Electoral ರಾಜಕಾರಣದಿಂದ ಡಿ.ವಿ.ಸದಾನಂದ ಗೌಡ ನಿವೃತ್ತಿ
ದಿಢೀರ್ ನಿರ್ಧಾರ ಘೋಷಿಸಿದ ಮಾಜಿ ಸಿಎಂ
Team Udayavani, Nov 8, 2023, 11:20 PM IST
ಹಾಸನ: ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿ ನಾಯಕ, ಕೇಂದ್ರದ ಮಾಜಿ ಸಚಿವ, ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಅವರು ಚುನಾವಣ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣ ರಾಜಕೀಯದಲ್ಲಿ ಮುಂದು ವರಿಯದಿರಲು ತೀರ್ಮಾನಿಸಿದ್ದೇನೆ. ಹಾಗಾಗಿ ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಶಾಸಕನಾಗಿ, ಸಂಸದನಾಗಿ, ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವನಾಗಿ 30 ವರ್ಷಗಳ ಕಾಲ ರಾಜಕೀಯದಲ್ಲಿ ಅಧಿಕಾರ ಅನುಭವಿಸಿದ್ದೇನೆ. ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಯಡಿಯೂರಪ್ಪನವರನ್ನು ಬಿಟ್ಟರೆ ನಾನೇ ಪಕ್ಷದಲ್ಲಿ ಹೆಚ್ಚಿನ ಅಧಿಕಾರ ಅನುಭವಿಸಿರುವೆ. 10 ವರ್ಷ ಶಾಸಕ, 20 ವರ್ಷ ಸಂಸದ, 1 ವರ್ಷ ಮುಖ್ಯಮಂತ್ರಿ, ಒಂದೂವರೆ ವರ್ಷ ವಿಪಕ್ಷ ನಾಯಕ, 5 ವರ್ಷ ವಿಪಕ್ಷ ಉಪನಾಯಕ, ನಾಲ್ಕೂವರೆ ವರ್ಷ ಬಿಜೆಪಿ ರಾಜ್ಯಾಧ್ಯಕ್ಷ, ನರೇಂದ್ರ ಮೋದಿಯವರ ಸಚಿವ ಸಂಪುಟದ ಸದಸ್ಯನಾಗಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿರುವೆ ಎಂದರು.
ಈ ಹಿಂದೆ ರಾಜ್ಯದ ಕೆಲವು ಬಿಜೆಪಿ ಸಂಸದರಿಗೆ ಟಿಕೆಟ್ ಇಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು. ಆಗ, ಬೇಸರಗೊಂಡಿದ್ದ ಡಿವಿಎಸ್, 13 ಸಂಸದರ ತೇಜೋವಧೆ ಪ್ರಯತ್ನ ಮಾಡಲಾಗುತ್ತಿದೆ. ವಯಸ್ಸಾದ ಮತ್ತು ಅನಾರೋಗ್ಯ ಕಾರಣಕ್ಕಾಗಿ ಟಿಕೆಟ್ ಇಲ್ಲ ಎಂಬ ವರದಿಗಳು ಬರುತ್ತಿವೆ. ಈ ಬಗ್ಗೆ ಕೇಂದ್ರ ನಾಯಕರೇ ಮಧ್ಯ ಪ್ರ ವೇಶಿಸಬೇಕು ಎಂದು ಒತ್ತಾಯಿಸಿದ್ದರು.
ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆಯೂ ಅವರು ಕೇಂದ್ರದ ವರಿಷ್ಠರ ತೀರ್ಮಾನವಾಗಿದ್ದು, ಇಲ್ಲಿನ ನಾಯ ಕರ ಮಾತನ್ನೂ ಕೇಳಬೇಕಿತ್ತು ಎಂದು ಹೇಳಿ ದ್ದರು. ಇತ್ತೀಚೆಗಷ್ಟೇ, ಹೊಸದಿಲ್ಲಿಗೆ ತೆರಳಿದ್ದ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಭೇಟಿ ಸಿಗದೇ ವಾಪಸ್ ಬಂದಿ ದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.