Government jeep: ಭೂ ಪರಿಹಾರ ಬಾಕಿ ನೀಡಿದ್ದಕ್ಕೆ ಸರ್ಕಾರಿ ಜೀಪು ಜಪ್ತಿ


Team Udayavani, Oct 28, 2023, 5:24 PM IST

tdy-18

ಹಾಸನ: ಯಗಚಿ ಜಲಾಶಯ ಯೋಜನೆಯ ನಾಲೆ ನಿರ್ಮಾಣಕ್ಕೆ ಸ್ವಾಧೀನ ಪಡಿಸಿಕೊಂಡ ಭೂಮಿಗೆ ಭೂ ಮಾಲಿಕರಿಗೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ಜಿಲ್ಲಾಡಳಿತಕ್ಕೆ ಸೇರಿದ ಕಾರೊಂದನ್ನು ಕೋರ್ಟ್‌ ಆದೇಶದಂತೆ ಜಪ್ತಿ ಮಾಡಲಾಯಿತು.

ಹಾಸನ ತಾಲೂಕು, ಕಟ್ಟಾಯ ಹೋಬಳಿ ದೋರನಹೊಸಳ್ಳಿ ಗ್ರಾಮದ ಕೆ.ಎಸ್‌.ಯೋಗೇಶ್‌ ಎಂಬುವರಿಗೆ ಸೇರಿದ ಸರ್ವೆ ನಂಬರ್‌ 1/10, 1/09/ 32/13 ನಲ್ಲಿ 13 ಗುಂಟೆ ಜಮೀನನ್ನು 2006 ರಲ್ಲಿ ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಆದರೆ, ಅದಕ್ಕೆ ಸೂಕ್ತ ಪರಿಹಾರ ನೀಡಿರಲಿಲ್ಲವಾದ್ದರಿಂದ ಭೂ ಮಾಲಿಕರು ಕಾನೂನು ಹೋರಾಟ ಆರಂಭಿಸಿದ್ದರು. 2010 ಪರಿಹಾರ ಘೋಷಣೆ ಮಾಡಿದ ಮೊತ್ತವನ್ನು ಒಪ್ಪದೆ ಹೆಚ್ಚಿನ ಪರಿಹಾರ ಕೊಡಿಸಬೇಕು ಎಂದು ಯೋಗೇಶ್‌ ಹಾಸನದ ಕೋರ್ಟ್‌ ಮೊರೆ ಹೋಗಿದ್ದರು. ಒಂದು ಗುಂಟೆಗೆ ಒಂದು ಲಕ್ಷ ರೂ. ಪರಿಹಾರ ಕೊಡಬೇಕು ಎಂದು 2015ರಲ್ಲಿ ಆದೇಶ ಆಗಿತ್ತು. ಆದರೆ, ಈವರೆಗೂ ಸಂಬಂಧಪಟ್ಟವರು ಪರಿಹಾರ ನೀಡಿರಲಿಲ್ಲ.

ಮತ್ತೂಮ್ಮೆ ಕೋರ್ಟ್‌ಗೆ ಹೋದ ಮಾಲಿಕ: ವಸೂಲಿಗೆ ಹಾಕಿದರೂ, ವಿಶೇಷ ಭೂ ಸ್ವಾಧೀನ ಅಧಿಕಾರಿ ಹಣ ಕಟ್ಟಲಿಲ್ಲ. ಇದನ್ನು ಮತ್ತೂಮ್ಮೆ ಕೋರ್ಟ್‌ಗೆ ಮನವರಿಕೆ ಮಾಡಿದಾಗ, ಕಚೇರಿ ಜಪ್ತಿಗೆ ಕೋರ್ಟ್‌ ಆದೇಶ ಮಾಡಿತ್ತು. ಅದರಂತೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಿಲ್ಲಾಡಳಿತಕ್ಕೆ ಸೇರಿದ ಕೆಎ-54-ಜಿ-0024 ಜೀಪನ್ನು ವಕೀಲರ ಸಮ್ಮುಖದಲ್ಲಿ ಕೋರ್ಟ್‌ ಸಿಬ್ಬಂದಿ ಶುಕ್ರವಾರ ಜಪ್ತಿ ಮಾಡಿದರು. ಜಪ್ತಿ ಮಾಡಿದ ಕಾರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ.

ಬಡ್ಡಿ ಸಮೇತ ಪರಿಹಾರ ನೀಡಿ: ನ್ಯಾಯಾಲಯವು ಒಂದು ಎಕರೆಗೆ ಒಂದು ಲಕ್ಷ ರೂ. ಪರಿಹಾರ ಕೊಡಬೇಕು ಎಂದು 2015 ರಲ್ಲಿ ತೀರ್ಪು ನೀಡಿತ್ತು. ಆದರೆ, ಈಗ ಬಡ್ಡಿ ಸೇರಿ ಜಿಲ್ಲಾಡಳಿತ 40 ಲಕ್ಷ ರೂ. ಅನ್ನು ಭೂ ಮಾಲಿಕರಿಗೆ ಪಾವತಿ ಮಾಡಬೇಕಿದೆ ಎಂದು ಭೂಮಿಯ ಮಾಲಿಕ ಯೋಗೇಶ್‌ ಪರ ವಕೀಲ ಮಾವಿನಕೆರೆ ಮಂಜುನಾಥ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

11

Hasan: 100 ರೂ.ಗೆ ಸ್ನೇಹಿನನ್ನೇ ಹತ್ಯೆಗೈದ ಕಿರಾತಕರು

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

ಸರಕಾರದ ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

State Govt ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

A vehicle caught fire at Shiradi Ghat

Shiradi ಘಾಟ್‌ನಲ್ಲಿ ವಾಹನ ಬೆಂಕಿಗೆ ಆಹುತಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.