ಹಾಸನ ವಿವಿಯಲ್ಲಿ ಹೊಸ ಕೋರ್ಸ್‌ಗಳ ಆರಂಭ


Team Udayavani, Jun 8, 2023, 3:10 PM IST

ಹಾಸನ ವಿವಿಯಲ್ಲಿ ಹೊಸ ಕೋರ್ಸ್‌ಗಳ ಆರಂಭ

ಹಾಸನ: ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿದ್ದ ಹಾಸನ ಜಿಲ್ಲೆಯ ಪ್ರಥಮ ದರ್ಜೆ ಕಾಲೇಜುಗಳು ಈಗ ಹೊಸದಾಗಿ ಆರಂಭವಾಗಿರುವ ಹಾಸನ ವಿಶ್ವವಿದ್ಯಾನಿಲಯದ ವ್ಯಾಪ್ತಿಗೊಳಪಟ್ಟಿವೆ. ಮೂರು ತಿಂಗಳ ಹಿಂದೆಯಷ್ಟೇ ಉದಯವಾದ ಹಾಸನ ವಿಶ್ವವಿದ್ಯಾನಿಲಯವು ಈಗ ಶೈಕ್ಷಣಿಕ ಅಭಿವೃದ್ಧಿ ಮತ್ತು ಕಾಂಪಸ್‌ ಅಭಿವೃದ್ಧಿಯ ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸುವಲ್ಲಿ ನಿರತವಾಗಿದೆ. ಬೆಂ

ಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ಬೆಂಗಳೂರು ಕಡೆಗೆ ಹಾಸನ ದಿಂದ 5 ಕಿ.ಮೀ.ದೂರದಲ್ಲಿ 33 ವರ್ಷಗಳ ಹಿಂದೆ ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕೇಂದ್ರ ಹೇಮಗಂಗೋತ್ರಿ ಆರಂಭವಾಗಿತ್ತು. ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರದ ಕ್ಯಾಂಪಸ್‌ ನ 70 ಎಕರೆ ಪ್ರದೇಶದಲ್ಲಿಯೇ ಈಗ ಹಾಸನ ವಿಶ್ವವಿದ್ಯಾನಿಲಯವು ಆರಂಭವಾಗಿದೆ.

ಹೊಸ ವಿಶ್ವ ವಿದ್ಯಾನಿಲಯವು ಈಗ ಜಿಲ್ಲೆಯ ಪದವಿ ಕಾಲೇಜುಗಳ ಸಂಯೋಜನೆ, ಪ್ರವೇಶಾತಿಯನ್ನು ಆರಂಭಿಸಿದೆ. ಹಾಸನ ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಹಾಸನ ಜಿಲ್ಲೆಯ ಎಲ್ಲ 57 ಪದವಿ ಕಾಲೇಜುಗಳೂ ಒಳಪಡುತ್ತವೆ. ಈ ವರ್ಷದಿಂದ ಪ್ರಥಮ ವರ್ಷದ ಪದವಿ ಮತ್ತು ಪ್ರಥಮ ವರ್ಷದ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಹಾಸನ ವಿಶ್ವವಿದ್ಯಾನಿಲಯವೇ ಪ್ರದವಿ ಪ್ರದಾನ ಮಾಡಲಿದೆ.

ಹೊಸ ಕೋರ್ಸ್‌ಗಳ ಆರಂಭ: ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರದಲ್ಲಿ ಈಗಾಗಲೇ ವಾಣಿಜ್ಯಶಾಸ್ತ್ರ, ಸಸ್ಯಶಾಸ್ತ್ರ, ಎಲೆಕ್ಟ್ರಾನಿಕ್ಸ್‌, ಗಣಿತಶಾಸ್ತ್ರ, ಅರ್ಥಶಾಸ್ತ್ರ, ಇತಿಹಾಸ, ಕನ್ನಡ, ಇಂಗ್ಲಿಷ್‌ ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಬೋಧನೆ ನಡೆಯುತ್ತಿದೆ. ಈಗಿರುವ ಎಂಟು ಕೋರ್ಸ್‌ಗಳ ಜೊತೆಗೆ ಈ ವರ್ಷದಿಂದಲೇ 6 ಹೊಸ ಕೋರ್ಸ್‌ ಆರಂಭಿ ಸಲು ಹಾಸನ ವಿಶ್ವವಿದ್ಯಾನಿ ಲಯ ಸಜ್ಜಾಗುತ್ತಿದೆ.

ಎಂಬಿಎ, ಎಂಎಸ್‌ಡಬ್ಲೂ, ಗಣಕ ವಿಜ್ಞಾನ (ಎಂ.ಎಸ್ಸಿ ಇನ್‌ ಕಂಪ್ಯೂಟರ್‌ ಸೈನ್ಸ್‌ )ಭೌತ ಶಾಸ್ತ್ರ, ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು ಆರಂಭಿ ಸಲು ಸರ್ಕಾರಕ್ಕೆ ಪ್ರಸ್ತಾವನೆ ಯನ್ನು ಸಲ್ಲಿಸಿದ್ದು, ಮಂಜೂರಾತಿಯ ವಿಶ್ವಾಸದಲ್ಲಿದೆ.

ವಿವಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ: ವಿಶ್ವ ವಿದ್ಯಾನಿಲಯವು ಈ ವರ್ಷದಿಂದ 6 ಹೊಸ ಕೋರ್ಸ್‌ ಗಳ ನ್ನು ಆರಂಭಿಸುವುದರಿಂದ ಒಟ್ಟು 14 ಸ್ನಾತಕೋತ್ತರ ಪದವಿ ವಿಭಾಗಗಳು ಕಾರ್ಯ ನಿರ್ವಹಿಸಬೇಕಾಗುತ್ತದೆ. ಅದಕ್ಕೆ ಪೂರಕವಾಗಿ ಹೊಸದಾಗಿ ಶೈಕ್ಷಣಿಕ ಸಮುತ್ಛಯ (ಅಕಾಡೆಮಿಕ್‌ ಬ್ಲಾಕ್‌) ನಿರ್ಮಾಣವಾಗಬೇಕಾಗುತ್ತದೆ. ಜೊತೆಗೆ ಕೇಂದ್ರೀಯ ಉಪಕರಣ ವಿಭಾಗದ ನಿರ್ಮಾಣವೂ ಆಗಬೇಕಾಗಿದೆ. ಇನ್ನು ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗುವುದರಿಂದ ಸ್ನಾತಕೋತ್ತರ ಹಾಸ್ಟೆಲ್‌ಗ‌ಳು, ಸಂಶೋಧನಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ನಿರ್ಮಾಣವೂ ಆಗಬೇಕಾಗಿದೆ. ಇದಕ್ಕೆಲ್ಲ ಅನುದಾನ ಕೋರಿ ವಿಶ್ವವಿದ್ಯಾನಿಲಯವು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಮುಂದಿನ ತಿಂಗಳು ಮಂಡನೆಯಾಗಲಿರುವ ರಾಜ್ಯ ಸರ್ಕಾರದ 2023- 24ನೇ ಸಾಲಿನ ಬಜೆಟ್‌ ನಲ್ಲಿ ಅನುದಾನ ಘೋಷಣೆಯ ನಿರೀಕ್ಷೆಯಲ್ಲಿದೆ.

ಹೇಮಗಂಗೋತ್ರಿಗೆ ಮೂಲ ಸೌಕರ್ಯ ಕೊರತೆ: 33 ವರ್ಷಗಳ ಹಿಂದೆ ಹೇಮಗಂಗೋತ್ರಿ ಆರಂಭವಾದರೂ ಮೂಲ ಸೌಕರ್ಯದ ಕೊರತೆಯಿದೆ. ವಿಶೇಷವಾಗಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗ‌ಳ ಸೌಲಭ್ಯವಿಲ್ಲ. ಹೇಮ ಗಂಗೋತ್ರಿಗೆ ಪ್ರವೇಶ ಪಡೆದಿರುವ ಸುಮಾರು 300 ವಿದ್ಯಾರ್ಥಿಗಳಲ್ಲಿ ಬಹುಪಾಲು ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಿಂದಲೇ ಬರುತ್ತಾರೆ. ಅವರಿಗೆಲ್ಲ ಹಾಸ್ಟೆಲ್‌ ಸೌಲಭ್ಯವಿಲ್ಲ. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್‌ಗ‌ಳಲ್ಲಿ ಕೆಲವು ವಿದ್ಯಾರ್ಥಿಗಳು, ಮತ್ತೆ ಕೆಲವು ವಿದ್ಯಾರ್ಥಿಗಳು ಪ್ರತಿದಿನ ಬಸ್‌ನಲ್ಲಿ ತರಗತಿಗೆ ಬಂದು ಹೋಗುತ್ತಾರೆ. ಈಗ ಪುರುಷರಿಗೆ ಹಾಗೂ ಮಹಿಳೆಯರಿಗೆ ಒಂದೊಂದು ಹಾಸ್ಟೆಲ್‌ ಇವೆ. ಅವು ಅರಣ್ಯಕ್ಕೆ ಹೊಂದಿಕೊಂಡಂತಿರುವುದರಿಂದ ಮಹಿಳಾ ವಿದ್ಯಾರ್ಥಿಗಳು ಹಾಸ್ಟೆಲ್‌ ಸೇರಲು ಇಚ್ಛಿಸುತ್ತಿಲ್ಲ. ಬೇಡಿಕೆಗೆ ತಕ್ಕಷ್ಟು ಪುರುಷ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ವ್ಯವಸ್ಥೆ ಇಲ್ಲ. ಹೇಮಗಂಗೋತ್ರಿ ಕ್ಯಾಂಪಸ್‌ನಲ್ಲಿ ಸ್ವತಂತ್ರ ವಿವಿಗೆ ಪೂರಕವಾದ ಸೌಲಭ್ಯಗಳಿಲ್ಲ. ಹೊಸ ಕ್ಯಾಂಪಸ್‌ ಸುಂದರ ಹಾಗೂ ಆಕರ್ಷಕವಾಗಿ ರೂಪುಗೊಳ್ಳಬೇಕಾಗಿದೆ. ಅದಕ್ಕೆ ಪೂರಕವಾಗಿ ಅಲ್ಲಿ ರಸ್ತೆಗಳ ನಿರ್ಮಾಣ, ನೀರು ಪೂರೈಕೆ, ಹಸಿರೀಕರಣ ರೂಪುಗೊಳ್ಳಬೇಕಾಗಿದೆ. ಇದಕ್ಕೆಲ್ಲ ಸಾಕಷ್ಟು ಅನುದಾನದ ಅಗತ್ಯವಿದೆ.

-ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.