ಮರಗಳ ಸುಳಿ ಹಾರಿಹೋಗುತ್ತಿರುವುದರಿಂದ ರೈತರು ಆರ್ಥಿಕವಾಗಿ ನಷ್ಟ ಅನುಭವಿಸುತ್ತಿದ್ದೇವೆ, ಈ ಬಗ್ಗೆ ಕ್ಷೇತ್ರದ ಶಾಸಕ ಸಿ.ಎನ್‌.ಬಾಲಕೃಷ್ಣ ಅವರು ಪ್ರತ್ಯಕ್ಷವಾಗಿ ಕಂಡರು ಬೇಜವಾಬ್ದಾರಿಯಿಂದ ಆಡಳಿತ ಮಾಡುತ್ತಿದ್ದಾರೆ ಎಂದು ಆತಂಕ ವ್ಯಕ್ತ ಪಡಿಸಿದರು.

ನಿರ್ಧಾರ ಕೈಗೊಳ್ಳುವ ಹಕ್ಕಿದೆ: ನಮಗೆ ಅನ್ಯ ಮಾರ್ಗವಿಲ್ಲದೆ ಮತದಾನ ಬಹಿಷ್ಕಾರ ಮಾಡುವ ದಾರಿಗೆ ಬಂದಿದ್ದೇವೆ. ನೀವು ನಿಮ್ಮ ಕೆಲಸ ಮಾಡಿ ನಾವು ಚುನಾವಣಗೆ ಅಡ್ಡಿ ಪಡಿಸುವುದಿಲ್ಲ, ಆದರೆ ನಮ್ಮ ಹಕ್ಕು ಚಲಾವಣೆ ಮಾಡುವುದು ಬೇಡ ಎಂಬ ನಿರ್ಧಾರ ಕೈಗೊಳ್ಳಲು ನಮಗೂ ಸ್ವಾತಂತ್ರ್ಯವಿದೆ. ನಿಮ್ಮ ಕೆಲಸಕ್ಕಾಗಿ ನಮ್ಮನ್ನು ಬಲಿಕೊಡುವುದು ಬೇಡ ನಮಗೆ ನೀರು ಕೊಡುವ ವರೆಗೆ ಈ ಭಾಗದ ಜನತೆ ಮತದಾನ ಬಹಿಷ್ಕಾರ ಮಾಡುವುದು ಶತಸಿದ್ದ ಎಂದು ಎಚ್ಚರಿಕೆ ನೀಡಿದರು.

ಮತದಾನಕ್ಕೆ ಸಹಕರಿಸಿ: ಸಹಾಯಕ ಚುನಾವಣಾಧಿಕಾರಿ ಶ್ರೀನಿವಾಸಗೌಡ ಮಾತನಾಡಿ, ನಿಮ್ಮ ಸಮಸ್ಯೆಯ ಬಗ್ಗೆ ನಮಗೂ ಅರ್ಥವಾಗುತ್ತದೆ. ಆದರೆ ಚುನಾವಣಾ ಬಹಿಷ್ಕಾರವೇ ಇದಕ್ಕೆ ಪರಿಹಾರವಲ್ಲ, ಚುನಾವಣೆ ಅಥವಾ ಮತದಾನವನ್ನು ಬಷ್ಕಾರ ಮಾಡುವುದು ಸಂವಿಧಾನ ಉಲ್ಲಂಘನೆ ಮಾಡಿದಂತೆ, ದಯಟ್ಟು ಶಾಂತಿಯುತ ಮತದಾನಕ್ಕೆ ಸಹಕರಿಸಿ ಎಂದು ಹೇಳಿದರು.

ಅಧಿಕಾರಿಗಳ ಮಾತಿಗೆ ಕೆಲವು ಮಂದಿ ಸಕಾರಾತ್ಮಕವಾಗಿ ಸ್ಪಂದಿಸಿದರೆ ಹಲವು ಮಂದಿ ರೈತರು ಈ ಭಾರಿ ಲೋಕಸಭೆ ಚುನಾವಣೆ ಮತದಾನ ಬಹಿಷ್ಕಾರ ಮಾಡುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಆಕ್ರೋಶವ್ಯಕ್ತ ಪಡಿಸಿದರು.

ಕಂದಾಯ ನಿರೀಕ್ಷಕ ದೇವರಾಜ್‌, ಗ್ರಾಮ ಲೆಕ್ಕಿಗ ನವೀನ್‌, ತಾಲೂಕು ಪಂಚಾಯಿತಿ ಸದಸ್ಯ ಎಂ.ಆರ್‌.ವಾಸು, ಮಾಜಿ ಸದಸ್ಯ ತುಮಕೂರು ಪುಟ್ಟರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ರಘುರಾಮ್‌, ಸದಸ್ಯ ಎಚ್‌.ಕೆ.ಯೋಗನಾರಾಯಣ, ಮುಖಂಡ ಡಿ.ಕೆ.ಶಿವಣ್ಣ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.