ಆಲೂಗಡ್ಡೆ ಮಾರಾಟ ಚುರುಕು, ಬಿತ್ತನೆಯೂ ಆರಂಭ


Team Udayavani, May 31, 2019, 3:00 AM IST

aloogade

ಹಾಸನ: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿರುವುದರಿಂದ ಆಲೂಗಡ್ಡೆ ಬಿತ್ತನೆ ಆರಂಭವಾಗಿದ್ದು, ಹಾಸನದ ಆಲೂಗಡ್ಡೆ ಮಾರುಕಟ್ಟೆಯಲ್ಲೂ ಬಿತ್ತನೆ ಆಲೂಗಡ್ಡೆ ಮಾರಾಟದ ವಹಿವಾಟು ಚುಕುಕಾಗಿದೆ.

ಗುರುವಾರ ಮಾರುಕಟ್ಟೆಯಲ್ಲಿ 100 ಲಾರಿ ಲೋಡ್‌ಗೂ ಹೆಚ್ಚು ಆಲೂಗಡ್ಡೆ ಮಾರಾಟವಾಗಿದೆ. ಆಲೂಗಡ್ಡೆ ಬೇಡಿಕೆ ಬಂದಿದ್ದರಿಂದ ದರವೂ ತುಸು ಏರಿದ್ದು, ಗುರುವಾರ ಕ್ವಿಂಟಲ್‌ ಬಿತ್ತನೆ ಆಲೂಗಡ್ಡೆ 1,300 ರಿಂದ 1,400 ರೂ. ದರದಲ್ಲಿ ಮಾರಾಟವಾಯಿತು.

ಚಿಕ್ಕಮಗಳೂರು ರೈತರಿಂದ ಖರೀದಿ: ಚಿಕ್ಕಮಗಳೂರು ತಾಲೂಕಿನ ರೈತರು ಗುರುವಾರ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆ ಆಲೂಗಡ್ಡೆಯನ್ನು ಖರೀದಿಸಿದರು. ಬೇಡಿಕೆ ಹೆಚ್ಚುತ್ತಿರುವುದರಿಂದ ವರ್ತಕರು ಆಲೂಗಡ್ಡೆಯನ್ನು ಶೀತಲಗೃಹಗಳಿಂದ ಎಪಿಎಂಸಿ ಪ್ರಾಂಗಣಕ್ಕೆ ತರಿಸಿಕೊಳ್ಳುತ್ತಿದ್ದಾರೆ.

ಹಾಸನದ ಎಪಿಎಂಸಿ ಪ್ರಾಂಗಣದಲ್ಲಿ ಮೇ16 ರಿಂದ ಬಿತ್ತನೆ ಲೂಗಡ್ಡೆ ಮಾರಾಟ ಆರಂಭವಾಗಿದೆ. ಆದರೆ ಮಳೆ ಇಲ್ಲದಿದ್ದರಿಂದ ಎರಡು ವಾರಗಳಿಂದಲೂ ರೈತರು ಆಲೂಗಡ್ಡೆ ಖರೀದಿಗೆ ಮುಂದಾಗಿರಲಿಲ್ಲ. ಆದರೆ ನಾಲ್ಕೈದು ದಿನಗಳಿಂದ ಜಿಲ್ಲೆಯಲ್ಲಿ ಮಳೆಯಾಗುತ್ತಿದೆ. ಆದರೆ ಭೂಮಿ ತಂಪಾಗುವಷ್ಟು ಹಾಗೂ ಆಲೂಗಡ್ಡೆ ಬಿತ್ತನೆ ಮಾಡುವಷ್ಟು ಹಿತಕರವಾದ ಮಳೆ ಆಗಿಲ್ಲ.

ಹಾಗಾಗಿ ಕೆಲ ರೈತರು ಬಿತ್ತನೆ ಆಲೂಗಡ್ಡೆ ಖರೀದಿಸಿದರೂ ಬಿತ್ತನೆಗೆ ಮುಂದಾಗಿಲ್ಲ. ಆದರೆ ಪಂಪ್‌ಸೆಟ್‌ಗಳನ್ನು ಹೊಂದಿರುವ ರೈತರು ಆಲೂಗಡ್ಡೆ ಬಿತ್ತನೆ ಆರಂಭಿಸಿದ್ದು, ಆ ರೈತರನ್ನು ಕಂಡು ಮಳೆ ಆಶ್ರಯದ ಹಾಸನ ತಾಲೂಕಿನ ಕೆಲ ರೈತರೂ ಭೂಮಿ ತಂಪಾಗದಿದ್ದರೂ ಆಲೂಗಡ್ಡೆ ಬಿತ್ತನೆ ಆರಂಭಿಸಿದ್ದಾರೆ.

ಮಾಹಿತಿ ಮಳಿಗೆಗೆ ರೈತರ ಭೇಟಿ: ಆಲೂಗಡ್ಡೆ ಖರೀದಿ ಚುರುಕಾಗುತ್ತಿದ್ದಂತೆ ತೋಟಗಾರಿಕೆ ಇಲಾಖೆ ಎಪಿಎಂಸಿ ಪ್ರಾಂಗಣದಲ್ಲಿ ತೆರೆದಿರುವ ಆಲೂಗಡ್ಡೆ ತಾಂತ್ರಿಕ ಮಾಹಿತಿ ಮಳಿಗೆಗಳಿಗೂ ರೈತರು ಭೇಟಿ ನೀಡುತ್ತಿದ್ದು, ಆಲೂಗಡ್ಡೆಗೆ ಸಿಗುವ ಸಬ್ಸಿಡಿ, ಬೀಜೋಪಚಾರದ ಹಾಗೂ ಸಸ್ಯಸಂರಕ್ಷಣಾ ಔಷಧಿಗಳನ್ನೂ ರಿಯಾಯ್ತಿ ದರದಲ್ಲಿ ಖರೀದಿಸಲು ಮುಂದಾಗುತ್ತಿದ್ದಾರೆ.

ಗುರುವಾರ ವ್ಯಾಪಕ ಮಳೆ: ಜಿಲ್ಲೆಯ ವಿವಿಧೆಡೆ ಗುರುವಾರ ವ್ಯಾಪಕ ಮಳೆಯಾಗಿದೆ. ಹಾಸನ ನಗರದಲ್ಲಿಯೂ ಮಧ್ಯಾಹ್ನ 3.45 ರಿಂದ 4.10 ಗಂಟೆ ವರೆಗೂ ಗುಡುಗು – ಸಿಡಿಲು ಸಹಿತ ಮಳೆ ಸುರಿಯಿತು. ಹಾಸನ ತಾಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗಿದೆೆ. ಮಳೆಯಿಂದ ವಾತಾವರಣ ತಂಪಾಗಿದ್ದು, ಆಲೂಗಡ್ಡೆ ಬಿತ್ತನೆಗೆ ಪೂರಕವಾಗಿದೆ. ಹಾಗಾಗಿ ರೈತರು ಆಲೂಗಡ್ಡೆ ಖರೀದಿಗೆ ಮುಂದಾಗುವ ನಿರೀಕ್ಷೆಯಿದ್ದು ಶುಕ್ರವಾರದಿಂದ ಆಲೂಗಡ್ಡೆ ಮಾರುಕಟ್ಟೆಯಲ್ಲಿ ವಹಿವಾಟು ಹೆಚ್ಚುವುದೆಂದು ವರ್ತಕರು ನಿರೀಕ್ಷಿಸಿದ್ದಾರೆ.

1.25 ಲಕ್ಷ ಕ್ವಿಂಟಲ್‌ ಆಲೂಗಡ್ಡೆ ಮಾರಾಟ: ಹಾಸನ ಎಪಿಎಂಸಿ ಮಾರುಕಟ್ಟೆಯಲ್ಲಿ ಮೇ.16 ರಿಂದ ಬಿತ್ತನೆ ಆಲೂಗಡ್ಡೆ ಮಾರಾಟ ಆರಂಭವಾದಂದಿನಿಂದ ಈ ವರೆಗೆ 1.25 ಲಕ್ಷ ಕ್ವಿಂಟಲ್‌ ಆಲೂಗಡ್ಡೆ ಮಾರಾಟವಾಗಿದ್ದು, ಅ ಪೈಕಿ 86 ಸಾವಿರ ಕ್ವಿಂಟಲ್‌ ಆಲೂಗಡ್ಡೆಯನ್ನು ಹಾಸನ ಜಿಲ್ಲೆಯ ರೈತರು ಖರೀದಿಸಿದ್ದಾರೆ ಎಂದು ಹಾಸನ ಎಪಿಎಂಸಿ ಮಾಹಿತಿ ನೀಡಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬಿತ್ತನೆ ಆಲೂಗಡ್ಡೆ ಮಾರಾಟ ಕುಸಿದಿದೆ. ಆದರೆ ಮಳೆ ಪ್ರಮಾಣ ಸುಧಾರಿಸಿದರೆ ಹಾಗೂ ಜೂ.15 ರ ವರೆಗೂ ಆಲೂಗಡ್ಡೆ ಬಿತ್ತನೆಗೆ ಅವಕಾಶವಿರುವುದರಿಂದ ಕಾದು ನೋಡಬೇಕಾಗಿದೆ ಎಂದೂ ಎಪಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ.

* ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.