Hassan ದೇವರಾಜೇಗೌಡ 3 ದಿನ ಪೊಲೀಸ್ ಕಸ್ಟಡಿಗೆ
ಹಿಂದೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಕೋರ್ಟ್
Team Udayavani, May 13, 2024, 11:54 PM IST
ಹಾಸನ: ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇ ಗೌಡ ಅವರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಹೊಳೆನರಸೀಪುರದ ಜೆಎಂಎಫ್ಸಿ ನ್ಯಾಯಾಲಯ ಆದೇಶಿಸಿದೆ.
ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ತಮ್ಮ ಕಸ್ಟಡಿಗೆ ನೀಡುವಂತೆ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಮಂಗಳವಾರದಿಂದ ಗುರುವಾರದ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದರು.
ಮೇ 11ರಂದು ದೇವರಾಜೇಗೌಡ ಅವರನ್ನು ಬಂಧಿಸಿದ್ದ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಅಂದು ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಧೀಶರು ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಆದೇಶ ಹೊರಡಿಸಿದ್ದರು. ಆದರೆ ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆ ಅಗತ್ಯವಿದೆ. ಹಾಗಾಗಿ ಆರೋಪಿಯನ್ನು ಕಸ್ಟಡಿಗೆ ಒಪ್ಪಿಸಬೇಕು ಎಂದು ಪ್ರಾಸಿಕ್ಯೂಷನ್ ಪರ ವಕೀಲರು ಹೊಳೆನರಸೀಪುರ ಜೆಎಂಎಫ್ಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ನ್ಯಾಯಾಲಯ ಪುರಸ್ಕರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್
Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ
Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು
T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.