Shiradi Ghat Tunnel:ಇಂದು ಶಿರಾಡಿ ಸುರಂಗ ಮಾರ್ಗ ಕುರಿತು ಸಭೆ
Team Udayavani, Aug 12, 2024, 6:30 AM IST
ಸಕಲೇಶಪುರ/ಸುಬ್ರಹ್ಮಣ್ಯ: ಶಿರಾಡಿ ಸುರಂಗ ಮಾರ್ಗ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಜತೆಗೆ ಮಹತ್ವದ ಸಭೆ ಸೋಮವಾರ ನಡೆಯಲಿದ್ದು, ಬಹುತೇಕವಾಗಿ ಸುರಂಗ ಮಾರ್ಗ ಯೋಜನೆ ಶೀಘ್ರವಾಗಿ ಅನುಷ್ಠಾನಗೊಳ್ಳುವ ಸಾಧ್ಯತೆಯಿದೆ.
ಎರಡು ದಿನಗಳ ಹಿಂದೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಶಿರಾಡಿಯಲ್ಲಿ ಸುರಂಗ ಮಾರ್ಗವನ್ನು ಮಾಡುವಂತೆ ನಿತಿನ್ ಗಡ್ಕರಿ ಜತೆಗೆ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಸಚಿವರು ರಾಜ್ಯ ಸರಕಾರವು ಈ ಯೋಜನೆಗಾಗಿ ಅರಣ್ಯ ಭೂಮಿಯನ್ನು ನೀಡಿದರೆ ಯೋಜನೆಯನ್ನು ಜಾರಿ ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದಿದ್ದರು.
ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರಾಜ್ಯಕ್ಕೆ ಸಂಬಂಧಪಟ್ಟ ಯೋಜನೆಗಳಿಗಾಗಿ ಎರಡು ದಿನಗಳ ಕಾಲ ದಿಲ್ಲಿಯಲ್ಲಿ ಕೇಂದ್ರ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ.
ಶಿರಾಡಿ ಸುರಂಗ ಮಾರ್ಗಕ್ಕೆ ಬೇಕಾಗಿರುವ ಅರಣ್ಯ ಸ್ವಾಧೀನಕ್ಕೆ ರಾಜ್ಯ ಸರಕಾರ ಒಪ್ಪಿಗೆ ನೀಡುವ ಎಲ್ಲ ಸಾಧ್ಯತೆಯಿದೆ.
ಶಿರಾಡಿ ಘಾಟಿಯಲ್ಲಿ ಸುರಂಗ ನಿರ್ಮಾಣವಾದಲ್ಲಿ ಬೆಂಗಳೂರು-ಮಂಗಳೂರು ನಡುವೆ ಹೆಚ್ಚಿನ ಆರ್ಥಿಕ ಚಟುವಟಿಕೆಗಳು ನಡೆಯಲು ಸಹಾಯಕಾರಿಯಾಗುತ್ತದೆ ಎಂದು ಪ್ರಮುಖ ನಾಯಕರು ಹೇಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.