ಜಿಲ್ಲೆಯಲ್ಲಿ ಮಳೆ ಕೊರತೆ ನಡುವೆ ಬಿತ್ತನೆ ಉತ್ತಮ

ಆಗಸ್ಟ್‌ನಲ್ಲಿ ತೀವ್ರ ಮಳೆಕೊರತೆ , ಮೆಕ್ಕೆ ಜೋಳದ ಬೆಳೆಗಾರರ ಆತಂಕ , ರಾಗಿ ಬಿತ್ತನೆಗೂ ಹಿನ್ನಡೆ ಆತಂಕ

Team Udayavani, Aug 26, 2021, 3:48 PM IST

ಜಿಲ್ಲೆಯಲ್ಲಿ ಮಳೆ ಕೊರತೆ ನಡುವೆ ಬಿತ್ತನೆ ಉತ್ತಮ

ಹಾಸನ: ಜಿಲ್ಲೆಯಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾದರೂ ಬೆಳೆಗಳ ಬಿತ್ತನೆ ಪ್ರಮಾಣ ಸಮಾಧಾನಕರವಾಗಿದೆ. ಆದರೆ ಆಗಸ್ಟ್‌ನಲ್ಲಿ ಮಳೆ ಕೈಕೊಟ್ಟಿರುವುದರಿಂದ ಬೆಳೆಗಳು ಒಣಗುವ ಆತಂಕ ಅನ್ನದಾತರನ್ನು ಕಾಡುತ್ತಿದೆ.

ಮಾನ್ಸೂನ್‌ ಮಳೆ ಅಂದರೆ ಜೂನ್‌ನಿಂದ ಆ.24 ರವರೆಗೆ ವಾಡಿಕೆ ಮಳೆ587 ಮಿ.ಮೀ. ಆಗಬೇಕಾಗಿತ್ತಾದರೂ 496 ಮಿ.ಮೀ. ಮಳೆಯಾಗಿದ್ದು, ಶೇ.15 ಮಳೆಕೊರತೆಯಾಗಿದೆ. ಆಗಸ್ಟ್‌ನಲ್ಲಿ ವಾಡಿಕೆ ಮಳೆ166 ಮಿ.ಮೀ. ಮಳೆಯಾಗ ಬೇಕಾಗಿದ್ದು,ಕೇವಲ 89 ಮಿ.ಮೀ. ಮಳೆಯಾಗಿದ್ದು, ಶೇ.46 ರಷ್ಟು ಮಳೆ ಕೊರತೆಯಾಗಿದೆ.

ಮಾನ್ಸೂನ್‌ ಮಳೆ ಮಲೆನಾಡಿನಲ್ಲಿ ಹೆಚ್ಚು ಮಲೆನಾಡು ಪ್ರದೇಶದಲ್ಲಿ ವಾಡಿಕೆಗಿಂತ ಹೆಚ್ಚು ದಾಖಲಾಗುವುದು ಸಹಜ. ಆದರೆ, ಈ ವರ್ಷ ಜಿಲ್ಲೆಯ ಮಲೆನಾಡು ತಾಲೂಕುಗಳಲ್ಲಿ ಸಕಲೇಶಪುರ ಹೊತರುಪಡಿಸಿ ಮಾನ್ಸೂನ್‌ ಮಳೆ ಕೊರತೆಯಾಗಿದ್ದು. ಬಯಲುಸೀಮೆಯಲ್ಲಿ ವಾಡಿಕೆಗಿಂತ ಹೆಚ್ಚು
ಮಳೆ ದಾಖಲಾಗಿದೆ. ಜೂನ್‌ನಿಂದ ಆ.24 ರವರೆಗೆ ಆಲೂರು ತಾಲೂಕಿನಲ್ಲಿ ವಾಡಿಕೆಗಿಂತ ಶೇ.5ರಷ್ಟು ಮಳೆಕೊರತೆಯಾಗಿದ್ದರೆ, ಅರಕಲಗೂಡು ತಾಲೂಕಿನಲ್ಲಿ ಶೇ.17 ರಷ್ಟು, ಬೇಲೂರಿನಲ್ಲಿ ಶೇ.11 ರಷ್ಟು, ಹಾಸನ ತಾಲೂಕಿನಲ್ಲಿ ಶೇ.15 ರಷ್ಟು ಮಳೆ ಕೊರತೆಯಾಗಿದೆ. ಸಹಜವಾಗಿ ಮಲೆನಾಡು ಸಕಲೇಶಪುರ ತಾಲೂಕಿನಲ್ಲಿ ವಾಡಿಕೆಗಿಂತ ಶೇ.7 ರಷ್ಟು ಹೆಚ್ಚು ಮಳೆಯಾಗಿದ್ದರೆ, ಬಯಲುಸೀಮೆ ತಾಲೂಕುಗಳಾದ ಅರಸೀಕೆರೆಯಲ್ಲಿ ವಾಡಿಕೆಗಿಂತ ಶೇ.24 ರಷ್ಟು ಹೆಚ್ಚು ಮಳೆಯಾಗಿದೆ. ಚನ್ನರಾಯಪಟ್ಟಣ ತಾಲೂಕಿನಲ್ಲಿ ಶೇ.13 ರಷ್ಟು ಹೊಳೆನರಸೀಪುರ ತಾಲೂಕಿನಲ್ಲಿಯೂ ವಾಡಿಕೆಗಿಂತ ಶೇ.9 ರಷ್ಟು ಮಳೆಯಾಗಿದೆ.

ಆಗಸ್ಟ್‌ ತಿಂಗಳಲ್ಲಿನಲ್ಲಿಯೂ ಬಯಲು ಸೀಮೆ ತಾಲೂಕುಗಳಾದ ಅರಸೀಕೆರೆ ತಾಲೂಕಿನಲ್ಲಿ ವಾಡಿಕೆಗಿಂತ ಶೇ.10ರಷ್ಟು ಹೆಚ್ಚು ಮಳೆಯಾಗಿದ್ದರೆ, ಚನ್ನರಾಯಪಟ್ಟಣ ತಾಲೂಕಿನಲ್ಲಿಯೂ ಶೇ.14 ರಷ್ಟು ಹೆಚ್ಚು ಮಳೆಯಾಗಿದೆ. ಆಲೂರು ತಾಲೂಕಿನಲ್ಲಿ ಶೇ.57 ರಷ್ಟು ಮಳೆಕೊರತೆಯಾಗಿದ್ದು,
ಅರಕಲಗೂಡು – ಶೇ. 49, ಬೇಲೂರು – ಶೇ.35, ಹಾಸನ -ಶೇ.33, ಹೊಳೆನರಸೀಪುರ – ಶೇ.48 ಹಾಗೂ ಸಕಲೇಶಪುರ ತಾಲೂಕಿನಲ್ಲಿ ಶೇ.32 ರಷ್ಟು ಮಳೆಕೊರತೆ ದಾಖಲಾಗಿದೆ. ಒಟ್ಟಾರೆ ಆಗಸ್ಟ್‌ನಲ್ಲಿ ಜಿಲ್ಲೆಯಲ್ಲಿ ಶೇ.46 ರಷ್ಟು ಮಳೆಕೊರತೆ ದಾಖಲಾಗಿದೆ.

ಇದನ್ನೂ ಓದಿ:ವಿರಾಟ್ ಕೊಹ್ಲಿಯು ತೆಂಡೂಲ್ಕರ್ ಗೆ ಕರೆ ಮಾಡಿ ಸಲಹೆ ಪಡೆಯಲಿ: ಗಾವಸ್ಕರ್

ಮುಸುಕಿನ ಜೋಳಕ್ಕೆಹಾನಿ ಸಂಭವ: ಜಿಲ್ಲೆಯಲ್ಲಿ ಮುಸುಕಿನ ಜೋಳ ಈಗ ತೆನೆ ಬಿಡುವ ಸಮಯ. ಈಗ ಮಳೆಕೈ ಕೊಟ್ಟಿರುವುದರಿಂದ ಜೋಳಕಾಳುಕಟ್ಟದೆ ಹಾನಿ ಸಂಭವಿಸುವ ಆತಂಕ ಬೆಳೆಗಾರರನ್ನುಕಾಡುತ್ತಿದೆ. ಇನ್ನು ನಾಲ್ಕೈದು ದಿನಗಳಲ್ಲಿ ಮಳೆ ಬಾರದಿದ್ದರೆ ಮುಸುಕಿನ ಜೋಳದ ಇಳುವರಿಯಲ್ಲಿ ಭಾರೀ ನಷ್ಟವುಂಟಾಗುವ ಸಾಧ್ಯತೆ ಇದೆ. ರಾಗಿ ಬಿತ್ತನೆಗೂ ಈಗ ಮಳೆಯ ಅಗತ್ಯವಿದೆ. ಬಿತ್ತನೆಯಾಗಿರುವ ರಾಗಿ ಬೆಳವಣಿಗೆಗೂ ಈಗ ಮಳೆಯ ಅಗತ್ಯವಿದ್ದು, ಮಳೆಗಾಗಿ ರೈತರು ಮುಗಿಲು ನೋಡುವಂತಾಗಿದೆ.ಕಳೆದೆರಡು ದಿನಗಳ ಹಿಂದೆ ಜಿಲ್ಲೆಯಲ್ಲಿ
ಚದುರಿದಂತೆ ಮಳೆಯಾಗಿ ಅಶಾಭಾವ ಮೂಡಿಸಿತ್ತು. ಆದರೆ ಎರಡು ದಿನಗಳಿಂದೀಚೆಗೆ ಬಿರು ಬಿಸುಲಿನ ವಾತಾವರಣವಿದ್ದು, ಸದ್ಯಕ್ಕೆ ಮಳೆ ಬಾರದೇನೋ ಎಂಬ ಆತಂಕಕಾಡುತ್ತಿದೆ.

ಈ ವಾರದೊಳಗೆ ಮಳೆಯಾದರೆ ಹಾನಿಯಿಲ್ಲ
ಜಿಲ್ಲೆಯಲ್ಲಿ ಆಗಸ್ಟ್‌ ತಿಂಗಳಲ್ಲಿ ಶೇ. 45 ಕ್ಕೂ ಹೆಚ್ಚು ಮಳೆ ಕೊರತೆ ಕಾಡಿದೆ.ಬೆಳೆಗಳು ಒಣಗುತ್ತಿಲ್ಲ. ಈ ವಾರದೊಳಗೆ ಮಳೆಯಾದರೆ ಬೆಳೆಗಳು ಚೇತರಿಸಿಕೊಳ್ಳತ್ತವೆ. ಹಾನಿಯೇನೂ ಆಗುವುದಿಲ್ಲ. ಮುಂದಿನ ವಾರವೂ ಮಳೆ ಬಾರದಿದ್ದರೆ ಬೆಳೆಗಳಿಗೆ ಹಾನಿಯಾಗುತ್ತದೆ. ಜಿಲ್ಲೆಯಲ್ಲಿ ಸರಾಸರಿ ಶೇ. 90ಬಿತ್ತನೆಯಾಗಿದೆ. ಬೆಳೆಗಳ ಸ್ಥಿತಿಯೂ ಉತ್ತಮವಾಗಿದೆ. ರಸಗೊಬ್ಬರದ ಕೊರತೆ ಇದುವರೆಗೂ ಎದುರಾಗಿಲ್ಲ. ಹೆಚ್ಚು ಪ್ರಮಾಣದಲ್ಲಿ ಯೂರಿಯಾರಸಗೊಬ್ಬರ ಅಗತ್ಯವಿದೆ. ಮುಂದಿನ ತಿಂಗಳಿಗೆ ಬೇಕಾಗುವಷ್ಟು ಗೊಬ್ಬರ ಪೂರೈಕೆಗೆ ಬೇಡಿಕೆ ಸಲ್ಲಿಸಲಾಗಿದೆ ಎಂದು ಎಂದು ಜಂಟಿಕೃಷಿ ನಿರ್ದೇಶಕ ಕೆ.ಎಚ್‌.ರವಿ ತಿಳಿಸಿದರು.

ಈವರೆಗೆ ಜಿಲ್ಲೆಯಲ್ಲಿ ಒಟ್ಟು ಶೇ.90 ಬಿತ್ತನೆ
ಜಿಲ್ಲೆಯಲ್ಲಿ ಈ ವರ್ಷ ಆ.24 ವರೆಗೆ ಶೇ.89.79 ರಷ್ಟು ಬಿತ್ತನೆಯಾಗಿದೆ. ಒಟ್ಟು 2,08,564 ಹೆಕ್ಟೇರ್‌ನಲ್ಲಿ ವಿವಿಧ ಬೆಳೆಗಳ ಬಿತ್ತನೆ ಗುರಿದ್ದು, ಈವರೆಗೆ1,87,259 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ.ಕಳೆದ ವರ್ಷದಂತೆ ಈ ವರ್ಷವೂ ಮೆಕ್ಕೆ ಜೋಳ ಬೆಳೆ ಗುರಿ ಮೀರಿ ಬಿತ್ತನೆಯಾಗಿದೆ. ಈ ವರ್ಷ 76000 ಹೆಕ್ಟೇರ್‌ ಬಿತ್ತನೆ ಗುರಿಗೆ ಬದಲಾಗಿ 85,540 ಹೆಕ್ಟೇರ್‌ ಬಿತ್ತನೆಯಾಗಿದೆ. ಭತ್ತದ34,000 ಹೆಕ್ಟೇರ್‌ ಬಿತ್ತನೆ ಗುರಿಯಿದ್ದು, ಈವರೆಗೆ 22,580 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ಬಿಳಿಜೋಳ10160 ಹೆಕ್ಟೇರ್‌ ಬಿತ್ತನೆ ಗಿರಿಯಿದ್ದರೂ ಕೇವಲ 369 ಹೆಕ್ಟೇರ್‌ನಲ್ಲಷ್ಟೇ ಬಿತ್ತನೆಯಾಗಿದೆ.

ರಾಗಿ 68,417 ಹೆಕ್ಟೇರ್‌ ಬಿತ್ತನೆ ಗುರಿದ್ದು, ಈವರೆಗೆ49,976 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದ್ದು,ಕಿರುಧಾನ್ಯಗಳು220 ಹೆಕ್ಟೇರ್‌ ಗುರಿಗೆ ಬದಲಾಗಿ ಕೇಲವ25 ಹೆಕ್ಟೇರ್‌ ಬಿತ್ತನೆಯಾಗಿವೆ.ಒಟ್ಟು ಏಕದಳ ಧ್ಯಾನ್ಯಗಳ ಬಿತ್ತನೆ ಗುರಿ 1,88,787 ಹೆಕ್ಟೇರ್‌ ಇದ್ದು, ಈವರೆಗೆ1,58,490 ಹೆಕ್ಟೇರ್‌ ಬಿತ್ತನೆಯಾಗಿದೆ . ವಾಣಿಜ್ಯ ಬೆಳೆಗಳು6549 ಹೆಕ್ಟೇರ್‌ ಬಿತ್ತನೆ ಗುರಿಯಿದ್ದು,10,541 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ಒಟ್ಟು2,08,564 ಹೆಕ್ಟೇರ್‌ ಬಿತ್ತಗೆ ಗುರಿಯಿದ್ದು, ಈವರೆಗೆ1,87,259 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿ ಶೇ.89.79 ರಷ್ಟು ಬಿತ್ತನೆಯಾಗಿದೆ ಎಂದುಕೃಷಿ ಇಲಾಖೆ ಮಾಹಿತಿ ನೀಡಿದೆ.

-ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.