ಜನತೆಗೆ ಆನೆ ಜೊತೆಗೆ ಚಿರತೆ ದಾಳಿ ಆತಂಕ


Team Udayavani, Aug 22, 2022, 3:46 PM IST

tdy-16

ಆಲೂರು: ತಾಲೂಕಿನಲ್ಲಿ ಮೂರ್ನಾಲ್ಕು ದಶಕಗಳಿಂದ ಕಾಡಾನೆಗಳ ದಾಳಿಯಿಂದ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ಶಾಶ್ವತವಾಗಿ ದಿವ್ಯಾಂಗರಾಗಿ ಬಳಲುತ್ತಿದ್ದಾರೆ. ಇದರ ಜೊತೆಗೆ ಇತ್ತೀಚಿಗೆ ಚಿರತೆ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದು ಜನಸಾಮಾನ್ಯರನ್ನು ಅತಂಕಗೀಡು ಮಾಡಿದೆ.

ತಾಲೂಕಿನ ಕದಾಳು, ಹಂಚೂರು, ಕುಂದೂರು, ಬೈರಾಪುರ ಗ್ರಾಪಂ ವ್ಯಾಪ್ತಿಯಲ್ಲಿ ಆಗಿಂದಾಗ್ಗೆ ಚಿರತೆ ಪ್ರತ್ಯಕ್ಷಗೊಂಡು ಜನತೆಯಲ್ಲಿ ಭೀತಿ ಸೃಷ್ಟಿಸಿದೆ. ಈ ಭಾಗಗಳಲ್ಲಿ ಹಲವು ದಿನಗಳಿಂದ ಜನುವಾರು ಹಾಗೂ ನಾಯಿಗಳನ್ನು ಚಿರತೆ ಬಲಿ ತೆಗೆದುಕೊಂಡಿದೆ. ಚಿರತೆ ದಾಳಿಯಿಂದ ಪಾರು: ತುರುಗನಹಳ್ಳಿ ಗ್ರಾಮದ ಲಕ್ಷ್ಮಣ ಎಂಬುವವರು ಜಮೀನಿಗೆ ಗೊಬ್ಬರ ತೆಗೆದುಕೊಂಡು ಹೋಗುವ ವೇಳೆ ಚಿರತೆ ದಾಳಿಗೆ ಮುಂದಾಗಿದೆ. ತಕ್ಷಣ ಗೊಬ್ಬರದ ಮೂಟೆ ಬಿಟ್ಟು ಕಾಲ್ಕಿತ್ತ ಲಕ್ಷ್ಮಣ್‌, ಈ ಬಗ್ಗೆ ಗ್ರಾಮಸ್ಥರಿಗೆ ಸುದ್ದಿ ತಿಳಿಸಿದ್ದಾರೆ. ಅದರೆ ಅದನ್ನು ನಂಬಲಿಲ್ಲ. ಆದರೆ ಅದೇ ದಿನ ಕಟ್ಟಿಹಾಕಿದ್ದ ನಾಯಿಯನ್ನು ಹೊತ್ತುಕೊಂಡು ತಿಂದು ಹಾಕಿದೆ. ಅದರ ಕುರುಹುಗಳು ಹೊಲದ ಬಳಿ ಕಾಣಿಸಿಕೊಂಡು ಗ್ರಾಮದ ಮುಖಂಡ ರು ಅರಣ್ಯ ಇಲಾಖೆ ತಿಳಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಅದರ ಹೆಜ್ಜೆ ಗುರುತು ಪತ್ತೆ ಹಚ್ಚಿ ಚಿರತೆ ಇರುವ ಬಗ್ಗೆ ಖಚಿತ ಪಡಿಸಿದ್ದು ಬೋನ್‌ ಅಳವಡಿಸಿದ್ದಾರೆ. ಅದರೆ ಬೋನ್‌ ಒಳಗಡೆ ಹೋಗದೆ ಹೊರ ಭಾಗದಲ್ಲಿ ನಾಯಿಗಳನ್ನು ಹಿಡಿದು ತಿನ್ನುತ್ತಿದೆ. ಇದು ಗ್ರಾಮಸ್ಥರನ್ನು ಚಿಂತೆಗೀಡು ಮಾಡಿದೆ.

ನಾಯಿಗಳ ಮೇಲೆ ದಾಳಿ: ಆಲೂರು ತಾಲೂಕಿನ ಬೆಟ್ಟದಹಳ್ಳಿ,ಟಿ.ತಿಮ್ಮನಹಳ್ಳಿ, ತಿಪ್ಪನಹಳ್ಳಿ, ಬೆಟ್ಟಹಳ್ಳಿ ಹಾಗೂ ಆಲೂರು ಸುತ್ತಮುತ್ತಲಿನ ಗ್ರಾಮಗಳಲ್ಲಿನ ಕೆಲವು ನಾಯಿಗಳು ಕಾಣೆಯಾಗುತ್ತಿದ್ದು, ಜನಸಾಮಾನ್ಯರು ಚಿರತೆ ದಾಳಿ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು. ಅದರೆ ಇತ್ತೀಚೆಗೆ ದಿನ ಗಳಲ್ಲಿ ಚಿರತೆ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದೆ. ಜನರು ತಮ್ಮ ಜಮೀನಿಗೆ ಹೋಗಲು, ಮನೆಯಿಂದ ಹೊರ ಹೋಗಲು ಅತಂಕ ಪಡುವಂತಾಗಿದೆ. ತಕ್ಷಣ ಚಿರತೆ ಹಿಡಿದು ಸ್ಥಳಾಂತರ ಮಾಡಬೇಕು ಎಂದು ಕದಾಳು ಗ್ರಾಪಂ ಸದಸ್ಯ ಕಾಂತರಾಜ್‌ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರು.

ಚಿರತೆ ಸೆರೆಗೆ ಬೋನ್‌ ಇಡಲಾಗಿದೆ: ಅರಣ್ಯ ಇಲಾಖೆ ಸಿಬ್ಬಂದಿ ಭಾಗಗಳಲ್ಲಿ ಭೇಟಿ ನೀಡಿ ವಲಯ ಅರಣ್ಯಾಧಿಕಾರಿ ಮರಿಸ್ವಾಮಿ ಮಾತನಾಡಿ, ಅರಣ್ಯ ಇಲಾಖೆ ಸಿಬ್ಬಂದಿ ಕಣ್ಣಿಗೆ ಇದುವರೆಗೂ ಚಿರತೆ ಕಾಣಿಸಿಕೊಂಡಿಲ್ಲ. ಊರನವರಿಗೆ ಕಾಣಸಿಕೊಂಡಿದೆ ಎಂಬ ಮಾಹಿತಿ ಹಿನ್ನೆಲೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಚಿರತೆ ಸೆರೆಗೆ ಬೋನ್‌ ಇಡಲಾಗಿದೆ. ಅದರೆ ಈ ಭಾಗದಲಿ ಮೆಕ್ಕೆಜೋಳ ಹೆಚ್ಚಾಗಿ ಬೆಳದಿರುವುದರಿಂದ ಚಿರತೆ ಬೋನಿಗೆ ಬಿದ್ದಿಲ್ಲ. ಜನಸಾಮಾನ್ಯರು ಹೊರಗೆ ಹೋಗುವಾಗ ಎಚ್ಚರಿಕೆಯಿಂದ ಇರವಂತೆ ಮನವಿ ಮಾಡಿದ್ದಾರೆ.

ಚಿರತೆ ಸೆರೆಗೆ ಆಗ್ರಹ: ಗಣೇಶ್‌ : ಈ ಭಾಗದಲ್ಲಿ ಚಿರತೆ ದಾಳಿಯಿಂದ ಜಾನುವಾರು ಹಾಗೂ ಸಾಕು ನಾಯಿಗಳನ್ನು ಕಳೆದುಕೊಂಡು ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಈಗಾಗಲೇ ಕಾಡಾನೆಯಿಂದ ಸಾಕಷ್ಟು ನಷ್ಟ ಅನುಭವಿಸುತ್ತಿರುವ ಜನರು ಈಗ ಮತ್ತೂಂದು ಗಂಭೀರ ಸಮಸ್ಯೆ ಎದುರಿಸಬೇಕಾಗಿದೆ. ಆದಷ್ಟು ಬೇಗ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಹಿಡಿದು ಸ್ಥಳಾಂತರ ಮಾಡಬೇಕು ಎಂದು ಬೈರಾಪುರ ಗ್ರಾಪಂ ಸದಸ್ಯ ಸ್ನೇಹಜೀವಿ ಗಣೇಶ್‌ ಆಗ್ರಹಿಸಿದ್ದಾರೆ.

ಟಿ.ಕೆ.ಕುಮಾರಸ್ವಾಮಿ ಟಿ.ತಿಮ್ಮನಹಳ್ಳಿ

ಟಾಪ್ ನ್ಯೂಸ್

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Murder-Represent

Hasana: ಪತ್ನಿಯ ಕೊಂದ ಪಿಸಿಗೆ ಅಕ್ರಮ ಸಂಬಂಧ ?

Hassan ಕಾರು ಪಲ್ಟಿಯಾಗಿ ಮಹಿಳೆ ಸಾವು; ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ

Hassan ಕಾರು ಪಲ್ಟಿಯಾಗಿ ಮಹಿಳೆ ಸಾವು; ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.