13 ವರ್ಷವಾದ್ರೂ ಆರಂಭವಾಗದ ಕಾರ್ಖಾನೆ


Team Udayavani, Sep 8, 2020, 4:18 PM IST

13 ವರ್ಷವಾದ್ರೂ ಆರಂಭವಾಗದ ಕಾರ್ಖಾನೆ

ಚನ್ನರಾಯಪಟ್ಟಣ: ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆ 18 ತಿಂಗಳಲ್ಲಿ ಉನ್ನತೀಕರಣ ಮಾಡುವುದಾಗಿ ಖಾಸಗಿಯವರಿಗೆ ಗುತ್ತಿಗೆ ನೀಡಿರುವುದಾಗಿ ಹೇಳಿದ ಆಡಳಿತ ಮಂಡಳಿ 13 ವರ್ಷವಾದರೂ ಕಾರ್ಖಾನೆ ಉನ್ನತೀಕರಣ ಮಾಡಿ ಪ್ರಾರಂಭಿಸಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎಂ.ಎ.ಗೋಪಾಲಸ್ವಾಮಿ ಆರೋಪಿಸಿದರು.

ತಾಲೂಕಿನ ಶ್ರೀನಿವಾಸಪುರ ಬಳಿ ಇರುವ ಕಾರ್ಖಾನೆ ಮುಂಭಾಗ ಕಾಂಗ್ರೆಸ್‌ನಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿ, 13 ವರ್ಷದಿಂದ ಕಬ್ಬು ಬೆಳೆಗಾರರಿಗೆ 200 ಕೋಟಿ ಹಣ ನಷ್ಟವಾಗಿದೆ. ಆದರೆ ಕಾರ್ಖಾನೆಯನ್ನುಚಾಮುಂಡೇಶ್ವರಿ ಷುಗರ್ ಸಂಸ್ಥೆಗೆ ನೀಡಿ ಹಣ ಮಾಡಿರುವುದಲ್ಲದೆ ರೈತರಿಗೆ ದ್ರೋಹ ಮಾಡಿದ್ದಾರೆ ಎಂದರು.

ಶಾಸಕ ಬಾಲಕೃಷ್ಣ ಎರಡು ವರ್ಷದಿಂದ ಹತ್ತಕ್ಕೂ ಹೆಚ್ಚು ಬಾರಿ ದಿನಾಂಕ ನೀಡಿದ್ದಾರೆ, ಕಾಂಗ್ರೆಸ್‌ ಪ್ರತಿಭಟನೆ ಮಾಡುವುದನ್ನು ಅರಿತುಕಾರ್ಖಾನೆ ಅಧಿಕಾರಿಗಳ ಮೂಲಕ ಈ ತಿಂಗಳ30 ರಂದು ಪ್ರಾರಂಭಿಸುವುದಾಗಿ ಪತ್ರ ಬರೆದು ಕಳುಹಿಸಿದ್ದಾರೆ, ಶೀಘ್ರದಲ್ಲಿ ಹಾಸನಕ್ಕೆ ಪಾದಯಾತ್ರೆ ಮಾಡುವುದಲ್ಲದೆ, ವಿಧಾನಸೌಧ ಚಲೋ ಹಮ್ಮಿ ಕೊಳ್ಳಲಾಗುವುದು, ಜೊತೆಗೆಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ನೀಡಬೇಕಾಗಿರುವ ಹಣದ ಬಗ್ಗೆ ಉಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಲಾಗುವುದು ಎಂದು ಹೇಳಿದರು.

ಬಡ್ಡಿ ಕೊಡುವವರು ಯಾರು: ಈಗಾಗಲೇ 26 ಕೋಟಿ ಕರಾರು ಹಣ ಬಾಕಿ ಉಳಿಸಿಕೊಂಡಿದ್ದಾರೆ ಇದನ್ನು ಬ್ಯಾಂಕಿಗೆ ಠೇವಣಿ ಮಾಡಿದರೆ ವಾರ್ಷಿಕ 4 ಕೋಟಿ ಬಡ್ಡಿ ಬರುತ್ತಿತ್ತು ಇದನ್ನು ನೀಡುವವರು ಯಾರು? ಒಂದು ವೇಳೆ ಹಣ ಪಡೆಯದೆ ಶಾಸಕರು ವಾರ್ಷಿಕ ಕೋಟ್ಯಂತರ ರೂ. ಹಣ ಪಡೆಯುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಕಿಕ್‌ ಬ್ಯಾಗ್‌ ಪಡೆದ ಶಾಸಕ: ರೈತ ಮುಖಂಡ ಶ್ರೀಕಂಠ ಮಾತನಾಡಿ, ಕ್ಷೇತ್ರದ ಶಾಸಕ ಬಾಲಕೃಷ್ಣ ಚಾಮುಂಡೇಶ್ವರಿ ಸಂಸ್ಥೆಯಿಂದ ಕಿಕ್‌ ಬ್ಯಾಗ್‌ ಪಡೆದಿದ್ದಾರೆ, ಅವರಿಗೆ ರೈತರ ಕಾಳಜಿ ಮುಖ್ಯವಲ್ಲ ಹಣ ಮಾಡುವುದು ಮುಖ್ಯವಾಗಿದೆ, ರೈತ ಸಂಘದವರು ಧರಣಿ ಮಾಡಿದರೆ ಮಾರನೇ ದಿವಸ ಅಥವಾ ಧರಣಿ ಹಿಂದಿನ ದಿವಸ ಕಾರ್ಖಾನೆ ಭೇಟಿ ನೀಡಿ ಹಣ ಪಡೆಯುವುದನ್ನು ರೂಢಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಹಳೆ ವಸ್ತುಗಳಿಂದ ಕಾರ್ಖಾನೆ ಉನ್ನತೀಕರಣ: ಚಾಮುಂಡೇಶ್ವರಿ ಷುಗರ್ ಅವರು ಈಗಾಗಲೆ ನಾಲ್ಕು ಕಾರ್ಖಾನೆ ಹೊಂದಿದ್ದು ಇಲ್ಲಿನ ಕಾರ್ಖಾನೆ ಉನ್ನತೀಕರಣಕ್ಕೆಂದು ಹೊಸ ಸಾಮಗ್ರಿ ತರಿಸಿ ಅದನ್ನು ಬೇರೆ ಕಾರ್ಖಾನೆಗೆ ಕಳುಹಿಸಿ ಅಲ್ಲಿನ ಹಳೆಯ ಯಂತ್ರಗಳನ್ನು ಇಲ್ಲಿಗೆ ಜೋಡಣೆ ಮಾಡುತ್ತಿದ್ದಾರೆ, ಹೊಸ ವಸ್ತುಗಳನ್ನು ಅಡಳವಡಿಸಿದ್ದರೆ ಯಾಕೆ ಬೈಲರ್‌ ಸಿಡಿದು ಹೋಗುತ್ತಿತ್ತು ಎಂದು ಪ್ರಶ್ನಿಸಿದರು.ಮಾಜಿ ಶಾಸಕ ಸಿ.ಎಸ್‌.ಪುಟ್ಟೇಗೌಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಂಜೇಗೌಡ, ಜಿಪಂ ಸದಸ್ಯ ಶ್ರೇಯಸ್‌ ಎಂ. ಪಟೇಲ್‌, ತಾಪಂ ಸದಸ್ಯರಾದ ರತ್ನಮ್ಮ, ರಾಮಕೃಷ್ಣೇಗೌಡ, ಪ್ರಮೀಳಾ, ಮಂಜುನಾಥ, ಗಿರೀಶ್‌, ಜಿಪಂ ಮಾಜಿ ಉಪಾಧ್ಯಕ್ಷ ವಿಜಯಕುಮಾರ, ಕಿನಾಸ್‌ ಕಾಂಗ್ರೆಸ್‌ ಅಧ್ಯಕ್ಷ ಶಿವಪ್ರಸಾದ್‌, ಕಾರ್ಖಾನೆ ನಿರ್ದೇಶಕರಾದ ರವೀಂದ್ರ, ನಾರಾಯಣ, ಮಾಜಿ ನಿರ್ದೇಶಕ ಶಿವರಾಂ, ಎ.ಬಿ.ನಂಜುಂಡೇಗೌಡ ಇದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.