![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Apr 18, 2021, 2:48 PM IST
ಸಕಲೇಶಪುರ: ಆಟೋಗೆ ಗ್ಯಾಸ್ ತುಂಬುವಾಗಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಆಟೋಹಾಗೂ ಮನೆಯೊಂದಕ್ಕೆ ಹಾನಿಯಾಗಿರುವಘಟನೆ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಅಗ್ರಹಾರ ಬಡಾವಣೆಯಚನ್ನಕೇಶವ (29) ಎಂಬ ಆಟೋ ಚಾಲಕ ತಮ್ಮಆಟೋಗೆ ಅನಿಲ ತುಂಬಿಸಿಕೊಳ್ಳಲುಕುಶಾಲನಗರ ಬಡಾವಣೆ 10ನೇ ವಾರ್ಡ್ನಲ್ಲಿಅಕ್ರಮವಾಗಿ ವ್ಯಕ್ತಿಯೋರ್ವರಿಂದ ಅನಿಲತುಂಬಿಸುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಬೆಂಕಿಹೊತ್ತಿಕೊಂಡ ಪರಿಣಾಮ ಆಟೋ ಬಹುತೇಕಸುಟ್ಟು ಹೋಗಿದೆ. ಮನೆಯೊಂದರ ಮುಂಭಾಗಭಾಗಶಃ ಹಾನಿಯಾದರೆ ಕೋಳಿಸಾವಿಗೀಡಾಗಿದೆ. ಅದೃಷ್ಟವಶಾತ್ ಆಟೋಚಾಲಕ ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾನೆ.
ಸ್ಥಳೀಯರು ತಕ್ಷಣ ಬೆಂಕಿ ನಂದಿಸಿದ್ದರಿಂದಹೆಚ್ಚಿನ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆಆಗಮಿಸಿದ ನಗರ ಠಾಣೆ ಪಿಎಸ್ಐ ಬಸವರಾಜ್ ಚಿಂಚೋಳಿ ಈ ಕುರಿತು ಪರಿಶೀಲನೆ ಮಾಡಿನಗರ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ. ಪಟ್ಟಣದಲ್ಲಿ ಆಟೋ ಅನಿಲತುಂಬಿಸುವ ಬಂಕ್ಗಳು ಇಲ್ಲದಿರುವುದರಿಂದಅಕ್ರಮವಾಗಿ ತಾಲೂಕಿನ ಕೆಲವರು ಅಡುಗೆಅನಿಲ ಸಿಲಿಂಡರ್ ಗಳ ಮುಖಾಂತರವಾಹನಗಳಿಗೆ ಹೆಚ್ಚಿನ ಬೆಲೆಗೆ ಗ್ಯಾಸ್ ತುಂಬಿಸುವ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಪಟ್ಟಣದಲ್ಲಿ ಬೆಂಕಿ ಆಕಸ್ಮಿಕವಾಗಿ ಸಾವುನೋವುಗಳು ಸಂಭವಿಸುವ ಮೊದಲು ಅಕ್ರಮವಾಗಿ ಅನಿಲ ತುಂಬಿಸುವವರ ವಿರುದ್ಧಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರುಒತ್ತಾಯಿಸಿದ್ದಾರೆ.
R. Ashok: ನವೆಂಬರ್ ಬಳಿಕ ಕಾಂಗ್ರೆಸ್ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.