ಜಿಲ್ಲೆಯಿಂದ ದೂರಾಗುತ್ತಿದ್ದಾರೆಯೇ ದೊಡ್ಡ ಗೌಡರು ?


Team Udayavani, Sep 11, 2019, 11:26 AM IST

hasan-tdy-1

ಹಾಸನ: ಲೋಕಸಭಾ ಚುನಾವಣೆ ಮಗಿದ ನಂತರ ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ತವರು ಜಿಲ್ಲೆ ಹಾಸನದ ಕಡೆ ಬರುವುದನ್ನೇ ಬಿಟ್ಟಿದ್ದಾರೆ. ಸಂಸದರಾಗಿದ್ದಾಗ ಕನಿಷ್ಠ ತಿಂಗಳಿಗೊಮ್ಮೆಯಾದರೂ ಹಾಸನ ಜಿಲ್ಲೆಯ ಯಾವು ದಾದರೊಂದು ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳುತ್ತಿದ್ದರು. ಆದರೆ ಲೋಕಸಭಾ ಚುನಾವಣಾ ಫ‌ಲಿತಾಂಶ ಪ್ರಕಟ ವಾದ 3 ತಿಂಗಳ ನಂತರ ಎರಡು ಬಾರಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದನ್ನು ಬಿಟ್ಟರೆ ಹಾಸನ ಜಿಲ್ಲೆಗೆ ಬರಲು ದೇವೇಗೌಡರು ಆಸಕ್ತಿ ತೋರುತ್ತಿಲ್ಲ.

ಕಾರ್ಯಕರ್ತರ ನಿರಾಸಕ್ತಿ: ಹಾಸನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಗೆಲ್ಲಿಸಿದ ಜಿಲ್ಲೆಯ ಮತದಾರರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಕೃತಜ್ಞನತಾ ಸಮಾ ವೇಶ ಮತ್ತು ರಾಜ್ಯ ಜೆಡಿಎಸ್‌ ಅಧ್ಯಕ್ಷರಾಗಿ ನೇಮಕ ವಾಗಿರುವ ಶಾಸಕ ಎಚ್.ಕೆ. ಕುಮಾರಸ್ವಾಮಿ ಅವರ ಅಭಿನಂದನಾ ಕಾರ್ಯಕ್ರಮ ಸೆ.5 ರಿಂದ ಸೆ.9 ವರೆಗೆ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲೂ ಆಯಾ ತಾಲೂಕು ಜೆಡಿಎಸ್‌ ವತಿಯಿಂದ ಹಮ್ಮಿಕೊಳ್ಳ ಲಾಗಿತ್ತು. ಈ ಕಾರ್ಯಕ್ರಮಗಳಲ್ಲಿ ದೇವೇಗೌಡರು ಪಾಲ್ಗೊಳ್ಳುವರು ಎಂದು ಪಕ್ಷದ ಮುಖಂಡರೂ ಹೇಳಿ ದ್ದರು. ಆದರೆ ಒಂದು ವಾರ ನಡೆದ ಈ ಕಾರ್ಯಕ್ರಮ ಗಳಲ್ಲೂ ದೇವೇಗೌಡರು ಭಾಗವಹಿಸಲಿಲ್ಲ. ದೇವೇ ಗೌಡರ ಆಗಮನದ ನಿರೀಕ್ಷೆಯಲ್ಲಿದ್ದ ಕಾರ್ಯಕರ್ತರು ಅವರು ಬರುವುದಿಲ್ಲವೆಂಬ ಮಾಹಿತಿ ಪಡೆದ ಕಾರ್ಯ ಕರ್ತರು ಎಲ್ಲಾ ತಾಲೂಕು ಕೇಂದ್ರಗಳಲ್ಲಿ ನಡೆದ ಸಭೆ ಗಳಿಗೂ ಬರುವ ಉತ್ಸಾಹ ತೋರಲಿಲ್ಲ. ಹಾಗಾಗಿ ಸಭೆಗಳಲ್ಲಿ ಕಾರ್ಯಕರ್ತರ ಕೊರತೆ ಎದ್ದು ಕಾಣುತ್ತಿತ್ತು.

ತುಮಕೂರು ಸೋಲಿನಿಂದ ಬೇಸರ? ತುಮಕೂರು ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ಸೋಲು ಹಾಗೂ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಪತನ ದೇವೇಗೌಡರಿಗೆ ಬಹಳ ಬೇಸರವಾಗಿರ ಬಹುದು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ದೇವೇಗೌಡರು ಹಾಸನ ಜಿಲ್ಲೆಯಿಂದಲೂ ದೂರ ವಾಗುತ್ತಿದ್ದಾರೆಯೇ ಎಂಬ ಅನುಮಾನ ದೇವೇಗೌಡ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರನ್ನು ಕಾಡುತ್ತಿದೆ.

ಒಂದೆರಡು ಚುನಾವಣೆಗಳನ್ನು ಹೊರತುಪಡಿಸಿದರೆ ಹಾಸನ ಜಿಲ್ಲೆಯ ಜನರು 80ರ ದಶಕದಿಂದಲೂ ದೇವೇಗೌಡರು ಮತ್ತು ಅವರ ಪಕ್ಷವನ್ನು ಕೈ ಬಿಟ್ಟಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಂದರೆ 2018ರ ಚುನಾವಣೆಯಲ್ಲಿ ಜಿಲ್ಲೆಯ 7 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದ ಹಾಸನ ಜಿಲ್ಲೆಯ ಮತದಾರರು ಕಳೆದ ಮೇ ನಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಬೀಸಿದ ಮೋದಿ ಅಲೆಯ ನಡುವೆಯೂ ದೇವೇಗೌಡ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು 1.42 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ ಹಾಸನ ಜಿಲ್ಲೆಯ ಜನರು ದೇವೇಗೌಡರ ಕೈಬಿಡುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಆದರೂ ದೇವೇಗೌಡರೇಕೆ ಜಿಲ್ಲೆ ಯಿಂದ ದೂರವಾಗುತ್ತಿದ್ದಾರೆ? ತುಮಕೂರು ಲೋಕ ಸಭಾ ಕ್ಷೇತ್ರದಲ್ಲುಂಟಾದ ಸೋಲು ದೇವೇಗೌಡರಿಗೆ ನೋವು ಉಂಟು ಮಾಡಿರಬಹುದು. ಆದರೆ ಅಷ್ಟೇ ನೋವು, ಸಂಕಟವನ್ನು ಹಾಸನ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು, ದೇವೇಗೌಡರ ಅಭಿಮಾನಿಗಳು ಅನು ಭವಿಸಿದ್ದಾರೆ. ಆ ಸೋಲಿನಿಂದ ದೇವೇಗೌಡರು ಎದೆಗುಂದುವುದು ಬೇಡ. ದೇವೇಗೌಡರು ಮುಖ್ಯ ಮಂತ್ರಿಯಾಗಿ, ಪ್ರಧಾನ ಮಂತ್ರಿಯಾಗಿ, ಅವರ ಮಗ ಎಚ್.ಡಿ.ರೇವಣ್ಣ ಅವರೂ ಹಾಸನ ಜಿಲ್ಲೆಯ ಅಭಿವೃದ್ಧಿಗೆ ಬಹಳ ಕೊಡುಗೆ ನೀಡಿದ್ದಾರೆ. ಅದನ್ನು ಜಿಲ್ಲೆಯ ಜನರು ಮರೆತಿಲ್ಲ. ಆದ್ದರಿಂದ ದೇವೇಗೌಡರು ಹಾಸನ ಜಿಲ್ಲೆಯತ್ತ ಬರಲಿ ಎಂಬುದು ಮಾತ್ರ ಜೆಡಿಎಸ್‌ ಕಾರ್ಯಕರ್ತರ ಒತ್ತಾಯ.

ಮೊಮ್ಮಗನಿಗಾಗಿ ಕ್ಷೇತ್ರ ತ್ಯಾಗ: ಲೋಕಸಭಾ ಚುನಾ ವಣೆಗೆ ಹಾಸನ ಲೋಕಸಭಾ ಕ್ಷೇತ್ರದಿಂದಲೇ ದೇವೇ ಗೌಡರು ಸ್ಪರ್ಧೆಗಿಳಿಯಬೇಕು. ಅವರ ವಯಸ್ಸಿನ ದೃಷ್ಟಿಯಿಂದ ಅವರ ರಾಜಕೀಯ ಜೀವನದ ಕೊನೆಯ ಚುನಾವಣೆಯಲ್ಲಿ ಜಿಲ್ಲೆಯ ಮಣ್ಣಿನ ಮಗ ನಿಗೆ ಒಂದು ಓಟು ಹಾಕಬೇಕು ಎಂಬುದು ಜಿಲ್ಲೆಯ ಬಹುಜನರ ಬಯಕೆಯಾಗಿತ್ತು. ಆದರೆ ತಮ್ಮ ಕುಟುಂಬದ ಮೂರನೇ ತಲೆಮಾರು ಹಾಸನ ಜಿಲ್ಲೆಯ ರಾಜಕಾರಣದಲ್ಲಿ ನೆಲೆಯೂರಲು ದೇವೇಗೌಡರು ತಮ್ಮ ಮೊಮ್ಮಗನಿಗೆ ಹಾಸನ ಕ್ಷೇತ್ರ ವನ್ನು ಧಾರೆ ಎರೆದು ಮೊಮ್ಮಗನನ್ನು ಕೈ ಬಿಡಬೇಡಿ ಎಂಬ ಮನವಿಗೂ ಜಿಲ್ಲೆಯ ಜನ ಸ್ಪಂದಿಸಿದ್ದಾರೆ. ದೇವೇಗೌಡರು ಜಿಲ್ಲೆಗೆ ಬರಲಿ ಎಂಬುದು ಜೆಡಿಎಸ್‌ ಕಾರ್ಯಕರ್ತರ ಬಯಕೆ.

 

● ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.