ಕರಿಯಮ್ಮ, ಮಲ್ಲಿಗಮ್ಮ ದೇವಿಯರ ಮಹಾರಥೋತ್ಸವ


Team Udayavani, May 3, 2019, 1:50 PM IST

has-2

ಅರಸೀಕೆರೆ: ನಗರದ ಗ್ರಾಮದೇವತೆ ಗಳಾದ ಕರಿಯಮ್ಮದೇವಿ ಮತ್ತು ಮಲ್ಲಿ ಗಮ್ಮ ದೇವಿಯವರ 50ನೇ ವರ್ಷದ ಸುವರ್ಣ ಸಂಭ್ರಮದ ಮಹಾ ರಥೋತ್ಸ ವವು ಗುರುವಾರ ಮಧ್ಯಾಹ್ನದಂದು ಶಾಸಕ ಕೆ.ಎಂ.ಶಿವಲಿಂಗೇಗೌಡರ ಸಮ್ಮು ಖದಲ್ಲಿ ಸಹಸ್ರಾರು ಭಕ್ತಾದಿಗಳ ನಡುವೆ ವಿಜೃಂಭಣೆಯಿಂದ ನಡೆಯಿತು.

ವಿಶೇಷ ಪೂಜೆ: ನಗರದ ಗ್ರಾಮ ದೇವತೆಗಳಾದ ಕರಿಯಮ್ಮದೇವಿ ಮತ್ತು ಮಲ್ಲಿಗಮ್ಮ ದೇವಿಯವರ 50ನೇ ವರ್ಷದ ಮಹಾರಥೋತ್ಸವದ ಅಂಗ ವಾಗಿ ಗುರುವಾರ ಬೆಳಗ್ಗೆ ಮೂಲ ಸನ್ನಿಧಿಯಲ್ಲಿ ವಿಶೇಷ ಪೂಜಾ ಕೈಂಕರ್ಯ ಗಳನ್ನು ಸಂಪ್ರದಾಯದಂತೆ ಶಾಸ್ತ್ರೋಕ್ತ ವಾಗಿ ನೆರವೇರಿಸಲಾಯಿತು.

ಮೂಲ ದೇವತೆ ಸನ್ನಿಧಿಯ ಆವರಣದಲ್ಲಿನ ಮಹಾರಥಕ್ಕೆ ವಿವಿಧ ಬಣ್ಣ,ಬಣ್ಣಗಳ ಬಾವುಟಗಳು ಮತ್ತು ಬಗೆ,ಬಗೆಯ ಹೂವು, ಹಾರಗಳಿಂದ ವಿನೂತನವಾಗಿ ಶೃಂಗರಿಸಿ ಪೂಜಾ ಕೈಂಕರ್ಯವನ್ನು ನಡೆಸಲಾಯಿತು.

ಮೆರುಗು ನೀಡಿದ ಮಂಗಳ ವಾದ್ಯ: ಮಂಗಳವಾದ್ಯಗಳಾದ ಚಿಟ್ಟೆ ಮೇಳ, ಕರಡೇ ವಾದ್ಯ, ತಮಟೆ ವಾದ್ಯಗಳು ಚೆಲುವರಾಯಸ್ವಾಮಿ, ದೂತ ರಾಯಸ್ವಾಮಿ, ಮಲ್ಲಿಗಮ್ಮದೇವಿ ಹಾಗೂ ಕೆಂಚರಾಯಸ್ವಾಮಿ ದೇವರು ಗಳ ಕುಣಿತ ಭಕ್ತ ಸಮೂಹಕ್ಕೆ ಆಕರ್ಷಣೆ ಕೇಂದ್ರ ಬಿಂದುವಾಗಿತ್ತು.

ಮಧ್ಯಾಹ್ನ 1.20 ಗಂಟೆಗೆ ಮಹಾ ರಥದಲ್ಲಿ ಕರಿಯಮ್ಮದೇವಿ ಮತ್ತು ಮಲ್ಲಿಗಮ್ಮದೇವಿಯ ಉತ್ಸವಮೂರ್ತಿ ಗಳನ್ನು ಕೂರಿಸಿದ ನಂತರ ಮಹಾರಥಕ್ಕೆ ಪೂಜೆ ಸಲ್ಲಿಸುವ ಮೂಲಕ ರಥಾ ರೋಹಣಕ್ಕೆ ಚಾಲನೆ ನೀಡುತ್ತಿದಂತೆ ಜಾತ್ರಾ ಮಹೋತ್ಸವದಲ್ಲಿ ನೆರದಿದ್ದ ಸಹಸ್ರಾರು ಭಕ್ತರು ಶ್ರೀದೇವಿ ನಾಮ ಸ್ಮರಣೆಯಲ್ಲಿ ಬಾಳೇಹಣ್ಣು ಹಾಗೂ ದವನ ಪುಷ್ಪಗಳನ್ನು ಮಹಾರಥದ ಮೇಲೆ ಎಸೆದು ತಮ್ಮ ಭಕ್ತಿಭಾವನೆಗಳನ್ನು ಸಮರ್ಪಿಸಿದರು.

ಗ್ರಾಮದೇವತೆ ದೇವಾಲಯ ಆಡ ಳಿತ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಸೇರಿದಂತೆ ಅನೇಕ ಗಣ್ಯರು ಮಹಾ ರಥೋತ್ಸವದಲ್ಲಿ ಭಾಗವಹಿಸಿ ದೇವರಿಗೆ ಧನ್ಯತಾ ಭಾವನೆಯ ಭಕ್ತಿ ಸಮರ್ಪಣೆ ಯನ್ನು ಮಾಡಿದರು. ಮಹಾರಥೋತ್ಸವ ನೇರವೇರಿದ ನಂತರ ದೇವಾಲಯ ಅಕ್ಕಪಕ್ಕದಲ್ಲಿ, ರಸ್ತೆಯ ಬದಿಗಳಲ್ಲಿ ಸಾರ್ವಜನಿಕರಿಗೆ ಪಾನಕ ಮತ್ತು ನೀರು ಮಜ್ಜಿಗೆ ಹಾಗೂ ಕೊಸಂಬರಿ ಪ್ರಸಾದ ವಿತರಿಸಲಾಯಿತು. ದೇವಾಲಯ ಆಡಳಿತ ಸಮಿತಿ ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಿತ್ತು.

ಅಂಬಾರಿ ಮೆರವಣಿಗೆ: ಶುಕ್ರವಾರ ಸಂಜೆ 4 ಗಂಟೆಗೆ ಶ್ರೀದೇವಿಯವರ ಮೂಲಸನ್ನಿಧಿಯಿಂದ ಸಕಲ ಬಿರು ದಾವಳಿಗಳ ಜೊತೆಗೆ ಮಂಗಳ ವಾದ್ಯ ಗಳೊಂದಿಗೆ ಹಾಗೂ ಸಾಂಸ್ಕೃತಿಕ ಕಲಾ ತಂಡಗಳ ಪ್ರದರ್ಶನದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಆನೆಯ ಅಂಬಾರಿ ಯಲ್ಲಿ ಕರಿಯಮ್ಮದೇವಿ ಮತ್ತು ಮಲ್ಲಿಗಮ್ಮ ದೇವಿಯವರ ಆದ್ದೂರಿ ಮೆರವಣಿಗೆಯನ್ನ ಏರ್ಪಡಿಸಲಾಗಿದೆ. ಭಕ್ತಾದಿಗಳು ತಮ್ಮ ತಮ್ಮ ಮನೆಗಳ ಮುಂದೆ ತಳಿರು ತೋರಣ ಹಾಗೂ ರಂಗೋಲಿ ಹಾಕುವ ಮೂಲಕ ಮೆರವಣಿಗೆಯನ್ನು ಸ್ವಾಗತಿಸಲು ಸಜ್ಜಾಗುವಮತೆ ದೇವಾಲಯ ಸಮಿತಿ ಮನವಿ ಮಾಡಿದೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

ಬೆದರಿಕೆಗೆ ಗೌಡರ ಕುಟುಂಬ ಜಗ್ಗದು: ಎಚ್‌.ಡಿ. ರೇವಣ್ಣ

H.D. Revanna: ಬೆದರಿಕೆಗೆ ಗೌಡರ ಕುಟುಂಬ ಜಗ್ಗದು

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

Shivalinge-Gowda

CM ಸಿದ್ದರಾಮಯ್ಯ ರಾಜೀನಾಮೆ ಸಲ್ಲದು; ಶಾಸಕ ಶಿವಲಿಂಗೇಗೌಡ

5-hasan

Hasana:ಅನಾರೋಗ್ಯ: 3 ದಿನಗಳಿಂದ ನಿಂತಲ್ಲೇ ನಿಂತಿದ್ದ ಕಾಡಾನೆ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.