ಸಕಲೇಶಪುರದಲ್ಲಿ ಮತ್ತೆ ಗುಡ್ಡ ಕುಸಿತ.. ಮಣ್ಣಿನಡಿ ಸಿಲುಕಿದ ವಾಹನಗಳು, ಹೆದ್ದಾರಿ ಸಂಚಾರ ಬಂದ್
Team Udayavani, Jul 31, 2024, 8:01 PM IST
ಸಕಲೇಶಪುರ: ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಲು ಬಳಿ ಗುಡ್ಡಕುಸಿತಗೊಂಡು ಹಲವು ವಾಹನಗಳು ಮಣ್ಣಿನಡಿ ಸಿಲುಕಿರುವ ಘಟನೆ ಬುಧವಾರ ಸಂಜೆ ನಡೆದಿದೆ.
ಮಂಗಳವಾರವಷ್ಟೇ ದೊಡ್ಡತಪ್ಲು ಭೂ ಕುಸಿತ ಸಂಭವಿಸಿದ್ದು ಇಂದು ಮತ್ತೆ ಗುಡ್ಡ ಕುಸಿದು ಕಂಟೈನರ್ ವಾಹನ ಸೇರಿದಂತೆ ಹಲವು ವಾಹನಗಳು ಮಣ್ಣಿನಡಿ ಸಿಲುಕಿದೆ, ಪಲ್ಡಿಯಾದ ಕಂಟೇನರ್ನಲ್ಲಿ ಚಾಲಕ ಸಿಲುಕಿದ್ದು ರಕ್ಷಣೆ ಕಾರ್ಯ ನಡೆಯುತ್ತಿದೆ.
ಗುಡ್ಡ ಕುಸಿತದಿಂದ ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು – ಮಂಗಳೂರು ಸಂಪರ್ಕ ಕಡಿತಗೊಂಡು ಸಂಚಾರ ಬಂದ್ ಆಗಿದೆ.
ಗುಡ್ಡ ಜರಿತದಿಂದ ಹೆದ್ದಾರಿಯ ಎರಡೂ ಬದಿಯಲ್ಲೂ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತಿದ್ದು ಸವಾರರು ಪರದಾಡುವಂತಾಗಿದೆ.
ಇಂದು ಬೆಳಿಗ್ಗೆ ಇದೇ ಸ್ಥಳಕ್ಕೆ ಕಂದಾಯ ಸಚಿವ ಕೃಷ್ಣಭೈರೇಗೌಡ ಭೇಟಿ ನೀಡಿದ್ದು ಸಂಜೆಯ ವೇಳೆ ಸುರಿದ ಧಾರಾಕಾರ ಮಳೆಯಿಂದ ಗುಡ್ಡ ಕುಸಿದಿದೆ. ಪರಿಣಾಮ ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಸಂಚಾರ ಬಂದ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್
Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು
Mangaluru: ಕಿರಿದಾಗುತ್ತಿದೆ ಪಣಂಬೂರು ಬೀಚ್! ಇನ್ನೂ ಖಚಿತವಾಗದ ಕಾರಣ
Biological Park: ಪಿಲಿಕುಳಕ್ಕೆ ಪೆಂಗ್ವಿನ್, ಅನಕೊಂಡ ತರಿಸುವ ಮಹತ್ವದ ನಿರ್ಧಾರ
Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್ಮೇಕರ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.