ಸೇನೆ, ಪೊಲೀಸ್‌ ಇಲಾಖೆಗೆ ಸೇರಿ ದೇಶ ಸೇವೆ ಮಾಡಿ; ಹರಿರಾಮ್‌ ಶಂಕರ್‌

ಇಂದಿನಿಂದ ದೇಶ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದು ಒಳಿತು

Team Udayavani, Aug 26, 2022, 6:13 PM IST

ಸೇನೆ, ಪೊಲೀಸ್‌ ಇಲಾಖೆಗೆ ಸೇರಿ ದೇಶ ಸೇವೆ ಮಾಡಿ; ಹರಿರಾಮ್‌ ಶಂಕರ್‌

ಚನ್ನರಾಯಪಟ್ಟಣ: ವಿದ್ಯಾವಂತ ಯುವ ಸಮುದಾಯ ಅಗ್ನಿಪಥ್‌ ಅಥವಾ ಪೊಲೀಸ್‌ ಇಲಾಖೆಗೆ ಸೇರುವ ಮೂಲಕ ದೇಶ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌ ತಿಳಿಸಿದರು.

ಪಟ್ಟಣದ ನವೋದಯ ಶಾಲಾ ಆವರಣದಲ್ಲಿ ಭಾರತ ಸೇವಾ ದಳ ಹಾಗೂ ಕಸಾಪ ಕಸಬಾ ಹೋಬಳಿ ಘಟಕದಿಂದ ನಡೆದ ನಿವೃತ್ತ ಯೋಧರಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ದೇಶ ಪ್ರೇಮ ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಗ್ನಿಪಥ್‌ ಯೋಜನೆ ಸಾಕಷ್ಟು ಮಂದಿಗೆ ಉಪಯೋಗವಾಗುತ್ತಿದೆ. ಇಲ್ಲಿ ಉದ್ಯೋಗ ಪಡೆದು ಹೊರ ಬಂದವರು ಶಿಸ್ತು ಹಾಗೂ ದೇಶ ಪ್ರೇಮ ಮೈಗೂಡಿಸಿಕೊಳ್ಳುತ್ತಾರೆ ಎಂದು ಹೇಳಿದರು.

ಸೇನೆ, ಪೊಲೀಸ್‌ ಸೇವೆಗೆ ಸೇರಿ: ಉನ್ನತ ಶಿಕ್ಷಣ ಕಲಿತು ಉದ್ಯೋಗದ ಬಗ್ಗೆ ಆಲೋಚನೆ ಮಾಡುವ ವೇಳೆ ಸಮವಸ್ತ್ರ ಧರಿಸಿ ಉದ್ಯೋಗ ಮಾಡುವುದನ್ನು ಆರಿಸಿಕೊಳ್ಳಿ. ಪೊಲೀಸ್‌ ಅಥವಾ ಸೇನೆಗೆ ಸೇರುವುದು ಒಳಿತು. ಈ ಎರಡೂ ಹುದ್ದೆಯಲ್ಲಿ  ನೀವು ಧರಿಸುವ ಸಮವಸ್ತ್ರ ನಿಮಗೆ ಆತ್ಮಸ್ಥೆರ್ಯ ಹೆಚ್ಚಿಸುತ್ತದೆ. ದೇಶ ಪ್ರೇಮ, ಸೇವಾ ಮನೋಭಾವ ಮೂಡಿಸುತ್ತದೆ ಎಂದರು.

ಯೋಧ, ರೈತನನ್ನು ಸ್ಮರಿಸಿ: ಕಸಾಪ ಜಿಲ್ಲಾಧ್ಯಕ್ಷ ಪ್ರೋ.ಮಲ್ಲೇಶಗೌಡ ಮಾತನಾಡಿ, ಕನ್ನಡಿಗರಿಗೆ ಹೃದಯ ವಿಶಾಲವಾಗಿದ್ದು ಎಲ್ಲಾ ಭಾಷಿಕರೊಂದಿಗೆ ಉತ್ತಮ ಸ್ನೇಹ ಹೊಂದಿರುತ್ತಾರೆ. ಸೈನಿಕರು ಚಳಿಮಳೆ ಎನ್ನದೆ ಗಡಿಯಲ್ಲಿ ದೇಶ ಕಾಯುತ್ತಿರುವುದರಿಂದ ದೇಶ ಒಳಗಿರುವ ನಾವು ಸಕಾಲಕ್ಕೆ ಊಟ ನಿದ್ರೆ ಮಾಡುತ್ತಿದ್ದೇವೆ. ನಿತ್ಯವೂ ರೈತ, ಸೈನಿಕರ ಸೇವೆ ಯನ್ನು ಸ್ಮರಿಸಬೇಕು ಎಂದರು.

12 ಲಕ್ಷ ಕೋಟಿ ರೂ.ವೆಚ್ಚ: ದೇಶದ ರಕ್ಷಣಾ ವಲಯಕ್ಕೆ 12 ಲಕ್ಷ ಕೋಟಿ ರೂ.ವೆಚ್ಚ ಮಾಡಲಾಗುತ್ತಿದೆ. ವಿಶ್ವ ಮಾನವ ಸಂದೇಶವನ್ನು ಎಲ್ಲ ದೇಶದವರು ಅರಿತರೆ ಪ್ರತಿ ದೇಶಗಳು ಸೇನೆಗೆ ವೆಚ್ಚ ಮಾಡುವುದು ಕಡಿಮೆಯಾಗಲಿದೆ. ಇಡಿ ವಿಶ್ವದಲ್ಲಿ ಶೇ.25 ರಷ್ಟು ಹಣ ಸೇನೆ ವೆಚ್ಚ ಮಾಡಲಾಗುತ್ತಿದೆ. ಈ ಹಣದಿಂದ ಅಭಿವೃದ್ಧಿ ಕೆಲಸ ಮಾಡುವ ಮೂಲಕ ಎಲ್ಲರೂ ಸಹೋದರತ್ವದಿಂದ ಬದುಕು ನಡೆಸುವುದನ್ನು ರೂಢಿಸಿಕೊಳ್ಳಬೇಕು ಎಂದರು.

ಚುನಾವಣೆ ಪಾರದರ್ಶಕತ್ವಕ್ಕೆ ಖಾಕಿ, ಸೇನೆ ಕಾರಣ: ಶಾಸಕ ಸಿ.ಎನ್‌.ಬಾಲಕೃಷ್ಣ ಮಾತನಾಡಿ, ದೇಶದಲ್ಲಿ ಚುನಾವಣೆಗಳು ಪಾರದರ್ಶಕವಾಗಿ ನಡೆಯುತ್ತಿರುವುದು ಪೊಲೀಸ್‌ ಹಾಗೂ ಸೇನೆಯವರು ಮಾಡುವ ಕರ್ತವ್ಯದಿಂದ. ಇಲ್ಲದೆ ಹೋದರೆ ಚುನಾವಣೆಯಲ್ಲಿ ಸಾಕಷ್ಟು ಭ್ರಷ್ಟಾಚಾರಗಳು ನಡೆದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕುತ್ತು ಬರುತ್ತಿತ್ತು ಎಂದರು. ಭಾರತ ಉತ್ತಮವಾದ ಭೌಗೋಳಿಕ ಪ್ರದೇಶ ಹೊಂದಿದೆ. ಕಣಿವೆ ಪ್ರದೇಶಗಳು ಈ ದೇಶದ ಶೇ.50ರಷ್ಟು ರಕ್ಷಣೆಯನ್ನು ನೀಡುತ್ತಿವೆ. ಉಳಿದ 50ರಷ್ಟು ರಕ್ಷಣೆ ಸೇನೆಯಿಂದ ದೊರೆಯುತ್ತಿದೆ. ಇಂತಹ ನೆಲದಲ್ಲಿ ಜನ್ಮ ಪಡೆದ ನಾವು ಪುಣ್ಯವಂತರು. ದೇಶಕ್ಕಾಗಿ ನಾವು ಏನು ಮಾಡುತ್ತಿದ್ದೇವೆ ಎನ್ನುವುದನ್ನು ಮನಗಂಡು ಇಂದಿನಿಂದ ದೇಶ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದು ಒಳಿತು ಎಂದರು.

ನಿವೃತ್ತ ಸೈನಿಕರಾದ ಪುಟ್ಟರಾಜು, ದೇವೆಂದ್ರಪ್ಪ, ಆಗಸ್ಟೀನ್‌ ಅವರನ್ನು ಕಸಾಪ ಹಾಗೂ ಭಾರತ ಸೇವಾ ದಳದಿಂದ ಸನ್ಮಾನಿಸಲಾಯಿತು. 75ನೇ ಅಮೃತ ಮಹೋ ತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಭಾರತ ಸೇವಾ ದಳದಿಂದ ಬಹುಮಾನ ವಿತರಣೆ ಮಾಡಲಾಯಿತು.

ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಪ್ರಸನ್ನ, ಬೊಮ್ಮೇಗೌಡ, ನವೋದಯ ಸಂಸ್ಥೆ ಅಧ್ಯಕ್ಷ ಆದಿಶೇಷಕುಮಾರ್‌, ಭಾರತ ಸೇವಾ ದಳದ ತಾ.ಅಧ್ಯಕ್ಷ ನವೀನ್‌, ವಲಯ ಸಂಘಟನಾಧಿಕಾರಿ ರಾಣಿ, ಕಸಾಪ ತಾ.ಅಧ್ಯಕ್ಷ ಲೋಕೇಶ್‌, ಕಸಬಾ ಹೋಬಳಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivalinge-Gowda

CM ಸಿದ್ದರಾಮಯ್ಯ ರಾಜೀನಾಮೆ ಸಲ್ಲದು; ಶಾಸಕ ಶಿವಲಿಂಗೇಗೌಡ

5-hasan

Hasana:ಅನಾರೋಗ್ಯ: 3 ದಿನಗಳಿಂದ ನಿಂತಲ್ಲೇ ನಿಂತಿದ್ದ ಕಾಡಾನೆ ಸಾವು

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

11

Hasan: 100 ರೂ.ಗೆ ಸ್ನೇಹಿನನ್ನೇ ಹತ್ಯೆಗೈದ ಕಿರಾತಕರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.