Landslide: ಮಳಲಿ ಬೈಪಾಸ್‌ ರಸ್ತೆ ಸಮೀಪ ಭೂಕುಸಿತ


Team Udayavani, Dec 14, 2023, 4:00 PM IST

Landslide: ಮಳಲಿ ಬೈಪಾಸ್‌ ರಸ್ತೆ ಸಮೀಪ ಭೂಕುಸಿತ

ಸಕಲೇಶಪುರ: ಬಹುನಿರೀಕ್ಷಿತ ರಾಷ್ಟ್ರೀಯ ಹೆದ್ದಾರಿ 75ರ ಹಾಸನದಿಂದ ಸಕಲೇಶಪುರ ನಡುವಿನ ಮೊದಲ ಹಂತದ ಚತುಷ್ಪಥ ರಸ್ತೆ ಕಾಮಗಾರಿ ಮುಂಬರುವ ಜನವರಿ 20ರ ಒಳಗೆ ಉದ್ಘಾಟನೆಗೊಳ್ಳುವುದು ಅನುಮಾನವಾಗಿದೆ.

ಹಾಸನದ ಹೊರವರ್ತುಲ ರಸ್ತೆಯಿಂದ ತಾಲೂಕಿನ ಹೆಗದ್ದೆ ಗ್ರಾಮದ ಹೊರವಲಯದವರೆಗಿನ 54 ಕಿ.ಮೀ. ರಸ್ತೆ ಚತುಷ್ಪಥಕ್ಕೆ 2016 ರಲ್ಲಿ ಟೆಂಡರ್‌ ಕರೆಯಲಾಗಿದ್ದು, 2019ರ ಏಪ್ರಿಲ್‌ ತಿಂಗಳಲ್ಲಿ ಕಾಮಗಾರಿ ಪೂರ್ಣ ಗೊಳಿಸಲು ಯೋಜನೆ ರೂಪಿಸಲಾಗಿತ್ತು. ಆದರೆ, ಕಾಮ ಗಾರಿ ಕೈಗೆತ್ತಿಕೊಂಡ ಐಸೋಲೆಕ್ಸ್‌ ಕಂಪನಿ ಯಾವುದೇ ಮುಂದಾಲೋಚನೆ ಇಲ್ಲದೆ ತುಂಡು ಗುತ್ತಿಗೆ ನೀಡುವ ಮೂಲಕ 54 ಕಿ.ಮೀ. ರಸ್ತೆಯನ್ನು ಇಕ್ಕೆಲಗಳಲ್ಲಿನ ಮಣ್ಣು ತೆಗೆದ ಪರಿಣಾಮ ಹಲವೆಡೆ ಭೂಕುಸಿತಕ್ಕೆ ಕಾರಣವಾಗಿತ್ತು.

ಕುಂಟುತ್ತ ಸಾಗಿದ್ದ ಕಾಮಗಾರಿ: ಈ ನಡುವೆ ಐಸೋಲೆಕ್ಸ್‌ ಕಂಪನಿ ದಿವಾಳಿಯಾಗಿದ್ದರಿಂದ ಐಸೋಲೆಕ್ಸ್‌ ಕಂಪನಿಯ ಬಳಿ ಉಪಗುತ್ತಿಗೆ ಮಾಡು ತ್ತಿದ್ದ ರಾಜ್‌ಕಮಲ್‌ ಕಂಪನಿ ಕಳೆದ 6 ವರ್ಷಗಳಿಂದ ಕಾಮಗಾರಿಯನ್ನು ಕುಂಟುತ್ತ ನಡೆಸುತ್ತಿದ್ದು, ಇದೀಗ ಹಾಸನ ಸಕಲೇಶಪುರ ನಡುವೆ ಕಾಮಗಾರಿ ಬಹುತೇಕವಾಗಿ ಮುಕ್ತಾಯದ ಹಂತಕ್ಕೆ ಬಂದಿದೆ. ಕಾಮಗಾರಿಯನ್ನು ಕಳೆದ ತಿಂಗಳು ಪರಿಶೀಲಿಸಿದ್ದ ಸಂಸದ ಪ್ರಜ್ವಲ್‌ ರೇವಣ್ಣ ಜನವರಿ 2ನೇ ವಾರದೊಳಗೆ ಹಾಸನದಿಂದ ಸಕಲೇಶಪುರ ಬೈಪಾಸ್‌ ಮಾರ್ಗವಾಗಿ ಆನೆಮಹಲ್‌ವರೆಗಿನ 40 ಕಿ.ಮೀ. ಅಂತರದ ರಸ್ತೆಯ ಕಾಮಗಾರಿ ಮುಗಿಸಿ ಉದ್ಘಾಟನೆ ಮಾಡುವುದಾಗಿ ಹೇಳಿದ್ದರು. ಆದರೆ, ಇದೀಗ ಕಾಮಗಾರಿಯ ವೇಗ ನೋಡಿದರೆ ಜನವರಿ 20ರ ಒಳಗೆ ಉದ್ಘಾಟನೆಗೊಳ್ಳುವುದು ಬಹುತೇಕ ಅನುಮಾನವಾಗಿದೆ.

ಮಳಲಿ ಬೈಪಾಸ್‌ ರಸ್ತೆಯಲ್ಲಿ ಭೂಕುಸಿತ: ಪಟ್ಟಣದ ವಾಹನ ದಟ್ಟಣೆ ತಪ್ಪಿಸಲು ಕೊಲ್ಲಹಳ್ಳಿ- ಮಳಲಿ-ಕೌಡಹಳ್ಳಿ ಮಾರ್ಗವಾಗಿ ಆನೆಮಹಲ್‌ಗೆ ಸೇರಲು ಬೈಪಾಸ್‌ ರಸ್ತೆ ನಿರ್ಮಾಣ ಮಾಡಲಾಗಿದ್ದು, ಕಾಮಗಾರಿಯನ್ನು ಮುಗಿಸಲು ತರಾತುರಿಯಲ್ಲಿ ಕೆಲಸ ಮಾಡಲಾಗುತ್ತಿದೆ. ರಸ್ತೆಗೆ ಹಾಕಲಾಗುತ್ತಿರುವ ಮಣ್ಣು ಹೊಂದಿಕೊಳ್ಳಲು ಅವಕಾಶ ಕೊಡದೆ ತರಾತುರಿಯಲ್ಲಿ ಕಾಮಗಾರಿ ನಡೆಸಲಾಗುತ್ತಿದೆ.

ತರಾತುರಿಯಲ್ಲಿ ಕೆಲಸ: ಮಳಲಿ ಬೈಪಾಸ್‌ ಸಮೀಪ ಭೂಕುಸಿತ ಉಂಟಾಗಿ ತಡೆಗೋಡೆ ಸಹ ಮುಂದಕ್ಕೆ ಹೋಗಿದ್ದು, ಯಾವುದೇ ಸಂದರ್ಭದಲ್ಲಿ ರಸ್ತೆ ಕುಸಿಯುವ ಆತಂಕ ನಿರ್ಮಾಣವಾಗಿದೆ. ಇದಲ್ಲದೇ ಕೊಲ್ಲಹಳ್ಳಿಯಿಂದ ಮುಂದೆ ಬೈಪಾಸ್‌ನಲ್ಲೂ ಮೋರಿಯೊಂದು ಕಿತ್ತು ಬಂದಿದೆ. ಇಲ್ಲೂ ಸಹ ಭೂ ಕುಸಿತದ ಆತಂಕ ನಿರ್ಮಾಣವಾಗಿದೆ. ಒಟ್ಟಾರೆಯಾಗಿ ಕಾಮಗಾರಿ ಶೀಘ್ರ ಮುಕ್ತಾಯ ಮಾಡಲು ತರಾತುರಿಯಲ್ಲಿ ಕೆಲಸ ಮಾಡಲಾಗುತ್ತಿದೆ. ಒಟ್ಟಾರೆಯಾಗಿ ತರಾತುರಿಯಲ್ಲಿ ಜನವರಿ 20ರ ಒಳಗೆ ರಸ್ತೆ ಉದ್ಘಾಟನೆಗೆ ಲಭ್ಯವಿರಬೇಕೆಂದು ಬೈಪಾಸ್‌ ರಸ್ತೆ ಕಾಮಗಾರಿ ಮಾಡಲಾಗುತ್ತಿದ್ದು, ಇದರಿಂದ ಕಾಮಗಾರಿಯ ಗುಣಮಟ್ಟ ಕಡಿಮೆಯಾಗಿ ಅನಾಹುತಗಳು ಸಂಭವಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಗುಣಮಟ್ಟದ ಕಾಮಗಾರಿ ಮಾಡಲು ಮತ್ತಷ್ಟು ಕಾಲಾವಕಾಶವನ್ನು ಗುತ್ತಿಗೆದಾರರಿಗೆ ನೀಡಬೇಕಾಗಿದೆ.

ಮಳೆಯಿಲ್ಲದೇ ಕುಸಿತ, ಮಳೆ ಬಂದರೆ ಇನ್ನೇನು ಕಥೆ?: ಬೇಸಿಗೆಯಲ್ಲೇ ಈ ರೀತಿ ಭೂ ಕುಸಿತವಾಗಿದ್ದು, ಇನ್ನು ಭಾರೀ ಮಳೆ ಸುರಿದರೆ ಮುಂದೇನಾಗುವುದೆಂಬ ಪ್ರಶ್ನೆ ಉದ್ಭವವಾಗಿದೆ. ರಸ್ತೆಗೆ ಮಣ್ಣು ಸುರಿದ ನಂತರ ಮಣ್ಣಿನ ಮೇಲೆ ಕಾಂಕ್ರೀಟ್‌ ಬೆಡ್ಡಿಂಗ್‌ ಹಾಕಲು ಕೆಲ ಸಮಯ ನೀಡಬೇಕು. ಆದರೆ, ಗುಂಡಿ ಇರುವ ಜಾಗಗಳಲ್ಲಿ ಮಣ್ಣು ಸುರಿಯಲಾಗುತ್ತಿದ್ದು, ಮಣ್ಣು ಹೊಂದಿಕೊಳ್ಳಲು ಸಮಯಾವಕಾಶ ತೆಗೆದುಕೊಳ್ಳದೆ ಏಕಾಏಕಿ ಕಾಂಕ್ರೀಟ್‌ ಹಾಕಲಾಗುತ್ತಿದ್ದು, ಇದರಿಂದ ಹಲವೆಡೆ ಭೂಕುಸಿತದ ಅಪಾಯ ಕಂಡು ಬರುತ್ತಿದೆ. ಭಾರೀ ಮಳೆ ಸುರಿದರೆ ಅನಾಹುತವಾಗುವುದು ಬಹುತೇಕ ಖಚಿತವಾಗಿದೆ.

ಪೂರ್ಣಗೊಳ್ಳದ ಕಾಮಗಾರಿ: ಕೊಲ್ಲಹಳ್ಳಿ ಸಮೀಪದ ಫ್ಲೈ ಓವರ್‌ನಲ್ಲಿ ಮಣ್ಣು ಹಾಕಲಾಗುತ್ತಿದ್ದು, ಇನ್ನು ಸಾವಿರಾರು ಲೋಡ್‌ ಮಣ್ಣಿನ ಅವಶ್ಯಕತೆ ಇಲ್ಲಿದೆ. ಅಲ್ಲದೇ ತಡೆಗೋಡೆ ಸಹ ನಿರ್ಮಾಣವಾಗಬೇಕಾಗಿದೆ. ಮಳಲಿ ಬೈಪಾಸ್‌ ಸಮೀಪ ಸುಮಾರು 500 ಮೀ. ದೂರ ಕಾಂಕ್ರೀಟ್‌ ರಸ್ತೆ ನಿರ್ಮಾಣಗೊಳ್ಳಬೇಕಾಗಿದೆ. ಹೇಮಾವತಿ ನದಿಗೆ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿ ಸಹ ಪೂರ್ಣಗೊಳ್ಳಲು ಕೆಲ ಸಮಯ ಬೇಕಾಗಿದೆ.

ಬೆಳಗಾವಿ ಅಧಿವೇಶನದಿಂದ ಹಿಂತಿರುಗಿ ಬಂದ ಮೇಲೆ ಬೈಪಾಸ್‌ ರಸ್ತೆ ಕಾಮಗಾರಿ ಪರಿಶೀಲನೆ ಮಾಡಿ ಸಂಸದರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿ ಉದ್ಘಾಟನೆ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. – ಸಿಮೆಂಟ್‌ ಮಂಜು, ಶಾಸಕರು

ಬೈಪಾಸ್‌ ರಸ್ತೆಯಲ್ಲಿ ಮಾಡಲಾಗುತ್ತಿರುವ ಕಾಮಗಾರಿ ಕಳಪೆಯಾಗಿದೆ. ಮಳಲಿ ಸಮೀಪ ನಿರ್ಮಾಣ ಮಾಡಿರುವ ಕಲ್ಲಿನ ತಡೆಗೋಡೆ ಮಣ್ಣಿನ ಭಾರ ತಡೆಯದೆ ಮುಂದಕ್ಕೆ ಹೋಗಿದೆ. ಇನ್ನು ವಾಹನಗಳು ತಿರುಗಾಡಿದಲ್ಲಿ ಭೂ ಕುಸಿತ ಖಚಿತ. ಈ ಭಾಗದಲ್ಲಿ ಆಗಿರುವ ಅವ್ಯವಸ್ಥೆಯನ್ನು ಸರಿ ಮಾಡಬೇಕು. – ರಾಕೇಶ್‌, ಮಳಲಿ ಗ್ರಾಮಸ್ಥ

ಸಕಲೇಶಪುರ ತಾಲೂಕಿನ ಮಳಲಿ ಬೈಪಾಸ್‌ ಸಮೀಪ ಭೂಕುಸಿತ ಸ್ಥಳಕ್ಕೆ ಮೂರ್ನಾಲ್ಕು ದಿನಗಳಲ್ಲಿ ತೆರಳಿ ಪರಿಶೀಲಿಸಿ ತಡೆಗೋಡೆ ಹಾಗೂ ಇನ್ನಿತರ ಅವ್ಯವಸ್ಥೆಗಳ ಬಗ್ಗೆ ಸರಿಪಡಿಸಲು ಮುಂದಿನ ಕ್ರಮ ಕೈಗೊಳ್ಳಲಾಗುವುದು. – ಪ್ರವೀಣ್‌, ಯೋಜನಾ ನಿರ್ದೇಶಕ, ಎನ್‌ಎಚ್‌ಎಐ

– ಸುಧೀರ್‌ ಎಸ್‌.ಎಲ್‌.

ಟಾಪ್ ನ್ಯೂಸ್

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

1-e4qeewqewq

Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್

4-bantwala

ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

1-sswewqewq

Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

7

Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ

6

Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.