Hassan ಹಾಸನಾಂಬ ದೇಗುಲದ ಎದುರು ಶಾಸಕರ ಪ್ರತಿಭಟನೆ

ಪತಿಯೊಂದಿಗೆ ಹೋಮ ನಡೆಸಿದ ಡಿ.ಸಿ.: ಆಕ್ರೋಶ

Team Udayavani, Nov 5, 2023, 12:24 AM IST

Hassan ಹಾಸನಾಂಬ ದೇಗುಲದ ಎದುರು ಶಾಸಕರ ಪ್ರತಿಭಟನೆ

ಹಾಸನ: ಜಿಲ್ಲಾಧಿಕಾರಿ ಅವರು ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದು, ತಮ್ಮನ್ನು ಕಡೆಗಣಿಸಿ ದ್ದಾರೆಂದು ಸ್ಥಳೀಯ ಶಾಸಕ ಸ್ವರೂಪ್‌ ಪ್ರಕಾಶ್‌ ಅವರು ಜೆಡಿಎಸ್‌ ನಗರಸಭಾ ಸದಸ್ಯರೊಂದಿಗೆ ಹಾಸನಾಂಬ ದೇಗುಲದ ಪ್ರವೇಶ ದ್ವಾರದ ಸಮೀಪವೇ ಶನಿವಾರ ಪ್ರತಿಭಟನೆ ನಡೆಸಿದರು.

ಬೆಳಗ್ಗೆ 9 ಗಂಟೆ ವೇಳೆಗೆ ದೇಗುಲದ ಬಳಿ ಬಂದ ಸ್ವರೂಪ್‌ ಅವರು, ದೇವಾಲಯದ ಪ್ರವೇಶ ದ್ವಾರದ ಬಳಿಗೆ ಜಿಲ್ಲಾಧಿಕಾರಿಯವರನ್ನು ಕರೆಸಿ ದೇವಾಲಯದ ಕಳಸ ಪುನರ್‌ ಪ್ರತಿಷ್ಠಾಪನೆ ಮತ್ತು ಆ ಸಂಬಂಧ ನಡೆದ ಹೋಮ-ಹವನ ಪೂಜೆಗೆ ಸ್ಥಳೀಯ ಶಾಸಕನಾದ ನನ್ನನ್ನು ಯಾಕೆ ಕರೆದಿಲ್ಲ? ಮುಜರಾಯಿ ಕಾಯ್ದೆ ಪ್ರಕಾರ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷನಾದ ನನ್ನ ಗಮನಕ್ಕೂ ತರದೆ ನನ್ನನ್ನು ಆಹ್ವಾನಿಸದೆ ಹೇಗೆ ಪೂಜೆ ಮಾಡಿದಿರಿ? ನಿಮ್ಮ ಪತಿಯೊಂದಿಗೆ ಸೇರಿ ಕಳಶ ಪ್ರತಿಷ್ಠಾಪನೆ, ಹೋಮ ಮಾಡಿದ್ದು ಸರಿಯೇ? ದೇವಾಲಯ ನಿಮ್ಮ ವೈಯಕ್ತಿಕ ಆಸ್ತಿಯೇ ಎಂದು ತರಾಟೆಗೆ ತೆಗೆದುಕೊಂಡರು.

ದೇವಾಲಯದ ಕಳಶ ಪ್ರತಿಷ್ಠಾಪನೆ ಪ್ರತಿ 12 ವರ್ಷಕ್ಕೊಮ್ಮೆ ನಡೆಯಬೇಕು. ಆದರೆ ಏಳೆಂಟು ವರ್ಷಗಳ ಅಂತರದಲ್ಲಿ ಮತ್ತೆ ಪ್ರತಿಷ್ಠಾಪನೆ ಮಾಡಲಾಗಿದೆ. ಇದು ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದೀರಿ. ದೇವಾಲಯದ ಕಳಸ ಪ್ರತಿಷ್ಠಾಪನೆಗೆ ಶೃಂಗೇರಿ ಗುರುಗಳನ್ನು ಆಹ್ವಾನಿಸಬೇಕಾಗಿತ್ತು. ಈ ಸಂಬಂಧ ಒಮ್ಮೆಯೂ ನನ್ನೊಂದಿಗೆ ಚರ್ಚಿಸದೆ ಏಕಪಕ್ಷೀಯವಾಗಿ ನಡೆದು ಕೊಂಡಿದ್ದೀರಿ ಎಂದು ದೂರಿದರು.

ಕಳಶ‌ ಪ್ರತಿಷ್ಠಾಪನೆಗೆ ಮುಜರಾಯಿ ತಹಶೀಲ್ದಾರ್‌ ನಿಮಗೆ ಹೇಳಿದ್ದಾರೆ ಎಂದು ಜಿಲ್ಲಾಧಿಕಾರಿ ಸಮರ್ಥನೆ ನೀಡಲು ಮುಂದಾದರು. ಧಾರ್ಮಿಕ ದತ್ತಿ ಇಲಾಖೆ ಆಗಮ ಪಂಡಿತರು ಹೇಳಿದಂತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದಾಗ ಅದನ್ನು ಒಪ್ಪದ ಶಾಸಕ ಸ್ವರೂಪ್‌, ಕಳಸ ಪ್ರತಿಷ್ಠಾಪನೆಯನ್ನು ಶಾಸ್ತ್ರೋಕ್ತವಾಗಿ ಮಾಡಬೇಕು. ಶೃಂಗೇರಿ ಶ್ರೀಗಳನ್ನು ಕರೆಸಿ ಮಾಡಬೇಕು ಎಂದು ತಮ್ಮ ತಂದೆ ಎಚ್‌.ಎಸ್‌. ಪ್ರಕಾಶ್‌ ಅವರ ಕಾಲದಲ್ಲಿ ನಡೆದಿದ್ದ ಕಳಸ ಪ್ರತಿಷ್ಠಾಪನೆಯ ಚಿತ್ರಗಳ ಆಲ್ಬಂ ಪ್ರದರ್ಶಿಸಿದರು.

ಸ್ಥಳಕ್ಕೆ ಬಂದ ಮುಜರಾಯಿ ತಹಶೀಲ್ದಾರ್‌ ನಿರುತ್ತರರಾಗಿ ನಿಂತರು. ಉಪ ವಿಭಾಗಾಧಿಕಾರಿಯರು ಸ್ಥಳಕ್ಕೆ ಬಂದು ನಿಮ್ಮ ಪಿಎಗೆ ಫೋನ್‌ ಮಾಡಿದ್ದೆ . ಕರೆ ಸ್ವೀಕರಿಸಲಿಲ್ಲ ಎಂದು ಸ್ಪಷ್ಟಪಡಿಸಲು ಮುಂದಾದರು. ಅಪರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಮ್ಮಯ್ಯ ಏನೋ ತಪ್ಪಾಗಿದೆ ಬಿಟ್ಟುಬಿಡಿ ಎಂದು ಸಮಾಧಾನ ಪಡಿಸಲು ಯತ್ನಿಸಿದರು. ಶಾಸಕರ ಪ್ರತಿಭಟನೆಗೆ ಜೆಡಿಎಸ್‌ ಮುಖಂಡರು, ನಗರಸಭೆ ಜೆಡಿಎಸ್‌ ಸದಸ್ಯರು ಸಾಥ್‌ ನೀಡಿದರು. ಈ ಬಾರಿ ಹಾಸ ನಾಂಬ ಉತ್ಸವ ಆಗಿಲ್ಲ, ಸತ್ಯಭಾಮ ಉತ್ಸವ ಆಗಿದೆ. ಅಧಿಕಾರಿಗಳು ಹಾಸನಾಂಬ ದೇವಾಲಯ ವನ್ನೇ ಆಸ್ತಿ ಮಾಡಿಕೊಂಡಿದ್ದಾರೆ ಎಂದು ನಗರಸಭೆ ಸದಸ್ಯರು, ಬಿಜೆಪಿ ಸದಸ್ಯರು, ಜೆಡಿಎಸ್‌ ಮುಖಂಡರು ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶ ಹೊರ ಹಾಕಿದರು.

ಸಮರ್ಪಕ ಉತ್ತರ ನೀಡದೆ ದೇಗುಲಕ್ಕೆ ವಾಪಸಾದ ಜಿಲ್ಲಾಧಿಕಾರಿ ವಿರುದ್ಧ ಜೆಡಿಎಸ್‌ ಮುಖಂಡರು, ನಗರಸಭೆ ಸದಸ್ಯರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

 

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

11

Hasan: 100 ರೂ.ಗೆ ಸ್ನೇಹಿನನ್ನೇ ಹತ್ಯೆಗೈದ ಕಿರಾತಕರು

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

ಸರಕಾರದ ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

State Govt ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

A vehicle caught fire at Shiradi Ghat

Shiradi ಘಾಟ್‌ನಲ್ಲಿ ವಾಹನ ಬೆಂಕಿಗೆ ಆಹುತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.