ಮುಕ್ತಿಧಾಮ ನವೀಕರಣಕ್ಕೆ 25 ಲಕ್ಕ ರೂ.ವೆಚ್ಚ 


Team Udayavani, Jun 4, 2023, 4:26 PM IST

tdy-18

ಸಕಲೇಶಪುರ: ಶಾಶ್ವತವಾಗಿ ಊರಿಗೆ ಏನಾದರು ಕೊಡುಗೆ ನೀಡಬೇಕೆಂಬ ನಿಟ್ಟಿನಲ್ಲಿ ಲಯನ್ಸ್‌ ಸಂಸ್ಥೆ ವತಿಯಿಂದ ಪಟ್ಟಣದ ಹಿಂದೂ ಮುಕ್ತಿಧಾಮವನ್ನು 25 ಲಕ್ಷ ರೂ.ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು ಕೆಲವೇ ದಿನಗಳಲ್ಲಿ ಗಣ್ಯರಿಂದ ಉದ್ಘಾಟನೆಗೊಳ್ಳಲಿದೆ.

ಪಟ್ಟಣದ ಹಿಂದೂ ರುದ್ರಭೂಮಿಯಲ್ಲಿ ಲಯನ್ಸ್‌ ಕ್ಲಬ್‌ ಇಂಟರ್‌ ನ್ಯಾಷನಲ್‌ ಜಿಲ್ಲೆ 317ಡಿ ವತಿಯಿಂದ ಸ್ವತ: ಲಯನ್ಸ್‌ ಸಂಸ್ಥೆ ಸದಸ್ಯರೇ ಹಣ ಹಾಕಿ ಸುಮಾರು 25 ಲಕ್ಷ ರೂ.ವೆಚ್ಚದಲ್ಲಿ ರುದ್ರಭೂಮಿಯನ್ನು ಅಭಿವೃದ್ಧಿಪಡಿಸಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಉದ್ಘಾಟನೆಗೊಳ್ಳಲಿದೆ. ಪಟ್ಟಣದಲ್ಲಿರುವ ಹಿಂದೂ ರುದ್ರ ಭೂಮಿ ಅವ್ಯವಸ್ಥೆಯ ಅಗರವಾಗಿದನ್ನು ಕಂಡು ಲಯನ್ಸ್‌ 317 ಡಿ ರಾಜ್ಯಪಾಲ ಸಂಜೀತ್‌ ಶೆಟ್ಟಿ ಮಾರ್ಗದರ್ಶನದಲ್ಲಿ ರುದ್ರಭೂಮಿಯನ್ನು 25 ಲಕ್ಷ ರೂ.ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಈ ಹಿಂದಿದ್ದ ಸುಮಾರು 3 ರಿಂದ 4 ಕೊಠಡಿಗಳ ಮೇಲೆ ಶೀಟು ಹಾಕಿ ಸುಣ್ಣಬಣ್ಣ ಬಳಿಯಲಾಗಿದೆ. ಅಲ್ಲದೇ ಚಿತಾಗಾರದ ಸಮೀಪ ಒಡೆದು ಹೋಗಿದ್ದ ಶೀಟುಗಳ ಬದಲು ಹೊಸ ಶೀಟುಗಳನ್ನು ಅಳವಡಿಸಲಾಗಿದೆ. ಚಿತಾಗಾರದ ಆವರಣವನ್ನು ಕಾಂಕ್ರೀಟಿ ಕರಣ ಮಾಡಲಾಗುತ್ತಿದೆ. ರುದ್ರಭೂಮಿ ಮಧ್ಯಭಾಗದಲ್ಲಿ ಈಶ್ವರ ಹಾಗೂ ಸತ್ಯಹರಿಶ್ಚಂದ್ರ ಅವರ ಪ್ರತಿಮೆ ನಿರ್ಮಾ ಣ ಮಾಡಲಾಗಿದೆ. ಆವರಣದಲ್ಲಿ ಅಲ್ಲಲ್ಲಿ ಹುಲ್ಲು ಹಾಸು ಹಾಕಲು ಯೋಜಿಸಲಾಗಿದ್ದು ಜೊತೆಗೆ ಹೂವಿನ ಗಿಡಗಳನ್ನು ಸಹ ಹಾಕಲಾಗುತ್ತದೆ.

ಆರೇಳು ತಿಂಗಳಲ್ಲಿ ಕಾಮಗಾರಿ ಪೂರ್ಣ: ಈ ಹಿಂದೆ ರುದ್ರಭೂಮಿಗೆ ಅಂತ್ಯಕ್ರಿಯೆ ಮಾಡಲು ಬರುವವರಿಗೆ ಮೂಲ ಭೂತ ಸೌಕ ರ್ಯ ಕೊರತೆ ಕಾಡುತ್ತಿತ್ತು. ಆದರೆ, ಲಯನ್ಸ್‌ ಸಂಸ್ಥೆ ರುದ್ರ ಭೂಮಿಯನ್ನು ಉದ್ಯಾನವನದ ರೀತಿ ಮಾಡಿದೆ. ಕಳೆದ ವರ್ಷದ ನವೆಂಬರ್‌ ಅಂತ್ಯದಲ್ಲಿ ಆರಂಭಗೊಂಡ ಈ ಕಾಮಗಾರಿ ಇದೀಗ ಮುಕ್ತಾಯಗೊಂಡಿದೆ. ಕೇವಲ ಆರೇಳು ತಿಂಗಳ ಅವಧಿಯಲ್ಲಿ ಕೆಲಸ ಮುಕ್ತಾಯಗೊಳಿಸಲಾಗಿದೆ. ಲಯನ್ಸ್‌ ಸಂಸ್ಥೆ ರುದ್ರಭೂಮಿ ಅಭಿವೃದ್ಧಿಗೆ ಕೊಡುಗೆ ನೀಡಿದೆ. ಆದರೆ ರುದ್ರಭೂಮಿ ನಿರ್ವಹಣೆ ಮಾಡಲು ಇರುವ ಸಮಿತಿ ಯಾವ ರೀತಿ ಇದನ್ನು ನಿರ್ವಹಣೆ ಮಾಡಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಲಯನ್ಸ್‌ ಸಂಸ್ಥೆ ಊರಿಗೆ ಏನಾದರು ಕೊಡುಗೆ ನೀಡಬೇಕೆಂಬ ನಿಟ್ಟಿನಲ್ಲಿ ಹಿಂದೂ ರುದ್ರಭೂಮಿಯನ್ನು ಅಭಿವೃದ್ಧಿಪಡಿಸಿರುವ ರೀತಿ ಇತರೆ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ.

ಲಯನ್ಸ್‌ ಸಂಸ್ಥೆ 317 ಡಿ ವತಿಯಿಂದ ಸಕಲೇಶಪುರ ಪಟ್ಟಣದ ಹಿಂದೂ ರುದ್ರಭೂಮಿಯನ್ನು ಮಾದರಿ ರುದ್ರಭೂಮಿಯನ್ನಾಗಿ ಮಾಡಲಾಗುತ್ತಿದೆ. ಅಲ್ಲದೆ ಲಯನ್ಸ್‌ ಸಂಸ್ಥೆ ವತಿಯಿಂದ ಪಟ್ಟಣದ ಕ್ರಾಫ‌ರ್ಡ್‌ ಆಸ್ಪತ್ರೆಗೆ ಐಸಿಯು ಬೆಡ್‌ಗಳನ್ನು ಸಹ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತೂಂದು ಡಯಾಲಿಸಿಸ್‌ ಘಟಕ ಹಾಗೂ ಮತ್ತಿತರ ಸಾಮಾಜಿಕ ಕಾರ್ಯಗಳನ್ನು ಸಂಸ್ಥೆ ವತಿಯಿಂದ ಮಾಡಲಾಗುತ್ತದೆ. – ಸಂಜೀತ್‌ ಶೆಟ್ಟಿ, ಲಯನ್ಸ್‌ 317ಡಿ ರಾಜ್ಯಪಾಲ

ಲಯನ್ಸ್‌ ಸಂಸ್ಥೆ  ಹಿಂದೂ ರುದ್ರಭೂಮಿಯನ್ನು ಅಭಿವೃದ್ಧಿ ಪಡಿಸಿರುವ ಕಾರ್ಯ ಶ್ಲಾಘನೀಯ. ಆದರೆ ರುದ್ರಭೂಮಿ ನಿರ್ವಹಣಾ ಸಮಿತಿಯವರು ಸರಿಯಾಗಿ ಇದನ್ನು ನೋಡಿಕೊಳ್ಳ ಬೇಕು. – ಕೌಶಿಕ್‌, ಭಜರಂಗದಳ ಮುಖಂಡ

– ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.