ಜಿಲ್ಲೆಯಲ್ಲಿ ಶೇ.61 ಮುಂಗಾರು ಮಳೆ ಕೊರತೆ 


Team Udayavani, Jul 4, 2023, 3:33 PM IST

ಜಿಲ್ಲೆಯಲ್ಲಿ ಶೇ.61 ಮುಂಗಾರು ಮಳೆ ಕೊರತೆ 

ಹಾಸನ: ಜಿಲ್ಲೆಯಲ್ಲಿ ಜೂನ್‌ನಲ್ಲಿ ಆರಂಭವಾಗ ‌ಬೇಕಾಗಿದ್ದ ಮುಂಗಾರು ಮಳೆ ವಿಳಂಬವಾಗಿದ್ದು, ಶೇ.61 ಮಳೆ ಕೊರತೆಯಾಗಿದೆ. ಜಿಲ್ಲೆಯಲ್ಲಿ ಕಳೆದ ತಿಂಗಳಲ್ಲಿ ವಾಡಿಕೆ ಮಳೆ 171 ಮಿ.ಮೀ. ಆಗಬೇಕಾಗಿತ್ತು. ಆದರೆ, 67.5 ಮಿ.ಮೀ. ಮಾತ್ರ ಸುರಿದಿದ್ದು, ಶೇ.61 ಮಳೆ ಕೊರತೆಯಾಗಿದೆ.

ಈ ವರ್ಷ ಜನವರಿಯಿಂದ ಜೂನ್‌ ಅಂತ್ಯದವರೆಗೂ ಅರಸೀಕೆರೆ ಮತ್ತು ಚನ್ನರಾಯಪಟ್ಟಣ ತಾಲೂಕಿನಲ್ಲಿ ಮಾತ್ರ ವಾಡಿಕೆಗಿಂತ ಶೇ.13 ಹೆಚ್ಚು ಮಳೆಯಾಗಿದ್ದು, ಇನ್ನುಳಿದ 6 ತಾಲೂಕುಗಳಲ್ಲಿ ಕುಂಟಿತವಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ ಈ ವರ್ಷ ಜೂನ್‌ ಅಂತ್ಯದವರೆಗೂ ಶೇ.28 ಮಳೆಯ ಕೊರತೆಯಾಗಿದೆ. ಮಲೆನಾಡು ಭಾಗಗಳಾದ ಸಕಲೇಶಪುರದಲ್ಲಿ ಶೇ.57, ಆಲೂರು ತಾಲೂಕಿನಲ್ಲಿ ಶೇ.35 ಮಳೆ ಕೊರತೆಯಾಗಿದೆ.

ಬೆಳೆಗಳ ಬಿತ್ತನೆ ಶೇ.36.81 ಮಾತ್ರ: ಮಳೆ ಕೊರತೆ ಯಿಂದ ವಿವಿಧ ಬೆಳೆಗಳ ಬಿತ್ತನೆಗೂ ಹಿನ್ನಡೆಯಾಗಿದ್ದು, ಇದುವರೆಗೆ ಕೇವಲ ಶೇ.36.81 ರಷ್ಟು ಮಾತ್ರ ಬಿತ್ತನೆ ಯಾಗಿದೆ. ಜಿಲ್ಲೆಯಲ್ಲಿ 2,45,569 ಹೆಕ್ಟೇರ್‌ ಬಿತ್ತನೆಯ ಗುರಿಯಿದ್ದು, ಈವರೆಗೆ 90,389 ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆಯಾಗಿದೆ. ರಾಗಿ ಬಿತ್ತನೆ ಗುರಿ 69,000 ಹೆಕ್ಟೇರ್‌ನಲ್ಲಿ ಬಿತ್ತನೆ ಗುರಿಗೆ ಬದಲಾಗಿ 1,240 ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆಯಾಗಿದ್ದು, ಕೇವಲ ಶೇ.1.80ರಷ್ಟು ಗುರಿ ಸಾಧನೆ ಯಾಗಿದೆ. ಮುಸುಕಿನ ಜೋಳದ ಬಿತ್ತನೆ ಗುರಿ 1,05,300 ಹೆಕ್ಟೇರ್‌ಗೆ ಈವರೆಗೆ 63,357 ಹೆಕ್ಟೇರ್‌ ಸಾಧನೆಯಾಗಿದ್ದು, ಶೇ.60.55 ರಷ್ಟು ಗುರಿ ಸಾಧನೆಯಾಗಿದೆ.

ಗುರಿ ಸಾಧನೆಯಲ್ಲೂ ಹಿನ್ನಡೆ: ದ್ವಿದಳ ಧಾನ್ಯಗಳ ಬಿತ್ತನೆ ಗುರಿ 19,380 ಹೆಕ್ಟೇರ್‌ ಇದ್ದು, ಈವರೆಗೆ 13,979 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿ ಶೇ.72.11 ಗುರಿ ಸಾಧನೆ ಯಾಗಿದೆ. ಎಣ್ಣೆಕಾಳುಗಳ ಬಿತ್ತನೆ ಗುರಿ 30,25 ಹೆಕ್ಟೇರ್‌ಗೆ ಬದಲಾಗಿ 759 ಹೆಕ್ಟೇರ್‌ ಬಿತ್ತನೆಯಾಗಿ ಶೇ.25.9 ರಷ್ಟು ಗುರಿ ಸಾಧನೆಯಾಗಿದ್ದರೆ, ವಾಣಿಜ್ಯ ಬೆಳೆಗಳ ಬಿತ್ತನೆ ಗುರಿ 12914 ಹೆಕ್ಟೇರ್‌ಗೆ ಬದಲು 10,547 ಹೆಕೇರ್‌ ಬಿತ್ತನೆಯಾಗಿ ಶೇ.81.6 ಸಾಧನೆಯಾಗಿದೆ.

ಪ್ರಸಕ್ತ 2000 ಹೆಕ್ಟೇರ್‌ ನಲ್ಲಿ ಮಾತ್ರ ಆಲೂಗಡ್ಡೆ ಬಿತ್ತನೆ: 

ಹಾಸನ: ಈ ವರ್ಷ ಮುಂಗಾರು ಮಳೆಯ ಕೊರತೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೇವಲ 2000 ಹೆಕ್ಟೇರ್‌ನಲ್ಲಿ ಮಾತ್ರ ಆಲೂಗಡ್ಡೆ ಬಿತ್ತನೆಯಾಗಿದೆ.

ಎರಡು ದಶಕಗಳ ಹಿಂದೆ ಜಿಲ್ಲೆಯಲ್ಲಿ 1.50 ಲಕ್ಷ ಎಕರೆಯಲ್ಲಿ ಆಲೂಗಡ್ಡೆ ಬೆಳೆಯಲಾಗುತ್ತಿತ್ತು. ಆದರೆ ಮಳೆ ಹಾಗೂ ರೋಗ ಭಾದೆಯ ಪರಿಣಾಮ ಆಲೂಗಡ್ಡೆ ಬಿತ್ತನೆ ಪ್ರಮಾಣ ಕುಸಿಯುತ್ತಾ ಬಂದಿದ್ದು ಕಳೆದ 7 ಸಾವಿರ ಹೆಕ್ಟೇರ್‌ ನಲ್ಲಿ ಆಲೂಗಡ್ಡೆ ಬಿತ್ತನೆಯಾಗಿತ್ತು. ಈ ವರ್ಷ 7 ಸಾವಿರ ಹೆಕ್ಟೇರ್‌ನಲ್ಲಿ ಆಲೂಗಡ್ಡೆ ಬಿತ್ತನೆಯ ಗುರಿಯನ್ನು ತೋಟಗಾರಿಕೆ ಇಲಾಖೆ ಹೊಂದಿತ್ತು ಆದರೆ ಈ ವರ್ಷ ಬಿತ್ತನೆ ಪ್ರಮಾಣ 2 ಸಾವಿರ ಹೆಕ್ಟೇರ್‌ಗೆ ಕುಸಿದಿದೆ. ಬಿತ್ತನೆಯಾಗಿರುವ ಬೆಳೆಯೂ ಮಳೆ ಕೊರತೆಯಿಂದ ಶೇ. 50 ಕ್ಕಿಂತ ಹೆಚ್ಚು ಪ್ರಮಾಣದ ಬೆಳೆ ನಾಶವಾಗಿದೆ.

ಈ ವರ್ಷ ಜಿಲ್ಲೆಗೆ ಬಿತ್ತನೆ ಆಲೂಗಡ್ಡೆ ಪಂಜಾಬ್‌ನಿಂದ 4.5 ಲಕ್ಷ ಚೀಲಗಳು ಪೂರೈಕೆಯಾಗಿ ಹಾಸನದ ವಿವಿಧ ಶೀತಲಗೃಹಗಳಲ್ಲಿ ದಾಸ್ತಾನಾಗಿತ್ತು. ಆದರೆ ಹಾಸನ ಎಪಿಎಂಸಿಯಲ್ಲಿ ಈ ಬಾರಿ ಕೇವಲ 55 ಸಾವಿರ ಚೀಲಗಳು ಮಾತ್ರ ಮಾರಾಟವಾಗಿವೆ. ನೇರವಾಗಿ ಮಾರಾಟವಾಗಿರುವ ಆಲೂಗಡ್ಡೆಯೂ ಸೇರಿ ಒಟ್ಟು ಮಾರಾಟ ಒಂದು ಲಕ್ಷ ಚೀಲ ತಲಪಬಹುದು. ಆದರೆ ಇನ್ನುಳಿದ ಆಲೂಗಡ್ಡೆ ತರಕಾರಿಗಾಗಿ ಮಾರಾಟವಾಗುತ್ತಿದೆ.

-ಎನ್‌.ನಂಜುಂಡೇಗೌಡ

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

ಬೆದರಿಕೆಗೆ ಗೌಡರ ಕುಟುಂಬ ಜಗ್ಗದು: ಎಚ್‌.ಡಿ. ರೇವಣ್ಣ

H.D. Revanna: ಬೆದರಿಕೆಗೆ ಗೌಡರ ಕುಟುಂಬ ಜಗ್ಗದು

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

Shivalinge-Gowda

CM ಸಿದ್ದರಾಮಯ್ಯ ರಾಜೀನಾಮೆ ಸಲ್ಲದು; ಶಾಸಕ ಶಿವಲಿಂಗೇಗೌಡ

5-hasan

Hasana:ಅನಾರೋಗ್ಯ: 3 ದಿನಗಳಿಂದ ನಿಂತಲ್ಲೇ ನಿಂತಿದ್ದ ಕಾಡಾನೆ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.