Sakleshpura: ಪತ್ನಿಯನ್ನು ಹತ್ಯೆಗೈದು ಹೂತಿಟ್ಟ; ನಾಯಿಗಳಿಂದಾಗಿ ಸಿಕ್ಕಿಬಿದ್ದ ಕಿರಾತಕ!

ಮೂರು ತಿಂಗಳು ಕಾಲ ಆರಾಮವಾಗಿದ್ದ...!!

Team Udayavani, Nov 3, 2023, 6:00 PM IST

1-sddsad

ಸಕಲೇಶಪುರ: ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಊರು ಬಿಟ್ಟಿದ್ದ ಪತಿ ಮೂರು ತಿಂಗಳ ಬಳಿಕ ನಾಯಿಗಳಿಂದಾಗಿ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ.

ತಾಲೂಕಿನ ಬಾಗೆ ಗ್ರಾಮದಲ್ಲಿ ಘಟನೆ ನಡೆದಿದ್ದು ಶಾಂತಿ ವಾಸು (28) ಹತ್ಯೆಯಾದ ಮಹಿಳೆಯಾಗಿದ್ದು, ಪತಿ ಪವನ್ ಕುಮಾರ್ (33) ಬಂಧಿತ ಆರೋಪಿಯಾಗಿದ್ದಾನೆ.

ಶಾಂತಿ ಮತ್ತು ಪವನ್ ಒಬ್ಬರೊಬ್ಬರನ್ನು ಪ್ರೀತಿಸಿ ಮದುವೆ ಆಗಿದ್ದರು. ಇಬ್ಬರು ಮಕ್ಕಳಿದ್ದರು.ಮೂರು ತಿಂಗಳ ಹಿಂದೆ ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ನಡುವೆ ಗಲಾಟೆ ನಡೆದು ವಿಕೋಪಕ್ಕೆ ತಿರುಗಿ ಕೃತ್ಯ ಎಸಗಿದ್ದ. ಯಾರಿಗೂ ತಿಳಿಯದಂತೆ ಮಣ್ಣಿನಲ್ಲಿ ಹೂತಿಟ್ಟು, ಹೆಂಡತಿ ನಾಪತ್ತೆಯಾಗಿದ್ದಾಳೆ ಎಂದು ದೂರು ನೀಡಿದ್ದ. ಆದರೆ ಮೂರು ತಿಂಗಳ ಬಳಿಕ ಬೀದಿ ನಾಯಿಗಳಿಂದಾಗಿ ಕೃತ್ಯ ಬಯಲಾಗಿ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಮನೆಯ ಸಮೀಪವಿರುವ ಹಳ್ಳದ ಪಕ್ಕದ ಗುಂಡಿ ತೆಗೆದು ಶವನ್ನು ಹೂತು ಹಾಕಿದ್ದ. ನಂತರ ಹೆಂಡತಿ ಕಾಣೆಯಾಗಿರುವ ಬಗ್ಗೆ ತಾನೆ ಖುದ್ದು ನಗರ ಠಾಣೆಗೆ ಹೋಗಿ ದೂರು ದಾಖಲಿಸಿದ್ದ.ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಪವನ್ ಕುಮಾರ್ ತನ್ನ ಇಬ್ಬರು ಗಂಡು ಮಕ್ಕಳನ್ನು ನೋಡಿಕೊಂಡು ಹಳೇ ಬಾಗೆಯಲ್ಲಿ ತನ್ನ ಮನೆಯಲ್ಲೆ ವಾಸವಿದ್ದ. ಮೂರು ತಿಂಗಳ ಕಾಲ ಆರಾಮವಾಗಿದ್ದವ  ನಾಯಿಗಳಿಂದಾಗಿ ಸಿಕ್ಕಿಬಿದ್ದಿದ್ದಾನೆ.

ಗುರುವಾರ ಸಂಜೆ ಶವದ ವಾಸನೆಗೆ ಕೆಲ ನಾಯಿಗಳು ಮಣ್ಣಿನಿಂದ ಮೃತದೇಹದ ಮೂಳೆಯನ್ನು ಎಳೆದಾಡಿದೆ. ತೋಟದ ಮಾಲಕ ಶ್ರೀನಿವಾಸ್ ಇದನ್ನು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತತ್ ಕ್ಷಣ ಪೊಲೀಸರು ಅನುಮಾನದ ಮೇಲೆ ಪವನ್ ನನ್ನ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಶುಕ್ರವಾರ ಬೆಳಗ್ಗೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಹೊರತೆಗೆದಿದ್ದಾರೆ.  ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿದ್ದು, ವಿಧಿ ವಿಜ್ಞಾನ ಪ್ರಯೋಗಲಾಯದ ತಜ್ಞರು ಹಾಗೂ ಹಿಮ್ಸ್ ನ ವೈದ್ಯರ ತಂಡ ಶವದ ಮಾದರಿಯನ್ನು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗೆ ಕಳುಹಿಸಿದ್ದಾರೆ. ಆರೋಪಿಯನ್ನು ಘಟನಾ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಕರೆ ತಂದು ಮಹಜರು ನಡೆಸಿದ್ದಾರೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.