ಜನತಾ ಬಜಾರ್‌ಗೆ ಚುನಾವಣೆ ವಿಳಂಬ: ಪ್ರತಿಭಟನೆ


Team Udayavani, Oct 2, 2020, 2:01 PM IST

Hasan-tdy-2

ಹಾಸನ: ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಅಭಿವೃದ್ಧಿ ಅಧಿಕಾರಿ ಸುನೀಲ್‌ ಬಿಜೆಪಿ ಏಜೆಂಟರಂತೆ ನಡೆದುಕೊಂಡು, ಸಹಕಾರ ಸಂಸ್ಥೆಗಳ ಚುನಾವಣೆ ನಡೆಯದಂತೆ ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್‌ ಕಾರ್ಯಕರ್ತರು ಪಕ್ಷದ ಮುಖಂಡ ಎಚ್‌.ಡಿ.ರೇವಣ್ಣ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಹಾಸನ ಜಿಲ್ಲಾ ಕೇಂದ್ರ ಸಹಕಾರ ಸಗಟು ಮಾರಾಟ ಸಂಸ್ಥೆ (ಜನತಾ ಬಜಾರ್‌)ಗೆ ಅ.18ರಿಂದ 25ರೊಳಗೆ ಚುನಾವಣೆ ನಡೆಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ. ಆದರೆ, ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರೂ ಆಗಿರುವ ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಸುನೀಲ್‌ ಅವರು, ನ್ಯಾಯಾಲಯದ ನಿರ್ದೇಶನ ಪಾಲನೆ ಮಾಡುತ್ತಿಲ್ಲ ಎಂದು ದೂರಿದರು.

ಕ್ರಮಕ್ಕೆ ಮನವಿ: ಚುನಾವಣೆಗೆ ಸಂಬಂಧಿಸಿದ ಅಧಿ ಸೂಚನೆಯನ್ನು ಇನ್ನೂ ಹೊರಡಿಸಿಲ್ಲ. ದುರುದ್ದೇಶ ಪೂರ್ವಕವಾಗಿ ಚುನಾವಣೆ ಮುಂದೂಡಲುಸಹಕಾರಿಯಾಗುವಂತೆ ವರ್ತಿಸುತ್ತಿದ್ದಾರೆ. ಬಿಜೆಪಿಗೆ ಅನುಕೂಲವಾಗಲೆಂದು ಈ ರೀತಿ ವರ್ತಿಸುತ್ತಿದ್ದಾರೆ. ನ್ಯಾಯಾಲಯದ ನಿರ್ದೇಶನ ಮೀರಿ ಕೆಲಸ ಮಾಡುತ್ತಿರುವ ಸುನೀಲ್‌ ವಿರುದ್ಧ ಕ್ರಮ ಕೈಗೊಳ್ಳ ಬೇಕು ಎಂದು ರೇವಣ್ಣ ಆಗ್ರಹಿಸಿಸಿದರು.

ಕರ್ತವ್ಯ ಲೋಪ: ಜು.6ರಂದು ಹಾಸನ ಜಿಲ್ಲಾ ಕೇಂದ್ರ ಸಹಕಾರ ಸಗಟು ಮಾರಾಟ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾಗಿ ಅಧಿಕಾರ ವಹಿಸಿಕೊಂಡಿರುವ ಸುನೀಲ್‌, ಈ ವೇಳೆಗೆ ಸಂಸ್ಥೆಯ ಮತದಾರರ ಪಟ್ಟಿ ಸಿದ್ಧಗೊಳಿಸುವ ಕೆಲಸ ಕೈಗೊಂಡು ಮುಂದಿನ ಪ್ರಾಧಿಕಾರಕ್ಕೆ ಸಲ್ಲಿಸಬಹುದಾಗಿತ್ತು. ಆದರೆ, ಕಾಲದಲ್ಲಿಮಾಡದೇಉದ್ದೇಶಪೂರ್ವಕವಾಗಿಯೇ ಕರ್ತವ್ಯ ಲೋಪ ಎಸಗಿದ್ದಾರೆ. ಸುನೀಲ್‌ ಹಲವು ಸಹಕಾರ ಸಂಸ್ಥೆಗಳ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸುವಾಗ ಲೋಪ ಎಸಗಿದ್ದಾರೆ ಎಂದು ದೂರಿದರು.

ಸುನೀಲ್‌ ಅವರನ್ನು ಕೂಡಲೇ ಸೇವೆಯಿಂದ ಅಮಾನತ್‌ ಮಾಡಿ, ಕೋರ್ಟ್‌ ನಿರ್ದೇಶನದಂತೆ ನಿಗದಿಯಾಗಿರುವ ದಿನಾಂಕದಂದೇ ಜಿಲ್ಲಾ ಕೇಂದ್ರ ಸಗಟು ಮಾರಾಟ ಸಂಸ್ಥೆಗೆ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ಗೆ ಮನವಿ ಸಲ್ಲಿಸಿದರು. ಶುಕ್ರವಾರ ಸಂಜೆ ಯೊಳಗೆ ಕ್ರಮ ಕೈಗೊಳ್ಳದಿದ್ದರೆ, ಶನಿವಾರ ಮತ್ತೆ ಪ್ರತಿಭಟಿಸುವುದಾಗಿ ಕಾರ್ಯಕರ್ತರು ಎಚ್ಚರಿಸಿದರು.

ಶಾಸಕ ಕೆ.ಎಸ್‌.ಲಿಂಗೇಶ್‌, ಮಾಜಿ ಶಾಸಕ ಬಿ.ವಿ. ಕರೀಗೌಡ,ಹಾಸನಎಪಿಎಂಸಿಅಧ್ಯಕ್ಷಮಂಜೇಗೌಡ, ನಿರ್ದೇಶಕ ಬಿದರಿಕೆರೆ ಜಯರಾಂ, ಜಿಪಂ ಉಪಾಧ್ಯಕ್ಷ ಎಚ್‌.ಪಿ.ಸ್ವರೂಪ್‌, ಎಚ್‌ಡಿಸಿಸಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಸೋಮನಹಳ್ಳಿ ನಾಗರಾಜು, ನಗರಸಭೆ ಮಾಜಿ ಅಧ್ಯಕ್ಷರಾದ ಸಿ.ಆರ್‌.ಶಂಕರ್‌, ಸಯ್ಯದ್‌ ಅಕºರ್‌, ಎಚ್‌.ಎಸ್‌.ಅನಿಲ್‌ಕುಮಾರ್‌, ಮಾಜಿ ಉಪಾಧ್ಯಕ್ಷ ಚಂದ್ರೇಗೌಡ, ಜೆಡಿಎಸ್‌ ಮುಖಂಡರಾದ ಗಿರೀಗೌಡ, ಸಮೀರ್‌ ಅಹಮದ್‌ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

ಬೆದರಿಕೆಗೆ ಗೌಡರ ಕುಟುಂಬ ಜಗ್ಗದು: ಎಚ್‌.ಡಿ. ರೇವಣ್ಣ

H.D. Revanna: ಬೆದರಿಕೆಗೆ ಗೌಡರ ಕುಟುಂಬ ಜಗ್ಗದು

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

Shivalinge-Gowda

CM ಸಿದ್ದರಾಮಯ್ಯ ರಾಜೀನಾಮೆ ಸಲ್ಲದು; ಶಾಸಕ ಶಿವಲಿಂಗೇಗೌಡ

5-hasan

Hasana:ಅನಾರೋಗ್ಯ: 3 ದಿನಗಳಿಂದ ನಿಂತಲ್ಲೇ ನಿಂತಿದ್ದ ಕಾಡಾನೆ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.