![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 12, 2024, 5:56 PM IST
ಚನ್ನರಾಯಪಟ್ಟಣ: ಬರದಿಂದ ಬೆಂದು ಹೋಗಿರುವ ರೈತರು ಹಾಗೂ ತಾಲೂಕಿನ ಜನತೆ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಸರ್ಕಾರ ಛಾಪಾ ಕಾಗದ ದರವನ್ನು ಐದು ಪಟ್ಟು ಹೆಚ್ಚಳ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಅದರಲ್ಲೂ ದರ ಕುಸಿತದಿಂದ ಕೊಬ್ಬರಿ ಬೆಳೆಗಾರರು ಕಂಗಾಲಾಗಿದ್ದಾರೆ.
ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ನೀಡಿದ ಪಂಚ ಗ್ಯಾರಂಟಿಗಳನ್ನು ಈಡೇರಿಸಲು ವಿತ್ತೀಯ ಕೊರತೆ ಸರಿದೂಗಿಸಲು ರಾಜ್ಯ ಸರ್ಕಾರ ಹೆಣಗಾಡುತ್ತಿದೆ. ಆದಾಯ ಹೆಚ್ಚಿಸಿಕೊಳ್ಳಲು ಈಗಾಗಲೇ ಮುಂದ್ರಾಂಕ ಹಾಗೂ ನೋಂದಣಿ ಶುಲ್ಕ ಹೆಚ್ಚಿಸಿದೆ. ಇದೀಗ ಬಾಂಡ್ ಪೇಪರ್ (ಛಾಪಾ ಕಾಗದ) ಮೇಲೆ ರಾಜ್ಯ ಸರ್ಕಾರದ ಕಣ್ಣು ಬಿದ್ದಿದ್ದು, ಎಲ್ಲ ವಿಧದ ಗ್ರಾಹಕರು ಹಾಗೂ ಸಾರ್ವಜನಿಕರಿಗೆ ಭಾರೀ ಹೊರೆಯಾಗಿದೆ. ಮೊದಲೇ ಕೊಬ್ಬರಿ ಬೆಲೆ ನೆಲ ಕಚ್ಚಿದೆ, ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿ ಮಾಡುವಲ್ಲಿ ಸಾಕಷ್ಟು ಲೋಪಗಳಾಗಿವೆ. ಇಂತಹ ವೇಳೆ ಕೃಷಿಕರು ಬದುಕುವುದೇ ಸವಾಲಾಗಿದೆ. ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು ಜೀವನ ವೆಚ್ಚ ದುಬಾರಿಯಾಗಿದೆ. ಈಗ ಬಾಂಡ್ಗೆ ಹೆಚ್ಚಿನ ತೆರಬೇಕಿದೆ.
ಸಮಸ್ಯೆ ಏನು?: ಜಿಲ್ಲೆಯಲ್ಲಿ ಹೆಚ್ಚು ಜಮೀನಿನ ವ್ಯವಹಾರ, ಬಾಡಿಗೆ, ಭೋಗ್ಯ ಸೇರಿದಂತೆ ಸಾಕಷ್ಟು ವ್ಯವಹಾರಗಳು ಛಾಪಾ ಕಾಗದದಿಂದ ನಡೆಯುತ್ತಿದೆ. 20 ರೂ. ಛಾಪಾ ಕಾಗದ ಪಡೆದು 100 ರೂ. ವೆಚ್ಚ ಮಾಡಿ ತಮ್ಮ ವ್ಯವಹಾರ ಮಾಡಿಕೊಳ್ಳುತ್ತಿದ್ದರು. ಈಗ ಛಾಪಾ ಕಾಗದಕ್ಕೆ 100 ರೂ. ಕೊಡಬೇಕು. ಇದನ್ನು ನೋಟರಿ ಮಾಡಿಸುವ ಹೊತ್ತಿಗೆ ಕನಿಷ್ಠ 300 ರೂ. ವೆಚ್ಚವಾಗಲಿದೆ.
5 ಪಟ್ಟು ದರ ಹೆಚ್ಚಳ: ಸಾಮಾನ್ಯವಾಗಿ ಚಿಕ್ಕಪುಟ್ಟ ವ್ಯವಹಾರಗಳಿಗೆ ಹಾಗೂ ಸರ್ಕಾರಿ ಯೋಜನೆಗಳ ಪಡೆಯಲು 20 ರೂ. ಸ್ಟಾಂಪ್ ಪೇಪರ್ ಬಳಸಲಾಗುತ್ತಿತ್ತು. ಇದೀಗ ಛಾಪಾ ಕಾಗದ ದರ ಕನಿಷ್ಠ 100 ರೂ. ಆಗಿದೆ. ಜತೆಗೆ ಶೇ.0.1 ರಷ್ಟಿದ್ದ ಶುಲ್ಕವನ್ನು ಶೇ.0.5ರಷ್ಟು ಹೆಚ್ಚಿಸಿದೆ. ವಿವಿಧ ಪ್ರಾಧಿಕಾರದಿಂದ ಕೇಳಲ್ಪಡುವ ಮುಚ್ಚಳಿಕೆ ಪತ್ರ, ಜನನ-ಮರಣ ಪ್ರಮಾಣ ಪತ್ರ, ಮೂಲ ದಾಖಲೆ ಪಡೆಯಲು, ಕೋರ್ಟ್ ಅಫಿಡವಿಟ್ ಸಲ್ಲಿಸಲು ಇನ್ನು ಮುಂದೆ 100 ರೂ. ಸ್ಟಾಂಪ್ ಕಡ್ಡಾಯವಾಗಿದೆ.
ಬಹುತೇಕ ಕೆಲಸಕ್ಕೂ 100 ರೂ. ಬಾಂಡ್ :
ಮುಚ್ಚಳಿಕೆ ಪತ್ರ, ಪ್ರಮಾಣ ಪತ್ರ, ಮಾಸಾಶನ, ಶಿಷ್ಯವೇತನ, ವಸತಿ ಶಾಲೆಗಳ ಪ್ರವೇಶ, ಕಾರ್ಮಿಕ ಇಲಾಖೆಯಲ್ಲಿ ಕಟ್ಟಡ ಕಾರ್ಮಿಕರು ಪಡೆಯುವ ಸವಲತ್ತುಗಳು, ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರು ಪಡೆಯುವ ಸಾಲ, ಪಡೆದ ಸಾಲ ನವೀಕರಣ ಹಾಗೂ ಬೀದಿ ಬದಿ ವ್ಯಾಪಾರಸ್ಥರು ಸಣ್ಣ ಪುಟ್ಟ ಬ್ಯಾಂಕ್ ಲೋನ್ ಪಡೆಯಲು, ಮನೆಯ ಬಾಡಿಗೆ, ಭೋಗ್ಯ ಸೇರಿದಂತೆ ಹಲವು ಕೆಲಸಗಳಿಗೆ ಈ ಮೊದಲು ಛಾಪ ಕಾಗದಕ್ಕೆ 20 ರೂ..ನಿಂದ 50 ರೂ. ಪಾವತಿಸಬೇಕಿತ್ತು. ಇದೀಗ ಅವುಗಳ ಮೂಲ ದರ 100 ರೂ., ನಿಂದ 500 ಕ್ಕೇರಿದ್ದು, ಚಿಕ್ಕಪುಟ್ಟ ಕೆಲಸಕ್ಕೂ 100 ರೂ. ಮುಖಬೆಲೆಯ ಬಾಂಡ್ ಖರೀದಿಸಬೇಕಾದ ಅನಿವಾರ್ಯತೆ ಎದುರಾಗಿದೆ.
ಛಾಪಾ ಕಾಗದ ದರ ಐದು ಪಟ್ಟು ಹೆಚ್ಚಳ ಮಾಡಿರುವುದು ಸಾರ್ವಜನಿಕರಿಗೆ ಭಾರೀ ಹೊರೆಯಾಗಿದೆ. ರಾಜ್ಯ ಸರ್ಕಾರ ಮುದ್ರಾಂಕ, ನೋಂದಣಿ ಶುಲ್ಕ ಏರಿಕೆ ಮರುಪರಿಶೀಲನೆ ನಡೆಸಿ ಜನಸಾಮಾನ್ಯರಿಗೆ ಕಡಿಮೆ ದರ ನಿಗದಿ ಮಾಡಬೇಕು. -ಕೇಶವಮೂರ್ತಿ, ವೆಂಡರ್
ಕೃಷಿಕರ ಸುಲಭ ವ್ಯವಹಾರಕ್ಕೆ 20 ರೂ. ಸ್ಟಾಂಪ್ ಅವಶ್ಯವಿದ್ದವು. ಇದೀಗ ಕನಿಷ್ಠ 100 ರೂ.ಗೆ ಏರಿಕೆ ಮಾಡಿರುವುದು ಖಂಡನೀಯ, ರೈತರಿಗಾದರೂ ಪರ್ಯಾಯ ವ್ಯವಸ್ಥೆ ಮೂಲಕ ಈ ಮೊದಲಿನಂತೆ 20 ರೂ.ಗೆ ಸ್ಟಾಂಪ್ ದೊರಕುವ ವ್ಯವಸ್ಥೆ ಮಾಡಬೇಕು. ನಗರದಲ್ಲಿ ಲಕ್ಷಾಂತರ ಹಣ ಕೊಟ್ಟು ನಿವೇಶನ ಮನೆ ಭೋಗ್ಯ ಮಾಡಿಸಿಕೊಳ್ಳುವವರಿಗೆ ತೊಂದರೆ ಇಲ್ಲ. ಕೃಷಿಕರು ಸಣ್ಣ ಪುಟ್ಟ ವ್ಯವಹಾರಕ್ಕೆ ತೊಂದರೆ ಆಗುತ್ತಿದೆ. -ಕಾಂತರಾಜು, ಕೃಷಿಕ, ಕುರುವಂಕ ಗ್ರಾಮ
-ಶಾಮಸುಂದರ್ ಕೆ. ಅಣ್ಣೇನಹಳ್ಳಿ
R. Ashok: ನವೆಂಬರ್ ಬಳಿಕ ಕಾಂಗ್ರೆಸ್ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.