ಲೋಕಸಭಾ ಚುನಾವಣೆ: ಮತ ಎಣಿಕೆಗೆ ಸಿದ್ಧತೆ

ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತ ಎಣಿಕೆಗೆ 14 ಟೇಬಲ್‌ ವ್ಯವಸ್ಥೆ ,18 ರಿಂದ 23 ಸುತ್ತುಗಳಲ್ಲಿ ಮತ ಎಣಿಕೆ: ಡೀಸಿ

Team Udayavani, May 19, 2019, 2:44 PM IST

hasan-tdy-1.

ಹಾಸನ ಲೋಕಸಭಾ ಕ್ಷೇತ್ರದ ಮತಗಳ ಎಣಿಕೆ ಸಿದ್ಧತೆಯ ಬಗ್ಗೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಅವರು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು. ಜಿಲ್ಲಾ ರಕ್ಷಣಾಧಿಕಾರಿ ಚೇತನ್‌ಸಿಂಗ್‌ ರಾಥೋಡ್‌ ಅವರೂ ಉಪಸ್ಥಿತರಿದ್ದರು.

ಹಾಸನ: ನಗರದ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಹಾಸನ ಲೋಕಸಭಾ ಕ್ಷೇತ್ರಗಳ ಮತಗಳ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮೇ 23 ರಂದು ಬೆಳಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಹೇಳಿದರು.

ಮತಗಳ ಎಣಿಕೆಯ ಬಗ್ಗೆ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಜಿಲ್ಲಾ ಚುನಾವಣಾಧಿಕಾರಿಯೂ ಆದ ಅವರು, ಪ್ರತಿ ವಿಧಾನಸಭಾ ಕ್ಷೇತದ ಮತಗಳ ಎಣಿಕೆ ಒಂದೊಂದು ಕೊಠಡಿಯಲ್ಲಿ ನಡೆಯಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದ ಮತಗಳ ಎಣಿಕೆಗೆ 14 ಟೇಬಲ್ಗಳ ವ್ಯವಸ್ಥೆ ಮಾಡಲಾಗಿದೆ. ಒಟ್ಟು 8 ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆಯು 112 ಟೇಬಲ್ಗಳಲ್ಲಿ ನಡೆಯಲಿದೆ.

ಅಂಚೆ ಮತಪತ್ರಗಳು ಹಾಗೂ ಸೇವಾ ಮತದಾರರ ಮತಗಳ ಎಣಿಕೆಗೆ 10 ಟೇಬಲ್ಗಳ ವ್ಯವಸ್ಥೆ ಮಾಡ ಲಾಗಿದೆ. ಪ್ರತಿ ಎಣಿಕಾ ಟೇಬಲ್ನಲ್ಲೂ 3 ಮಂದಿ ಸಿಬ್ಬಂದಿ ಎಣಿಕೆ ಕಾರ್ಯನಿರ್ವಹಿಸಲಿದ್ದು, ಒಟ್ಟು 408 ಸಿಬ್ಬಂದಿ ಎಣಿಕೆ ಕಾರ್ಯನಿರ್ವಹಿಸುವರು ಎಂದರು.

18ರಿಂದ 23 ಸುತ್ತುಗಳಲ್ಲಿ ಮತ ಎಣಿಕೆ: ಅಯಾ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳನ್ನಾಧರಿಸಿ ಮತಗಳ ಎಣಿಕೆ 18ರಿಂದ 23 ಸುತ್ತುಗಳಲ್ಲಿ ಮುಗಿ ಯಲಿದೆ. ಕಡೂರು ವಿಧಾನಸಭಾ ಕ್ಷೇತ್ರದ ಮತಗಳ ಎಣಿಕೆ 18 ಸುತ್ತುಗಳಲ್ಲಿ ಪೂರ್ಣಗೊಂಡರೆ ಅತಿ ಹೆಚ್ಚು ಮತಗಟ್ಟೆಗಳಿರುವ ಹೊಳೆನರಸೀಪುರ ಕ್ಷೇತ್ರದ ಮತ ಗಳ ಎಣಿಕೆ 23 ಸುತ್ತುಗಳಲ್ಲಿ ಮುಗಿಯಲಿದೆ. ಎಲೆಕ್ಟ್ರಾನಿಕ್‌ ಮತ ಯಂತ್ರಗಳಲ್ಲಿ ದಾಖಲಾದ ಮತಗಳ ಎಣಿಕೆಯ ನಂತರ ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲೂ 5 ಮತಗಟ್ಟೆಗಳಲ್ಲಿನ ವಿ.ವಿ.ಪ್ಯಾಟ್‌ನ ಮತ ಚೀಟಿಗಳನ್ನು ಎಣಿಕೆ ಆರಂಭವಾಗಲಿದೆ. ವಿ.ವಿ.ಪ್ಯಾಟ್‌ಗಳ ಎಣಿಕೆಗೆ ಲಾಟರಿ ಮೂಲಕ ಮತಗಟ್ಟೆಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ವಿವಿ ಪ್ಯಾಟ್‌ನ ಚೀಟಿ ಗಳ ಎಣಿಕೆ ಮಾಡಿದ ನಂತರ ಚುನಾವಣಾ ಫ‌ಲಿ ತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಅವರು ವಿವರ ನೀಡಿದರು.

ಏಜೆಂಟರು, ಅಭ್ಯರ್ಥಿಗಳು, ಮಾಧ್ಯಮ ಪ್ರತಿನಿಧಿ ಗಳಿಗೆ ಪ್ರವೇಶ: ಮತ ಎಣಿಕೆ ಕೇಂದ್ರಕ್ಕೆ ಮತಗಳ ಎಣಿಕೆ ಸಿಬ್ಬಂದಿ, ಅಯಾ ಅಭ್ಯರ್ಥಿಗಳಿಂದ ಸೂಚಿ ಸಿದ ಏಜೆಂಟರು, ಅಭ್ಯರ್ಥಿಗಳು, ಮಾಧ್ಯಮ ಪ್ರತಿನಿಧಿ ಗಳಿಗೆ ಮಾತ್ರ ಮತ ಎಣಿಕೆ ಕೇಂದ್ರ ಪ್ರವೇಶಕ್ಕೆ ಅನು ಮತಿ ನೀಡಿದ್ದು, ಇವರೆಲ್ಲರಿಗೂ ಗುರುತಿನ ಚೀಟಿ ನೀಡಲಾಗಿದೆ. ಗುರ್ತಿನ ಚೀಟಿ ಹೊಂದಿದವರು ಮಾತ್ರ ಎಣಿಕೆ ಕೇಂದ್ರ ಪ್ರವೇಶಿಸಲು ಅವಕಾಶ ಇರುತ್ತದೆ ಎಂದು ಹೇಳಿದರು.

ಒಣ ದಿನ ಘೋಷಣೆ: ಮತಗಳ ಎಣಿಕೆ ಕಾರ್ಯ ಸುಗಮವಾಗಿ ನಡೆಯಲು ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮೇ 22ರ ಮಧ್ಯರಾತ್ರಿ 12 ಗಂಟೆಯಿಂದ ಮೇ 24ರ ಮುಂಜಾನೆವರೆಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.