ಮಳೆ ಕ್ಷೀಣ: ಕೃಷಿ ಚಟುವಟಿಕೆಗೆ ತೊಡಕು


Team Udayavani, Jul 3, 2023, 4:47 PM IST

ಮಳೆ ಕ್ಷೀಣ: ಕೃಷಿ ಚಟುವಟಿಕೆಗೆ ತೊಡಕು

ಸಕಲೇಶಪುರ: ಮಲೆನಾಡಿನಲ್ಲಿ ಮಳೆಗಾಲದಲ್ಲಿ ಬೀಳಬೇಕಾಗಿದ್ದ ಭರ್ಜರಿ ಮಳೆ ಸಂಪೂರ್ಣವಾಗಿ ಕಾಣೆಯಾಗಿದ್ದು ಇದರಿಂದ ಕೃಷಿ ಚಟುವಟಿಕೆಗಳಿಗೆ ಸಂಪೂರ್ಣ ತೊಡಕಾಗಿದೆ.

ತಾಲೂಕಿನಲ್ಲಿ ಮಳೆ ಈ ಬಾರಿ ಸಂಪೂರ್ಣವಾಗಿ ಕ್ಷೀಣಿಸಿದ್ದು ಜೂನ್‌ ತಿಂಗಳು ಮುಗಿದರು ಸಹ ಮಳೆ ಬಿರುಸಾಗುವ ಲಕ್ಷಣ ಗಳು ಕಾಣಿಸುತ್ತಿಲ್ಲ. ವಾಡಿಕೆಯಂತೆ ಮಳೆ ಸುರಿದಿದಲ್ಲಿ ರೈತರು ಕೃಷಿ ಚಟುವಟಿಕೆಗಳಲ್ಲಿ ಬಿಡುವಿಲ್ಲದೆ ಇರುವ ಪರಿಸ್ಥಿತಿ ನಿರ್ಮಾಣ ವಾಗುತ್ತಿತ್ತು. ಆದರೆ ವಾಡಿಕೆ ಮಳೆಯಾಗದ ಕಾರಣ ರೈತರು ನಿಧಾನವಾಗಿ ಕೃಷಿ ಚಟುವಟಿಕೆಗಳನ್ನು ಮಾಡುತ್ತಿದ್ದಾರೆ.

ಮಳೆ ಇಳಿಮುಖ: ಸಾಮಾನ್ಯವಾಗಿ ಜನವರಿಯಿಂದ ಜೂನ್‌ ಅಂತ್ಯದವರೆಗೆ 642 ಮಿ.ಮೀ. ಮಳೆಯಾ ಗಬೇಕಿತ್ತು. ಆದರೆ, ಈ ಬಾರಿ 273 ಮಿ. ಮೀ.ಮಳೆ ಯಾ ಗಿದ್ದು ಶೇ.57ರಷ್ಟು ಮಳೆ ಕೊರತೆಯಾಗಿದ್ದು, ಇದರಿಂದ ಮಳೆನಾಡಿನಲ್ಲಿ ಮಳೆಗಾಗಿ ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು ಇದೇ ಪರಿಸ್ಥಿತಿ ಮುಂದುವರೆದಲ್ಲಿ ಜಲಮೂಲಗಳು ಭತ್ತುವ ಸಾಧ್ಯತೆಯಿದೆ.

ಭತ್ತದ ಬಿತ್ತನೆ ವಿಳಂಬ: ಮಳೆಯ ಕೊರತೆಯಿಂದ ರೈತರು ಉಳುಮೆ, ಬಿತ್ತನೆ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಭತ್ತದ ಕೃಷಿಗೆ ನೀರಿನ ಕೊರತೆ ಯಿಂದ ಸಂಪೂರ್ಣ ಹಿನ್ನಡೆ ಉಂಟಾಗಿದೆ. ಪ್ರತಿವರ್ಷ ಜೂನ್‌ 2ನೇ ವಾರದೊಳಗೆ ಭತ್ತದ ಬಿತ್ತನೆ ಆಗುತ್ತಿತ್ತು. ಆದರೆ ಈ ಬಾರಿ ಕೆಲವರು ಮಾತ್ರ ಭತ್ತ ಭಿತ್ತನೆಗೆ ಸಿದ್ದತೆ ನಡೆಸುತ್ತಿದ್ದಾರೆ. ಭತ್ತದ ಬಿತ್ತನೆಗಾಗಿ ಗದ್ದೆ ಉಳುಮೆ ಮಾಡಿರುವರು ಮಳೆಗಾಗಿ ಕಾಯುವಂತಾಗಿದೆ.

ಇಳುವರಿ ಕಡಿಮೆ ಸಾಧ್ಯತೆ: ಸಾಮಾನ್ಯವಾಗಿ ಜೂನ್‌ ಮೊದಲ ವಾರದಲ್ಲಿ ಕಾಫಿ ತೋಟಗಳಲ್ಲಿ ಗೊಬ್ಬರ ಹಾಕುವುದು ವಾಡಿಕೆಯಾಗಿದೆ. ಆದರೆ, ಈ ಬಾರಿ ಹಲವು ಬೆಳೆಗಾರರು ಜೂನ್‌ ಮಾಹೆ ಮುಗಿದರು ಸಹ ಮಳೆ ಆಭಾವದ ಕಾರಣ ಗೊಬ್ಬರ ಹಾಕಲು ಮುಂದಾ ಗಿಲ್ಲ. ಇದರಿಂದಾಗಿ ಮುಂದಿನ ಹಂಗಾಮಿನಲ್ಲಿ ಕಾಫಿ ಫ‌ಸಲು ಕಡಿಮೆಯಾಗುವ ಸಾಧ್ಯತೆಯಿದೆ.

ಭೂಮಿಯಲ್ಲಿ ತೇವಾಂಶದ ಕೊರತೆ: ಕೆಲ ವರ್ಷ ಗಳಿಂದ ಅತಿವೃಷ್ಟಿಯಿಂದ ಕಾಫಿ, ಅಡಕೆ ಬೆಳೆಯಲ್ಲಿ ತೇವಾಂಶ ಹೆಚ್ಚಾಗಿ ಕೊಳೆ ರೋಗ ಕಾಣಿಸಿಕೊಳ್ಳುತ್ತಿತ್ತು. ಈ ಬಾರಿ ಕೊಳೆ ರೋಗ ಬರುವ ಪ್ರಮೇಯ ಇಲ್ಲ, ಬದಲಾಗಿ ತೇವಾಂಶದ ಅಭಾವದಿಂದ ಅಡಕೆ ಕಾಯಿಗಳು ನೆಲಕಚ್ಚುತ್ತಿವೆ. ಇನ್ನೊಂದೆಡೆ ಉಷ್ಣಾಂಶ ಹೆಚ್ಚಾಗಿ ಕಾಫಿ ಗಿಡಗಳು ಬೋರರ್‌ ಕಾಯಿಲೆಗೆ ತುತ್ತಾಗುತ್ತಿವೆ. ಅವಧಿಗೂ ಮುನ್ನವೇ ಅರೇಬಿಕ ಕಾಪಿ ಹಣ್ಣಾಗುತ್ತಿದ್ದು, ಗಿಡದಿಂದ ಉದುರಿ ಬೀಳುತ್ತಿದೆ.

ನದಿಗಳಲ್ಲಿ ಖಾಲಿಯಾಗಿರುವ ನೀರು: ತಾಲೂಕಿನಲ್ಲಿ ಹರಿಯುವ ಪ್ರಮುಖ ನದಿಯಾದ ಹೇಮಾವತಿ ಸೊರಗಿ ಹೋಗಿದ್ದು ನದಿಯಲ್ಲೆ ನೀರಿನ ಒಳಹರಿವೆ ಇಲ್ಲದಂತಾ ಗಿದೆ. ಇದೇ ರೀತಿ ಎತ್ತಿನಹೊಳೆ ಸೇರಿದಂತೆ ಸಣ್ಣಪುಟ್ಟ ನದಿಗಳು, ಹಳ್ಳಗಳು, ಕೆರೆಗಳಲ್ಲಿ ಸಹ ನೀರಿನ ಹರಿವು ಕಡಿಮೆಯಾಗಿದ್ದು ಮಳೆಯಾದಲ್ಲಿ ಮಾತ್ರ ನದಿಮೂಲಗಳು ತುಂಬಬಹುದಾಗಿದೆ. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ರೈತರು ತೀವ್ರ ಸಂಕಷ್ಟ ಎದುರಿ ಸಬೇಕಾಗುತ್ತದೆ. ಹೇಮಾವರಿ ತವರಿನಲ್ಲಿ ಮಳೆಯ ಕೊರತೆ ರೈತರ ಚಿಂತೆಗೆ ಕಾರಣವಾಗಿದೆ.

ಕಾಫಿ ಫ‌ಸಲು ಇಳಿಮುಖ ಸಾಧ್ಯತೆ: ಹವಾಮಾನ ವೈಪರೀತ್ಯದಿಂದಾಗಿ ಬೆಳೆಗಾರರಿಗೆ ಈ ಬಾರಿ ನಿರೀಕ್ಷಿಸಿದ ಫ‌ಸಲು ಕೈಗೆ ಬರುವ ಸಾಧ್ಯತೆ ಕಡಿಮೆಯಿದೆ. ಒಂದು ವೇಳೆ ಅಲ್ಪ ಪ್ರಮಾಣದಲ್ಲಿ ಕಾಫಿ ದೊರೆತರೂ, ಅಡಕೆ ಬೆಳೆಯಲ್ಲಿ ಬಹುಪಾಲು ನಷ್ಟ ಆಗುವ ಸಾಧ್ಯತೆಯಿದೆ. ಇದೀಗ ಮಳೆ ಪ್ರಮಾಣ ಕಡಿ ಮೆಯಾಗಿ ಅಕ್ಟೋಬರ್‌ ಹಾಗೂ ನವೆಂಬರ್‌ ಮಾಹೆಯಲ್ಲಿ ಮಳೆ ಸುರಿದರೆ ಕಾಫಿ ಫ‌ಸಲಿಗೆ ವ್ಯಾಪಕ ಹಾನಿಯಾಗುವ ಸಾಧ್ಯತೆಯಿದೆ. ಒಟ್ಟಾರೆಯಾಗಿ ಭೋರ್ಗರೆದು ಸುರಿಯಬೇಕಿದ್ದ ಮಳೆಗಾಲದ ದಿನಗಳಲ್ಲಿ ಮಳೆಯ ಪ್ರಮಾಣ ಸಂಪೂರ್ಣ ಕಡಿಮೆಯಾಗಿದೆ. ಮೊದಲೆಲ್ಲ ಮಳೆಗಾಲ ದಲ್ಲಿ ಬಿಸಿಲು ಕಾಣಿಸುವುದೇ ಅಪರೂಪವಾಗಿತ್ತು. ಇದೀಗ ಮಲೆನಾಡಿನಲ್ಲೂ ಸಹ ಮಳೆಗಾಲದಲ್ಲಿ ಬಿಸಿಲು ಕಾಣಿಸುತ್ತಿರುವುದು ಆತಂಕದ ಸಂಗತಿಯಾಗಿದೆ.

1482 ಕ್ವಿಂಟಲ್‌ ಭತ್ತದ ಬೀಜ ಲಭ್ಯವಿದ್ದು 1390 ,ಕ್ವಿಂಟಲ್‌ ಭತ್ತದ ಬೀಜ ವಿತರಣೆ ಮಾಡಲಾಗಿದೆ. 13677 ಮೆಟ್ರಿಕ್‌ ಟನ್‌ ರಸಗೊಬ್ಬರ ಲಭ್ಯವಿದ್ದು 8122 ಮೆಟ್ರಿಕ್‌ ಟನ್‌ ರಸಗೊಬ್ಬರ ವಿತರಣೆಯಾಗಿದ್ದು 5555 ಮೆಟ್ರಿಕ್‌ ಟನ್‌ ರಸಗೊಬ್ಬರ ಲಭ್ಯವಿದೆ. ಈ ಬಾರಿ ಮಳೆ ಕೊರೆತೆಯಿಂದ ಬೆಳೆ ಹಾನಿ ಆಗುವ ಸಾಧ್ಯತೆಯಿದ್ದು ಈ ಹಿನ್ನೆಲೆ ರೈತರು ಬೆಳೆವಿಮೆ ಮಾಡಿಸಿಕೊಳ್ಳುವುದು ಒಳ್ಳೆಯದು. – ಚೆಲುವರಂಗಪ್ಪ, ಸಹಾಯಕ ಕೃಷಿ ನಿರ್ದೇಶಕ

ಮಲೆನಾಡಿನಲ್ಲಿ ಜೂನ್‌ ತಿಂಗಳಿನಲ್ಲಿ ಬೀಳಬೇಕಾದ ಮಳೆ ಸಂಪೂರ್ಣವಾಗಿ ಕೈಕೊಟ್ಟಿದೆ. ಇದರಿಂದಾಗಿ ಕಾಫಿ ತೋಟಗಳಲ್ಲಿ ಕೃಷಿ ಚಟುವಟಿಕೆಗಳಿಗೆ ಅಡಚಣೆಯುಂಟು ಮಾಡಿದೆ. ಹವಮಾನ ವೈಪರೀತ್ಯ ವಿಪರೀತವಾಗಿದ್ದು ಕಳೆದ ಮೂರು ನಾಲ್ಕು ವರ್ಷಗಳಿಂದ ಮಳೆಗಾಲ ಆರಂಭವಾಗುವುದು ಒಂದು ತಿಂಗಳು ಮುಂದಕ್ಕೆ ಹೋಗಿದೆ. ಇದರಿಂದ ಹಲವು ಅಡ್ಡ ಪರಿಣಾಮಗಳು ಆಗುತ್ತಿದೆ. – ಸುಧೀಶ್‌ ಗೌಡ, ಕೃಷಿಕ

ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

ಬೆದರಿಕೆಗೆ ಗೌಡರ ಕುಟುಂಬ ಜಗ್ಗದು: ಎಚ್‌.ಡಿ. ರೇವಣ್ಣ

H.D. Revanna: ಬೆದರಿಕೆಗೆ ಗೌಡರ ಕುಟುಂಬ ಜಗ್ಗದು

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

Shivalinge-Gowda

CM ಸಿದ್ದರಾಮಯ್ಯ ರಾಜೀನಾಮೆ ಸಲ್ಲದು; ಶಾಸಕ ಶಿವಲಿಂಗೇಗೌಡ

5-hasan

Hasana:ಅನಾರೋಗ್ಯ: 3 ದಿನಗಳಿಂದ ನಿಂತಲ್ಲೇ ನಿಂತಿದ್ದ ಕಾಡಾನೆ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.