ಹೊರಗಿನವರನ್ನು ಜಿಲ್ಲೆಗೆ ಸೇರಿಸಕೂಡದು

ಏ.20ರವರೆಗೂ ಲಾಕ್‌ಡೌನ್‌ ಕಠಿಣ ಕ್ರಮಗಳ ಜಾರಿ: ಸಚಿವ ಮಾಧುಸ್ವಾಮಿ

Team Udayavani, Apr 16, 2020, 5:10 PM IST

ಹೊರಗಿನವರನ್ನು ಜಿಲ್ಲೆಗೆ ಸೇರಿಸಕೂಡದು

ಹಾಸನ: ಹೊರ ಜಿಲ್ಲೆಯವರನ್ನು ಏ.20ರವರೆಗೆ ಹಾಸನ ಜಿಲ್ಲೆಗೆ ಸೇರಿಸಕೂಡದು ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ – 19 ನಿಯಂತ್ರಣದ ಸಂಬಂಧ ನಡೆದ ಜನಪ್ರತಿ ನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ತುರ್ತು ಸಂದರ್ಭ, ಆರೋಗ್ಯ ಸಮಸ್ಯೆ ಹೊರತುಪಡಿಸಿ ಹೊರ ಜಿಲ್ಲೆಗಳಿಂದ ಬರುವವರನ್ನು ನಿರ್ಬಂಧಿಸಬೇಕು ಎಂದರು.

ಬೆಂಗಳೂರು, ಮೈಸೂರು, ಮಂಗಳೂರು ಕಡೆಯಿಂದ ಹಾಸನ ಜಿಲ್ಲೆಯನ್ನು ಪ್ರವೇಶಿಸುವವರ ಮೇಲೆ ಚೆಕ್‌ಪೋಸ್ಟ್‌ಗಳಲ್ಲಿ ಕಣ್ಗಾವಲಿಡಬೇಕು. ಅನಿವಾರ್ಯವಿದ್ದವರು ದ್ವಿಚಕ್ರ ವಾಹನದಲ್ಲಿ ಒಬ್ಬರು ಮಾತ್ರ, ಟ್ಯಾಕ್ಸಿಯಲ್ಲಿ ಇಬ್ಬರು ಮಾತ್ರ ಸಂಚರಿಸಬೇಕು. ಮನೆಯಿಂದ ಹೊರ ಬಂದವರು ಮಾಸ್ಕ್ ಧರಿಸುವುದು ಕಡ್ಡಾಯ. ಮಾಸ್ಕ್ ಧರಿಸದವರನ್ನು ಬಂಧಿಸಿ. ಮಾಸ್ಕ್ ಇಲ್ಲದಿದ್ದರೆ ಕರವಸ್ತ್ರ, ಟವೆಲ್‌ನಿಂದಲಾದರೂ ಬಾಯಿ, ಮೂಗು ಮಚ್ಚಿಕೊಂಡು ತಿರುಗುವಂತೆ ನಿಗಾ ವಹಿಸಿ ಎಂದೂ ಪೊಲೀಸರಿಗೆ ಸಚಿವರು ಸೂಚಿಸಿದರು.

ಪಡಿತರ ವಿತರಿಸಿ: ಪ್ರತಿಯೊಬ್ಬರಿಗೂ ಪಡಿತರ 
ಪದಾರ್ಥಗಳು ಸಿಗುವಂತೆ ನೋಡಿಕೊಳ್ಳಿ. 50-60 ಕಾರ್ಡ್‌ಗಳು ಇದ್ದರೆ ನ್ಯಾಯಬೆಲೆ ಅಂಗಡಿಯವರು ಅಲ್ಲಿಗೇ ಹೋಗಿ ಪಡಿತರ ವಿತರಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿಯೂ ಪಡಿತರ ವಿತರರಣೆ ವ್ಯವಸ್ಥೆ ಮಾಡಬಹುದು ಎಂದರು.

ಕಾಮಗಾರಿಗಳ ಆರಂಭಕ್ಕೆ ನಿರ್ಧಾರ: ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಾಧುಸ್ವಾಮಿ ಅವರು, ವಿವಿಧ ಕಾಮಗಾರಿಗಳ ಆರಂಭಕ್ಕೂ ಅವಕಾಶ ಕೊಡುತ್ತಿದ್ದು, ಯಾವ ಕಾಮಗಾರಿಗಳನ್ನು ಆರಂಭಿಸಬಹುದೆಂಬುದನ್ನು ಗುರುವಾರ ಪ್ರಕಟಿಸಲಾಗುವುದು ಎಂದು ತಿಳಿಸಿದರು.ಮೇ ಮೊದಲವಾರದಲ್ಲಿ ಮತ್ತೆ ಪಡಿತರ ಕಾರ್ಡುದಾರರಿಗೆ 10 ಕೇಜಿ ಅಕ್ಕಿ, 2 ಕೇಜಿ ಬೇಳೆ ವಿತರಿಸಲಾಗುವುದು.

ಗುರುವಾರದಿಂದ ಆನ್‌ ಲೈನ್‌ ಟ್ರೇಡಿಂಗ್‌ಗೂ ಅವಕಾಶ
ಕೊಡುತ್ತಿದ್ದು, ಗ್ರಾಹಕರು ತಮ್ಮ ಮನೆ ಬಾಗಿಲಿನಲ್ಲಿ ಅಗತ್ಯ ವಸ್ತುಗಳನ್ನು ಪಡೆದುಕೊಳ್ಳಬಹುದು. ಕೃಷಿ ಚಟುವಟಿಕೆ ಮತ್ತು ಸರಕು ಸಾಗಣೆಗೆ ಅಡಚಣೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ.

ಜಿಲ್ಲೆಗೆ ಕನಿಷ್ಠ 2 ಲಕ್ಷ ಮಾಸ್ಕ್ಗಳ ಅಗತ್ಯವಿದೆ. ದಾನಿಗಳಿಂದ ಹಾಗೂ ಕೈಗಾರಿಕೆ ಗಳ ಸಿಎಸ್‌ಆರ್‌ ನಿಧಿಯಿಂದ ಪಡೆಯುವ ಪ್ರಯತ್ನ ನಡೆದಿದ್ದು, ನಿರೀಕ್ಷಿತ ಸ್ಪಂದನೆ ಸಿಗದಿದ್ದರೆ ಸರ್ಕಾರವೇ ಅನುದಾನ ನೀಡಲಿದೆ ಎಂದರು. ಕೋವಿಡ್ – 19 ನಿಯಂತ್ರಣಕ್ಕೆ ಸಹಕರಿಸಿದ ಜಿಲ್ಲೆಯ ಜನತೆಯನ್ನು ಸರ್ಕಾರದಿಂದ ಅಭಿನಂದಿಸುವುದಾಗಿ ಹೇಳಿದರು.

ಡೀಸಿ ಗಿರೀಶ್‌ ಮಾತನಾಡಿ, ಜಿಲ್ಲೆಯಲ್ಲಿ ಜ್ವರ, ಕೆಮ್ಮು ಇರುವವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು. ಎಸ್ಪಿ ಶ್ರೀನಿವಾಸಗೌಡ, ಜಿಪಂ ಸಿಇಒ ಪರಮೇಶ್‌, ಶಾಸಕರಾದ ಬಾಲಕೃಷ್ಣ, ಎಂ.ಎ. ಗೋಪಾಲಸ್ವಾಮಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.