
ನಫೆಡ್ ಕೊಬ್ಬರಿ ಖರೀದಿ ಕೇಂದ್ರಕ್ಕೆ ಚಾಲನೆ
Team Udayavani, Aug 11, 2020, 9:00 AM IST

ಚನ್ನರಾಯಪಟ್ಟಣ: ಕೊಬ್ಬರಿಗೆ ಸೂಕ್ತ ಬೆಲೆ ನಿಗದಿಪಡಿಸುವುದರ ಜತೆಗೆ 5 ಸಾವಿರ ರೂ. ಬೆಂಬಲ ಬೆಲೆ ನೀಡುವ ಮೂಲಕ ರೈತ ಸಮುದಾಯಕ್ಕೆ ನೆರವಾಗಬೇಕೆಂದು ಸರ್ಕಾರವನ್ನು ಶಾಸಕ ಸಿ.ಎನ್.ಬಾಲಕೃಷ್ಣ ಒತ್ತಾಯಿಸಿದರು.
ಪಟ್ಟಣದ ಕೃಷಿ ಉತ್ಪನ್ನ ಆವರಣದಲ್ಲಿ ಪ್ರಸಕ್ತ ಸಾಲಿನ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ನಫೆಡ್ ಮುಖಾಂತರ ತೆರೆದಿರುವ ಕೊಬ್ಬರಿ ಖರೀದಿ ಕೇಂದ್ರ ಉದ್ಘಾಟಿಸಿ ಮಾತನಾಡಿ, ನಫೆಡ್ ಮೂಲಕ ಹೆಚ್ಚಿನ ಬೆಲೆಗೆ ಕೊಬ್ಬರಿ ಖರೀದಿ ಮಾಡುವುದರಿಂದ ರೈತರು ದಲ್ಲಾಳಿಗಳೊಂದಿಗೆ ವ್ಯವಹರಿಸುವುದು ಕಡಿಮೆಯಾಗುತ್ತದೆ, ಇನ್ನು ತೆಂಗು ಬೆಳೆಗಾರರಿಗೆ ವಾರ್ಷಿಕ ಸಹಾಯ ಧನ ನೀಡುವ ಮೂಲಕ ಕೃಷಿಕರಿಗೆ ಉತ್ತೇಜನ ನೀಡಬೇಕು ಎಂದರು.
ಕಳೆದ ಎರೆಡು ವರ್ಷದ ಹಿಂದೆ ಕ್ವಿಂಟಲ್ ಕೊಬ್ಬರಿಗೆ 16 ರಿಂದ 17 ಸಾವಿರ ರೂ. ವರೆಗೆ ರೈತರು ಕೊಬ್ಬರಿ ಮಾರಾಟ ಮಾಡಿದ್ದಾರೆ, ಪ್ರಸಕ್ತ ವರ್ಷದಲ್ಲಿ ಕೊಬ್ಬರಿ ಬೆಲೆ ತೀವ್ರ ಕುಸಿದಿದ್ದು ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಹೆಚ್ಚಿನ ಆದ್ಯತೆ ನೀಡುವ ಮೂಲಕ ತೆಂಗು ಬೆಳೆಗಾರರ ನೆರವಿಗೆ ನಿಲ್ಲಬೇಕು ಎಂದು ಆಗ್ರಹಿಸಿದರು. ಕ್ವಿಂಟಲ್ ಕೊಬ್ಬರಿಗೆ 10,300 ರೂ. ನಿಗದಿಯಾಗಿದ್ದು ಈಗಾಗಲೆ 226ಕ್ಕೂ ಹೆಚ್ಚು ರೈತರು ಪಹಣಿ ಹಾಗೂ ಇತರೆ ಅಗತ್ಯ ದಾಖಲಾತಿಯನ್ನು ನೀಡಿ ನೋಂದಣಿ ಮಾಡಿಕೊಂಡಿದ್ದಾರೆ, ಇನ್ನು ಸಾವಿರಕ್ಕೂ ಹೆಚ್ಚು ಮಂದಿ ರೈತರು ನಫೆಡ್ ಮೂಲಕ ಕೊಬ್ಬರಿ ಮಾರಾಟ ಮಾಡಲು ಮುಂದಾಗುತ್ತಾರೆ ಈ ಬಗ್ಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಿಬ್ಬಂದಿ ಹೆಚ್ಚು ಪ್ರಚಾರ ಮಾಡಬೇಕಾಗಿದೆ ಎಂದು ಹೇಳಿದರು.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಶಿವಸ್ವಾಮಿ, ಉಪಾಧ್ಯಕ್ಷ ಮುನಿಯಪ್ಪ, ಅಧಿಕಾರಿ ಚೇತನ್ ಇದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Save Life: ಚಾರ್ಮಾಡಿ ಘಾಟ್ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!

Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ
MUST WATCH
ಹೊಸ ಸೇರ್ಪಡೆ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ

Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.