![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 23, 2019, 3:00 AM IST
ಹಾಸನ: ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕೆಂದು ಆಗ್ರಹಿಸಿ ಶನಿವಾರ ಬೆಳಿಗ್ಗೆ ನಿಗಮದ ಹಾಸನ ಡಿಪೋದ ಮುಂದೆ ಚಾಲಕರು, ನಿರ್ವಾಹಕರು, ಮತ್ತು ಸಿಬ್ಬಂದಿ ಶನಿವಾರ ಬೆಳಿಗ್ಗೆ ಪ್ರದರ್ಶನ ನಡೆಸಿ ಮುಖ್ಯಮಂತ್ರಿಯವರಿಗೆ ಪತ್ರ ಚಳವಳಿ ಆರಂಭಿಸಿದರು.
ಮುಖ್ಯಮಂತ್ರಿ, ರಾಜ್ಯಪಾಲರಿಗೆ ರವಾನೆ: ಕೆಎಸ್ಆರ್ಟಿಸಿ ಹಾಸನದ ಒಂದನೇ ಡಿಪೋದ ನೌಕರರು, ಚಾಲಕ, ನಿರ್ವಾಹಕರು ಪತ್ರವನ್ನು ಕೈಯಲ್ಲಿಡಿದು ಮುಖ್ಯಮಂತ್ರಿಗಳಿಗೆ ಮತ್ತು ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಪಾಲರಿಗೆ ಪತ್ರ ರವಾನೆ ಮಾಡುವುದಾಗಿ ಹೇಳಿದರು.
ವೇತನ ತಾರತಮ್ಯ ನಿವಾರಿಸಿ: ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ್ದಂತೆ ಕೆಎಸ್ಆರ್ಟಿಸಿ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ 6ನೇ ವೇತನ ಆಯೋಗದ ತಾರತಮ್ಯ ನಿವಾರಣೆಯೊಂದಿಗೆ ಸರ್ಕಾರಿ ನೌಕರರಿಗೆ ನೀಡುತ್ತಿರುವ ಎಲ್ಲ ಸೌಲಭ್ಯವನ್ನು ರಸ್ತೆ ಸಾರಿಗೆ ನಿಗಮದ ನೌಕರರಿಗೂ ನೀಡಬೇಕು ಎಂದು ಆಗ್ರಹಪಡಿಸಿದರು.
ಸೇವಾ ಭದ್ರತೆ ನೀಡಿ: ಸರ್ಕಾರದ ಅಂಗ ಸಂಸ್ಥೆಯಾದ ಕೆಎಸ್ಆರ್ಟಿಸಿ ನೌಕರರನ್ನು ರಾಜ್ಯ ಸರ್ಕಾರದ ಇತರೆ ನೌಕರರಂತೆ ಕಾಣುತ್ತಿಲ್ಲ. ಜೊತೆಗೆ ವೇತನ, ಪಿಂಚಣಿ, ಭತ್ಯೆ ಹಾಗೂ ರಜೆ ಸೌಲಭ್ಯಗಳನ್ನು ಸಮರ್ಪಕವಾಗಿ ನೀಡುತ್ತಿಲ್ಲ.ಸೇವಾ ಭದ್ರತೆಯನ್ನು ನೀಡಿಲ್ಲ. ಹಾಗಾಗಿ ಸಾರಿಗೆ ಸಂಸ್ಥೆಯ ರಾಜ್ಯದ 4 ನಿಗಮಗಳ ನೌಕರರೂ ಪತ್ರ ಚಳವಳಿ ಆರಂಭಿಸಿದ್ದು, ನಮ್ಮ ಬೇಡಿಕೆಯನ್ನ ಈಡೇರಿಸದಿದ್ದು, ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಮುಂದಿನ ದಿನದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದರು.
ಬೇಡಿಕೆಗೆ ಸ್ಪಂದಿಸದ ಸರ್ಕಾರ: ನೌಕರರ ಮುಖಂಡ ಫಾಲಾಕ್ಷ ಮಾತನಾ, ದೇಶದ ಇತರೆ ರಾಜ್ಯಗಳ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಶೇ.30ರಷ್ಟು ಕಡಿಮೆಯಿದೆ. ಈ ಬಗ್ಗೆ ಕಳೆದ ಒಂದೂವರೆ ದಶಕದಿಂದ ಸರ್ಕಾರದ ಮುಂದೆ ಬೇಡಿಕೆಗಳನ್ನು ಮಂಡಿಸುತ್ತಾ ಬಂದಿದ್ದರೂ ಸ್ಪಂದಿಸಿಲ್ಲ ಎಂದು ಸಮಾಧಾನ ವ್ಯಕ್ತಪಡಿಸಿದರು.
ಕೆಎಸ್ಆರ್ಟಿಸಿ ನೌಕರರಾದ ಮಲ್ಲಿಕಾರ್ಜುನ್, ದೇವರಾಜು, ಧರ್ಮ, ಚಂದ್ರಶೇಖರ್, ಗಿರೀಶ್, ಸತೀಶ್, ಯೋಗಾರಾಜು, ಆನಂದ್, ಭಾಗ್ಯಮ್ಮ, ಮತ್ತಿತರರು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದರು.
R. Ashok: ನವೆಂಬರ್ ಬಳಿಕ ಕಾಂಗ್ರೆಸ್ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.