ದಳ, ಬಿಜೆಪಿ ಸೇರಿದವರಿಗೆ ಕಾಂಗ್ರೆಸ್‌ ಬಲದ ಅರಿವು


Team Udayavani, Oct 24, 2022, 5:08 PM IST

tdy-13

ಹೊಳೆನರಸೀಪುರ: ಕಾಂಗ್ರೆಸ್‌ ಪಕ್ಷ ತ್ಯಜಿಸಿ ಬಿಜೆಪಿ ಮತ್ತು ದಳಕ್ಕೆ ತೆರಳಿದ್ದ ಬಹುತೇಕ ಮುಖಂಡರು ಮತ್ತು ಕಾರ್ಯಕರ್ತರು ಪುನಃ ತನ್ನ ಮಾತೃ ಪಕ್ಷಕ್ಕೆ ಹಿಂದಿರುಗುವ ಸಾಧ್ಯತೆ ಅಧಿಕವಾಗಿದ್ದು ರಾಜಕೀಯ ಚಟುವಟಿಕೆ ಗರಿಗೆದರಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಆರೇಳು ತಿಂಗಳಷ್ಟೇ ಬಾಕಿಯಿದ್ದು ಅಷ್ಟರೊಳಗೆ ರಾಜಕೀಯ ಪಕ್ಷಗಳಲ್ಲಿ ಮುಖಂಡರು ತಮ್ಮ ಸ್ಥಾನಗಳನ್ನು ಭದ್ರಪಡಿಸಿಕೊಳ್ಳಲು ವೇದಿಕೆ ಸಿದ್ಧ ಪಡಿಸಿಕೊಂಡಿದ್ದಾರೆ. ಕಳೆದ 2018 ರ ವಿಧಾನ ಸಭಾ ಚುನಾವಣೆಯ ನಂತರ ಕಾಂಗ್ರೆಸ್‌ ಪಕ್ಷದಲ್ಲಿದ್ದ ಅನೇಕ ಮುಖಂಡರು ಪಕ್ಷ ತ್ಯಜಿಸಿ ಬಿಜೆಪಿ ಮತ್ತು ದಳದಲ್ಲಿ ಗುರುತಿಸಿಕೊಂಡಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಕ್ಷೇತ್ರದ ಬಗ್ಗೆ ರಾಜ್ಯ ಹೈಕಮಾಂಡ್‌ ಹೆಚ್ಚಿನ ಶಕ್ತಿ ತುಂಬುವ ಸಲುವಾಗಿ ಪಕ್ಷದ ಮುಖಂಡರು, ಕಾರ್ಯತಂತ್ರ ನಡೆಸಿ ಪಕ್ಷಕ್ಕೆ ಯುವ ನೇತಾರನನ್ನು ತರುವ ಸಲುವಾಗಿ ನಡೆದ ಪ್ರಯತ್ನಗಳು ಸಫಲವಾಗುವ ಸಾಧ್ಯತೆ ಅಧಿಕವಾಗಿರುವ ಹಿನ್ನೆಲೆ ಪಕ್ಷ ತ್ಯಜಿಸಿ ಅನ್ಯ ಪಕ್ಷಗಳಿಗೆ ತೆರಳಿದ್ದವರು ಸದ್ಯದಲ್ಲೆ ಮಾತೃ ಪಕ್ಷಕ್ಕೆ ಹಿಂತಿರುಗಲು ವೇದಿಕೆ ಸಿದ್ಧವಾಗುತ್ತಿದೆ. ಈ ಹಿಂದೆ ಪಕ್ಷ ತ್ಯಜಿಸಿದ್ದ ಬಹುತೇಕ ಮುಖಂ ಡರು ಯಾವುದೇ ಶರತ್ತು ಇಲ್ಲದೆ ಪಕ್ಷಕ್ಕೆ ಹಿಂತಿರುಗುತ್ತಿರುವುದು ಒಳ್ಳೆಯ ಸೂಚನೆ ಎಂದು ಹೇಳಲಾಗುತ್ತಿದೆ.

ಪ್ರಸ್ತುತ ತಾಲೂಕಿನ ಕಾಂಗ್ರೆಸ್‌ ಮುಖಂಡರಾದ ಅನಪಮ ಮಹೇಶ್‌ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ಎಸ್‌.ಮಂಜುನಾಥ್‌ ಮತ್ತು ಪಕ್ಷದ ಮುಖಂಡ ಎಂ.ಕೆ.ಶೇಷೇಗೌಡ ಅವರುಗಳನ್ನು ರಾಜ್ಯ ಕೆಪಿಸಿಸಿಗೆ ಸದಸ್ಯ ಸ್ಥಾನ ದೊರತ ಹಿನ್ನೆಲೆ ತಾಲೂಕಿನಲ್ಲಿ ಪಕ್ಷಕ್ಕೆ ನೂತನ ಅಧ್ಯಕ್ಷರ ನ್ನು ನೇಮಕ ಮಾಡಲು ಪಕ್ಷದ ಹೈಕಮಾಂಡ್‌ ಸಿದ್ಧತೆ ನಡೆಸಿದೆ. ಈ ಹಿನ್ನೆಲೆ ಪಕ್ಷ ತ್ಯಜಿಸಿ ತೆರಳಿದ್ದ ಬಹುತೇಕ ಮುಖಂಡರು ಪಕ್ಷಕ್ಕೆ ಹಿಂತಿರು ಗುವ ಜೊತೆಗೆ ತಂತಮ್ಮ ಗ್ರಾಮಗಳಲ್ಲಿ ಪಕ್ಷವನ್ನು ತಳ ಮಟ್ಟದಿಂದ ಸಂಘಟಿಸಲು ಪಣ ತೊಡುವುದಾಗಿ ಬೇಷರತ್‌ ಹೇಳಿಕೆ ನೀಡಿದ್ದು ಪಕ್ಷಕ್ಕೆ ಬಲ ಬಂದಿದೆ. ಪ್ರಸ್ತುತ ಕಾಂಗ್ರೆಸ್‌ ತ್ಯಜಿಸಿ ಬಿಜೆಪಿ ಪಕ್ಷಕ್ಕೆ ತೆರಳಿದ್ದ ಮುಖಂಡ ರು ಇದೀಗ ಬಿಜೆಪಿ ಪಕ್ಷಕ್ಕೆ ತಳಮಟ್ಟದಲ್ಲಿ ಹೇಳಿಕೊಳುವಂತ ಬಲ ಇಲ್ಲದೆ ಇರುವುದನ್ನು ಮನಗಂಡಿರುವ ಮುಖಂಡರು ಹಿಂದಿರುಗಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಮುಂದಿನ ಎರಡು ಮೂರು ತಿಂಗಳಲ್ಲಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳಲ್ಲಿನ ಮುಖಂಡರು ಮತ್ತು ಕಾರ್ಯಕರ್ತರು ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುವ ಸಲುವಾಗಿ ಪಕ್ಷಗಳಲ್ಲಿ ಸ್ಥಾನಮಾನ ಹೆಚ್ಚಿಸಿಕೊಳ್ಳಲು ಬಕಾ ಪಕ್ಷಿಗಳಂತೆ ಕಾದಿದ್ದಾರೆ. ಪ್ರಸ್ತುತ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಹೊಣೆಯನ್ನು ಮಾಜಿ ಸಂಸದ ಹಾಗೂ ಮಾಜಿ ಸಚಿವ ಜಿ.ಪುಟ್ಟ ಸ್ವಾಮಿಗೌಡ ಅವರ ಸೊಸೆ ಮತ್ತು ಮೊಮ್ಮಗ ಶ್ರೇಯಸ್‌ ಎಂ ಪಟೇಲ್‌ ಹೆಗಲಿಗೆ ಬೀಳುವುದು ಬಹುತೇಕ ಗ್ಯಾರಂಟಿ ಆಗಿದೆ.

ಇದೀಗ ಶ್ರೇಯಸ್‌ ಪಟೇಲ್‌ ಮತ್ತು ಅನುಪಮ ಅವರುಗಳು ಪಕ್ಷವನ್ನು ತಳಮಟ್ಟದಿಂದ ಕಟ್ಟಲು ಮುಂದಾಗಿರುವುದು ಕ್ಷೇತ್ರದ ಮತದಾರರಲ್ಲಿ ಮತ್ತುಷ್ಟು ಹುರುಪು ಹೆಚ್ಚಿಸಿದೆ. ಮುಂದಿನ ನಾಲ್ಕಾರು ತಿಂಗಳಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಬದಲಾವಣೆಯ ಗಾಳಿ ಬೀಸಿಲಿದೆ ಅನ್ನೋದು ಆಯಾಯಾ ಪಕ್ಷಗಳ ಕಾರ್ಯಕರ್ತರ ಅಭಿಪ್ರಾಯವಾಗಿದೆ.

ಟಾಪ್ ನ್ಯೂಸ್

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

1-weqwe

Lebanon ಪೇಜರ್‌ ಸ್ಫೋ*ಟಕ್ಕೆ ಮೊಸಾದ್‌ 2 ವರ್ಷದ ಯೋಜನೆ ಹೇಗಿತ್ತು?

Crime-2-Sulya

Sulya: ವಾರಂಟ್‌ ಆರೋಪಿ ಪರಾರಿ ಪ್ರಕರಣ; ಆರೋಪಿಯ ಮಾಹಿತಿಗೆ ಪೊಲೀಸರ ಮನವಿ

Shabarimale

Sabarimala;ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್‌ಲೈನ್‌ ನೋಂದಣಿ ಕಡ್ಡಾಯ

1-canda

Canada: ವೇಟರ್‌ ಕೆಲಸಕ್ಕೆ 3,000 ಭಾರತೀಯ ವಿದ್ಯಾರ್ಥಿಗಳ ಕ್ಯೂ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivalinge-Gowda

CM ಸಿದ್ದರಾಮಯ್ಯ ರಾಜೀನಾಮೆ ಸಲ್ಲದು; ಶಾಸಕ ಶಿವಲಿಂಗೇಗೌಡ

5-hasan

Hasana:ಅನಾರೋಗ್ಯ: 3 ದಿನಗಳಿಂದ ನಿಂತಲ್ಲೇ ನಿಂತಿದ್ದ ಕಾಡಾನೆ ಸಾವು

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

11

Hasan: 100 ರೂ.ಗೆ ಸ್ನೇಹಿನನ್ನೇ ಹತ್ಯೆಗೈದ ಕಿರಾತಕರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

Mangaluru: ಅಸಭ್ಯ ವರ್ತನೆ, ಹಲ್ಲೆ ಘಟನೆ ಯುವಕನನ್ನು ಕೆಲಸದಿಂದ ತೆಗೆದ ಮಾಲಕರು

POlice

Gangolli: ಶ್ರೀ ಮಹಾಂಕಾಳಿ ದೇಗುಲದ ಅಡವಿರಿಸಿದ್ದ 256 ಗ್ರಾಂ ಚಿನ್ನಾಭರಣ ವಶ

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.