ನಫೆಡ್‌ಗೆ ಕೊಬ್ಬರಿ ಕೊಟ್ಟ ಬಳಿಕ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳ

ಕೊಬ್ಬರಿ ಮಾರಾಟ ಮಾಡಿದ ಬಳಿಕ ಕೈ ಹಿಸುಕಿಕೊಳ್ಳುತ್ತಿರುವ ರೈತರು

Team Udayavani, Dec 4, 2020, 12:33 PM IST

ನಫೆಡ್‌ಗೆ ಕೊಬ್ಬರಿ ಕೊಟ್ಟ ಬಳಿಕ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳ

ಅರಸೀಕೆರೆ: ತಾಲೂಕಿನ ತೆಂಗು ಬೆಳೆಗಾರರ ಬದುಕು ಹಾವು ಏಣಿ ಆಟದಂತಾಗಿದ್ದು ಮಳೆ-ಬೆಳೆ ಇದ್ದಾಗಮಾರುಕಟ್ಟೆಯಲ್ಲಿ ಬೆಲೆ ಇಲ್ಲ. ಬೆಲೆ ಇದ್ದಾಗ ರೈತರ ಕೈಯಲ್ಲಿ ಬೆಳೆ ಇಲ್ಲ.

ಕಡಿಮೆ ಬೆಲೆಗೆ ಕೊಬ್ಬರಿ ಮಾರಾಟ: ಮಳೆ ಕೊರತೆ, ನುಸಿ ಪೀಡೆ ಸೇರಿದಂತೆ ವಿವಿಧ ಕೀಟ ದಾಳಿಯ ಜತೆಗೆ ಮಾರುಕಟ್ಟೆ ಯಲ್ಲಿ ಕೊಬ್ಬರಿ ಧಾರಣೆ ಕುಸಿತದಿಂದ ಕಂಗಾಲಾಗಿದ್ದ ತೆಂಗು ಬೆಳೆಗಾರರು, ಬೆಳೆದ ಬೆಳೆಯನ್ನು ಈಗಾಗಲೇ ನಫೆಡ್‌ ಮೂಲಕ ಕಡಿಮೆ ಬೆಲೆಗೆ ಕೊಟ್ಟಿರುವುದಕ್ಕೆ ತಮ್ಮ ಕೈಯನ್ನು ತಾವೇ ಹಿಸುಕಿ ಕೊಳ್ಳುವಂತೆ ಮಾಡಿದೆ.

ಮತ್ಯಾರಿಗೋ ಲಾಭ ತರುತ್ತಿದೆ: ಕಳೆದ ಕೆಲವು ತಿಂಗಳಿಂದ 8 ಸಾವಿರದ ಆಸುಪಾಸಿನಲ್ಲಿ ಇದ್ದ ಕೊಬ್ಬರಿ ಬೆಲೆ, ಕಳೆದ ಕೆಲವು ದಿನಗಳಿಂದ ಮಾರುಕಟ್ಟೆಯಲ್ಲಿ ಏರು ಮುಖದಲ್ಲಿ ಸಾಗುತ್ತಿದೆ. ಮಂಗಳವಾರದ ಟೆಂಡರ್‌ನಲ್ಲಿ 14 ಸಾವಿರಗಡಿದಾಟುವ ಮೂಲಕ ತೆಂಗು ಬೆಳೆಗಾರರ ಖುಷಿಗೆ ಮಣ್ಣೆರಚಿದಂತಾಗಿದೆ. ಕಾರಣ ಈಗಾಗಲೇ ಬಹುತೇಕ ರೈತರು, ನಫೆಡ್‌ ಮೂಲಕಕೊಬ್ಬರಿಯನ್ನುಮಾರಾಟ ಮಾಡಿದ್ದು ಬೆಲೆ ಏರಿಕೆ ಲಾಭ ರೈತನ ಹೆಸರಿನಲ್ಲಿ ಮತ್ಯಾರಿಗೋ ಆಗುತ್ತಿದೆ.

ಕಾಯಿ ಕೊಬ್ಬರಿ ಸೇರಿದಂತೆ ರೈತ ಬೆಳೆಯುವ ಯಾವುದೇ ಬೆಳೆಯಾಗಲಿ, ಸರ್ಕಾರ ಮಾರುಕಟ್ಟೆಯಲ್ಲಿ ಸ್ಥಿರ ಬೆಲೆ ಕಾಯ್ದುಕೊಳ್ಳದೆ ಹೋದರೆರೈತನ ಬೆವರು ಮತ್ತು ಶ್ರಮ ಮತ್ಯಾರಿಗೋ ಲಾಭ ತಂದು ಕೊಡುತ್ತದೆ ಎಂದು ಜಿಲ್ಲಾ ರೈತ ಸಂಘದರಾಜ್ಯ ಸಂಚಾಲಕ ಕನಕಂಚೇನಳ್ಳಿ ಪ್ರಸನ್ನಕುಮಾರ್‌ ಆಕ್ರೋಶ ವ್ಯಕ್ತಪಡಿಸುತ್ತಾರೆ.

ಕೊಬ್ಬರಿ ಬೇಡಿಕೆ ಹೆಚ್ಚಾಗುತ್ತಿದೆ :  ತಾಲೂಕಿನ ತೆಂಗು ಬೆಳೆಗಾರರು ತಾವು ಕಷ್ಟಪಟ್ಟು ಬೆಳೆದಿದ್ದ ಕೊಬ್ಬರಿಯನ್ನು ಈಗಾಗಲೇ ನಫೆಡ್‌ ಮೂಲಕ ಮಾರಾಟ ಮಾಡಿರುವುದರಿಂದ ಮಾರುಕಟ್ಟೆಗೆಕೊಬ್ಬರಿ ಬರುತ್ತಿಲ್ಲ. ಮಹಾರಾಷ್ಟ್ರ,ದೆಹಲಿ, ಮಧ್ಯಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಚಳಿಗಾಲ ಆರಂಭವಾಗಿರುವುದರಿಂದ ಕೊಬ್ಬರಿಗೆ ಬೇಡಿಕೆ ಹೆಚ್ಚಾಗಿರುವುದರಿಂದ ಧಾರಣೆ ಏರಿಕೆಕಾಣಲು ಕಾರಣವಾಗಿದೆ ಎನ್ನುತ್ತಾರೆ ಇಲ್ಲಿನ ವರ್ತಕರು.

ಪ್ರೋತ್ಸಾಹಧನ ನೀಡದಿದ್ದರೆ ಹೋರಾಟ : ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆ ನೆಲ ಕಚ್ಚಿದ್ದರಿಂದ ಕೇಂದ್ರ ಸರ್ಕಾರ ‌10,300 ರೂ. ಬೆಂಬಲ ನೀಡಿ ರೈತರಿಂದ  ‌ಕೊಬ್ಬರಿ ಖರೀದಿ ಮಾಡಿತು. ಈ ವೇಳೆ ರಾಜ್ಯ ಸರ್ಕಾರ ಸಾವಿರ ‌ ಪ್ರೋತ್ಸಾಹಧನ ‌ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ, ಇದುವರೆಗೂ ರೈತರಿಗೆ ನೀಡಿಲ್ಲ. ಸರ್ಕಾರ ತಾನುಕೊಟ್ಟ ಮಾತಿನಂತೆ ನಡೆದುಕೊಳ್ಳದೆ ಹೋದರೆ ತೆಂಗು ಬೆಳೆಗಾರರ ಹಿತಕಾಯುವ ‌ ದೃಷ್ಟಿಯಿಂದ ಪ್ರತಿಭಟನೆ ನಡೆಸಬೇಕಾಗುತ್ತದೆಂದು ಶಾಸಕ ‌ಕೆ.ಎಂ. ಶಿವಲಿಂಗೇಗೌಡ ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾಸನದಲ್ಲೂ ಮೂವರು ಬಾಂಗ್ಲಾ ವಲಸಿಗರ ಬಂಧನ

Hassan: ಮೂವರು ಬಾಂಗ್ಲಾ ವಲಸಿಗರ ಬಂಧನ

Hassan: ಎಂಪಿ ಮತದಾನಕ್ಕೆ ಕಾಂಗ್ರೆಸ್‌ನಿಂದ 65 ಕೋಟಿ ರೂ. ಖರ್ಚು: ದೇವರಾಜೇಗೌಡ

Hassan: ಎಂಪಿ ಮತದಾನಕ್ಕೆ ಕಾಂಗ್ರೆಸ್‌ನಿಂದ 65 ಕೋಟಿ ರೂ. ಖರ್ಚು: ದೇವರಾಜೇಗೌಡ

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

ಬೆದರಿಕೆಗೆ ಗೌಡರ ಕುಟುಂಬ ಜಗ್ಗದು: ಎಚ್‌.ಡಿ. ರೇವಣ್ಣ

H.D. Revanna: ಬೆದರಿಕೆಗೆ ಗೌಡರ ಕುಟುಂಬ ಜಗ್ಗದು

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.