ಹಾಸನ ಮಸ್ಟರಿಂಗ್ ಕೇಂದ್ರದಲ್ಲಿ ಅವ್ಯವಸ್ಥೆ
Team Udayavani, May 12, 2018, 3:19 PM IST
ಹಾಸನ: ಮಸ್ಟರಿಂಗ್ ಕೇಂದ್ರದಲ್ಲಿನ ಅವ್ಯವಸ್ಥೆಯ ವಿರುದ್ಧ ಚುನಾವಣಾ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ
ಹಾಸನದಲ್ಲಿ ಶುಕ್ರವಾರ ನಡೆಯಿತು. ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ವ್ಯವಸ್ಥೆ ಮಾಡಿದ್ದ ಹಾಸನ ವಿಧಾನಸಭಾ
ಕ್ಷೇತ್ರದ ಮಸ್ಟರಿಂಗ್ ಕೇಂದ್ರದಲ್ಲಿ ಮತಯಂತ್ರಗಳು, ವಿ.ವಿ.ಪ್ಯಾಟ್ಗಳನ್ನು ಪಡೆಯಲು ಬಂದಿದ್ದ ಮತಗಟ್ಟೆ
ಅಧ್ಯಕ್ಷಾಧಿಕಾರಿ ಮತ್ತು ಸಿಬ್ಬಂದಿ ಉಪಹಾರ, ಕುಡಿಯುವ ನೀರೂ ಇಲ್ಲದೆ ಪರದಾಡಿದರು.
ಬೆಳಗ್ಗೆ 8 ಗಂಟೆಯಿಂದಲೇ ಮಸ್ಟರಿಂಗ್ ಕೇಂದ್ರಕ್ಕೆ ಸಿಬ್ಬಂದಿ ಬರಲಾರಂಭಿಸಿದ್ದರು. ತಮಗೆ ನಿಗದಿಯಾದ ಮತಗಟ್ಟೆ ಮಾಹಿತಿ ಪಡೆದು ಇವಿಎಂ, ವಿ.ವಿ.ಪ್ಯಾಟ್ ಹಾಗೂ ಚುನಾವಣಾ ಸಾಮಗ್ರಿ ಪಡೆದು ಬಸ್ ಗಳಿಗಾಗಿ ಕಾಯುತ್ತಿ ಸಿಬ್ಬಂದಿಗೆ ಬೆಳಗ್ಗೆ 11.30ರ ವರೆಗೂ ಉಪಹಾರ ಸಿಗಲಿಲ್ಲ.
ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಯವರನ್ನು ಸಿಬ್ಬಂದಿ ಪ್ರಶ್ನಿಸಿ ಅಸಮಾಧಾನ ವ್ಯಕ್ತಪಡಿಸಿದ ನಂತರ 11.30ಕ್ಕೆ ಉಪಹಾರ ಬಂದರೂ ಪ್ಲೇಟ್ಗಳ ಕೊರತೆ ಇತ್ತು. ಕೆಲವು ಸಿಬ್ಬಂದಿ ಪ್ಲೇಟ್ಗಾಗಿ ಪರದಾಡಿ ಕೊನೆಗೆ ಉಪಹಾರ ತಿಂದು ಬಿಸಾಡಿದ್ದ ಅಡಕೆ ಪ್ಲೇಟ್ಗಳನ್ನು ತೊಳೆದುಕೊಂಡು ಉಪಹಾರ ತಿಂದರು.
ಅವ್ಯವಸ್ಥೆಯ ಬಗ್ಗೆ ಜಿಪಂ ಸಿಇಒ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ನಂತರ ವ್ಯವಸ್ಥೆ ಸುಧಾರಿಸುವ ಪ್ರಯತ್ನ ನಡೆಯಿತು. ಮಸ್ಟರಿಂಗ್ ಕೇಂದ್ರದಲ್ಲಿನ ಅವ್ಯವಸ್ಥೆಯ
ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿ ಮುಂಜಾನೆ 5 ಗಂಟೆಗೇ ಮನೆ ಬಿಟ್ಟು ಬಂದಿರುವ ನಮಗೆ 11.30ರ ವರೆಗೂ ಉಪಹಾರ ನೀಡಲಿಲ್ಲ.
ರಕ್ತದೊತ್ತಡ, ಮಧುಮೇಹ ಇರುವ ಬಹುಪಾಲು ಸಿಬ್ಬಂದಿ ಉಪಹಾರವಿಲ್ಲದೇ ಪರದಾಡುವಂತಾಗಿದೆ. ಮಸ್ಟರಿಂಗ್ ಕೇಂದ್ರಕ್ಕೆ ಉಪಹಾರ ಸರಬರಾಜು ಮಾಡುವ ಹೊಣೆ ಹೊತ್ತವರ ನಿರ್ಲಕ್ಷ್ಯದಿಂದ ಸಿಬ್ಬಂದಿ ತೊಂದರೆ ಅನುಭವಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಅವ್ಯವಸ್ಥೆಯ ನಡುವೆಯೇ ಇವಿಎಂ, ವಿ.ವಿ.ಪ್ಯಾಟ್ ಹಾಗೂ ಚುನಾವಣಾ ಸಾಮಗ್ರಿ ಪಡೆದು ಬಸ್ಗಳಲ್ಲಿ 2 ಗಂಟೆಯ ವೇಳೆಗೆ ಮಸ್ಟರಿಂಗ್ ಕೇಂದ್ರದಿಂದ ಮತಗಟ್ಟೆಯತ್ತ ಚುನಾವಣಾ ಸಿಬ್ಬಂದಿ ಹೊರಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.