ವಿಮಾನ ನಿಲ್ದಾಣ ನಿರ್ಮಾಣ; ದಶಕದ ವಿಘ್ನ ನಿವಾರಣೆ


Team Udayavani, Feb 6, 2021, 3:04 PM IST

Hassan Airprot

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಅಸೆಯಂತೆ ಹಾಸನದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ  ಪ್ರಾರಂಭಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡುವ ಮೂಲಕ ದಶಕದ ವಿಘ್ನವನ್ನು ನಿವಾರಿಸಿದ್ದಾರೆ ಎಂದು ಶಾಸಕ ಪ್ರೀತಂಜೆ. ಗೌಡ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣಕ್ಕೆ ಹಾಸನದ ಬುವನ ಹಳ್ಳಿ ಬಳಿಯಲ್ಲಿ ಈಗಾಗಲೇ ಸ್ಥಳ   ಕಾದಿರಿಸಲಾಗಿದೆ. ಹಲವು ವರ್ಷಗಳಿಂದ ವಿಮಾನ ನಿಲ್ದಾಣ ಕಾಮಗಾರಿ ಆರಂಭವಾಗದೇ ಮಾಜಿ ಪ್ರಧಾನಿ ದೇವೇಗೌಡರ ಕನಸು ಕನಸಾಗಿಯೇ ಉಳಿದಿತ್ತು. ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಕಾಮಗಾರಿ ಮಾಡುವಂತೆ ಮನವಿ ಮಾಡಿದಾಗ ಹಲವು ಮಂದಿ ಇದನ್ನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು ಎಂದು ಹೇಳಿದರು.

ಹಿಂದೆ ಭರವಸೆ ನೀಡಿದ್ದೆ: ಮಾಜಿಪ್ರಧಾನಿ ದೇವೇಗೌಡರ ಆಸೆ ಈಡೇರಿಸುತ್ತೇನೆ ಎಂದು ಹಿಂದೆಯೇ ಹೇಳಿದ್ದೆ. ಅದರಂತೆ  ಜ.25ರಂದು ಮುಖ್ಯ ಮಂತ್ರಿ ಯಡಿಯೂರಪ್ಪನವರಿಗೆ ಸಲ್ಲಿಸಿದ್ದ ಮನವಿಗೆ ಪೂರಕವಾಗಿ ಮತ್ತು ನಿರಂತರ ಪ್ರಯತ್ನದಿಂದ ಶುಕ್ರವಾರ ವಿಧಾನಸಭೆಯ ಅಧಿವೇಶನದಲ್ಲಿ ಚರ್ಚೆಗೆ ಬಂದಿತ್ತು ಎಂದು ಹೇಳಿದರು.

ಬೇರೆ ಅರ್ಥ ಕೊಡುವುದು ಬೇಡ: ಅಧಿವೇಶನದಲ್ಲೇ ಕೂಡಲೇ ವಿಮಾನ ನಿಲ್ದಾಣ ನಿರ್ಮಾಣದ ಕಾಮಗಾರಿ ಕೈಗೆತ್ತಿಕೊಳ್ಳಲು  ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.ನಾನು ಜಿಲ್ಲೆಯ ಅಭಿವೃದ್ಧಿಗೆ ಹಾಗೂ ಜಿಲ್ಲೆಯ ಹಿರಿಯ  ರಾಜಕಾರಣಿಯೊಬ್ಬರು ಶಂಕುಸ್ಥಾಪನೆ ಮಾಡಿದ ಕಾಮಗಾರಿ ನಿಲ್ಲಬಾರದು ಎಂಬ ಉದ್ದೇಶ ನನ್ನಾಗಿದೆ. ಇದಕ್ಕೆ ಬೇರೆ ಅರ್ಥ ಕೊಡುವುದು ಬೇಡ ಎಂದು ಮನವಿ ಮಾಡಿದರು.

ಇದನ್ನೂ ಓದಿ :ಜಗದೀಶ್ ಅಧಿಕಾರಿ ಕ್ಷಮೆ ಯಾಚಿಸದಿದ್ದರೆ ಬಿಲ್ಲವರಾದ ನಾವು ‘ತಾಂಟಲು’ ಸಿದ್ದ: ಪ್ರತಿಭಾ ಕುಳಾಯಿ

ಉದ್ಯೋಗ ಅವಕಾಶ ಸಿಗಲಿದೆ: ಕಳೆದ 40 ವರ್ಷದಿಂದ ಪೂರ್ಣಗೊಳ್ಳದ ಹೊರವರ್ತುಲ ರಸ್ತೆ, ಒಳಚರಂಡಿ ಸೇರಿ ಈಗ ವಿಮಾನ  ನಿಲ್ದಾಣ ಕಾಮಗಾರಿಯನ್ನು ಬಿಜೆಪಿ ಸರಕಾರ ಬಂದ ಒಂದೂವರೆ ವರ್ಷದಲ್ಲೇ ಆರಂಭಿಸಿದ್ದಕ್ಕೆ ಜನಸಾಮಾನ್ಯರಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಈ ಹಿಂದಿನ ಸರ್ಕಾರ ಇದನ್ನು ಮಾಡಬೇಕಿತ್ತು ಅವರು ಮಾಡಲಿಲ್ಲ, ಹಾಗೆಂದು ನಾವು ಸುಮ್ಮನೆ ಕೂರುವುದಿಲ್ಲ, ವಿಮಾನ ನಿಲ್ದಾಣ ಪ್ರಾರಂಭವಾದರೆ, ಜಿಲ್ಲೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಹೆಸರು ಬರುವುದರೊಂದಿಗೆ ಅನೇಕ ಕಾರ್ಖಾನೆಗಳು ಜಿಲ್ಲೆಯಲ್ಲಿ ಸ್ಥಾಪನೆ ಆಗಲಿವೆ. ಇದರಿಂದ ಯುವಕರಿಗೆ ಉದ್ಯೋಗ ಅವಕಾಶ ದೊರೆಯುತ್ತದೆ ಎಂಬ ಆಶಾಭಾವನೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.