ಅನೈಸರ್ಗಿಕ ಲೈಂಗಿಕ ಕ್ರಿಯೆ: ಸೂರಜ್‌ಗೂ ಬಂಧನ ಭೀತಿ

ಅರಕಲಗೂಡು ಸಂತ್ರಸ್ತನಿಂದ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲು

Team Udayavani, Jun 23, 2024, 7:05 AM IST

ಅನೈಸರ್ಗಿಕ ಲೈಂಗಿಕ ಕ್ರಿಯೆ: ಸೂರಜ್‌ಗೂ ಬಂಧನ ಭೀತಿ

ಹಾಸನ: ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರ ಹಿರಿಯ ಪುತ್ರ, ವಿಧಾನ ಪರಿಷತ್‌ ಸದಸ್ಯ ಡಾ| ಸೂರಜ್‌ ರೇವಣ್ಣ ವಿರುದ್ಧದ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದ್ದು, ಅವರಿಗೆ ಬಂಧನ ಭೀತಿ ಎದುರಾಗಿದೆ.

ದೂರಿನ ಬೆನ್ನಲ್ಲೇ ಸೂರಜ್‌ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ಶನಿವಾರ ರಾತ್ರಿ ಹಾಸನದ ಸೆನ್‌ ಠಾಣೆಗೆ ಕರೆ ದೊಯ್ದು ವಿಚಾರಣೆ ಆರಂಭಿಸಿದ್ದಾರೆ.

ಏನಿದು ಪ್ರಕರಣ?
ಸೂರಜ್‌ ರೇವಣ್ಣ ಅವರು ಚನ್ನರಾಯಪಟ್ಟಣ ತಾಲೂಕು ಗನ್ನಿಕಡ ಬಳಿ ಇರುವ ತೋಟದ ಮನೆಗೆ ಜೂ. 16ರಂದು ನನ್ನನ್ನು ಕರೆಸಿಕೊಂಡು ನನ್ನ ಮೇಲೆ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ್ದಾರೆ. ಸೂರಜ್‌ ಮತ್ತು ಹನುಮನಹಳ್ಳಿಯ ಶಿವ ಕುಮಾರ್‌ ಎಂಬವರಿಂದ ನನಗೆ ಹಾಗೂ ನನ್ನ ಕುಟುಂಬಕ್ಕೆ ಜೀವ ಬೆದರಿಕೆಯಿದೆ. ಅವರಿಬ್ಬರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೊಳೆನರಸೀಪುರ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಅರಕಲಗೂಡು ತಾಲೂಕಿನ ಸಂತ್ರಸ್ತ ಯುವಕ ಮನವಿ ಮಾಡಿದ್ದಾನೆ. ಹೊಳೆ ನರಸೀಪುರ ಗ್ರಾಮಾಂತರ ಪೊಲೀಸರು ಐಪಿಸಿ ಕಲಂ 377, 342, 506, 34ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಆರಂಭಿಸಿದ್ದಾರೆ.

ಸಂತ್ರಸ್ತ ಯುವಕ 14 ಪುಟಗಳ ದೂರು ಬರೆದು, ಬೆಂಗಳೂರಿನಲ್ಲಿ ಡಿಜಿಪಿ ಕಚೇರಿಗೂ ನೀಡಿದ್ದ. ಆ ದೂರಿನ ಪ್ರತಿಯು ಹಾಸನ ಎಸ್‌ಪಿಗೂ ಇಮೇಲ್‌ ಮೂಲಕ ತಲುಪಿತ್ತು. ಜತೆಗೆ ಸಿಎಂ, ಡಿಸಿಎಂ, ಗೃಹ ಸಚಿವರಿಗೂ ದೂರಿನ ಪ್ರತಿಯನ್ನು ರವಾನಿಸಿದ್ದ ಎನ್ನಲಾಗಿದೆ.

ಹಾಸನ ಎಸ್‌ಪಿ ಕಚೇರಿಗೆ ಬಂದ ದೂರನ್ನು ಹೊಳೆನರಸೀಪುರ ಗ್ರಾಮಾಂ ತರ ಠಾಣೆಗೆ ವರ್ಗಾಯಿಸಲಾಗಿದ್ದು, ಪ್ರಕರಣ ದಾಖಲಿಸಿ ದೂರಿನ ಸತ್ಯಾಸತ್ಯ ಅರಿಯಲು ದೂರುದಾರನನ್ನು ಸಂಪ ರ್ಕಿಸಿ ಮಾಹಿತಿ ಪಡೆಯುವಂತೆ ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ದೂರು ದಾರನನ್ನು ಸಂಪರ್ಕಿಸಿದ ಹೊಳೆನರಸೀ ಪುರ ಪೊಲೀಸರು ಠಾಣೆಗೆ ಬಂದು ದೂರು ದಾಖಲಿಸಬೇಕು ಎಂದು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಂತ್ರಸ್ತ ಯುವಕ ಬೆಂಗಳೂರಿನಿಂದ ಬಂದು ದೂರು ದಾಖಲಿಸಿದ್ದಾನೆ.

ಸೂರಜ್‌ ರೇವಣ್ಣ ವಿಚಾರಣೆ
ಸಂತ್ರಸ್ತ ಯುವಕ ಹಣಕ್ಕಾಗಿ ಬ್ಲ್ಯಾಕ್‌ವೆುàಲ್‌ ಮಾಡಿದ ಸಂಬಂಧದ ಆಡಿಯೋ ಗಳನ್ನು ಈಗಾಗಲೇ ವಶಕ್ಕೆ ಪಡೆದಿರುವ ಪೊಲೀಸರು ಇನ್ನಷ್ಟು ಆಡಿಯೋ ಸೇರಿ ಹಲವು ದಾಖಲೆಗಳನ್ನು ಪಡೆಯುವ ಪ್ರಯತ್ನ ಮುಂದುವರಿಸಿದ್ದಾರೆ.

ಸಂತ್ರಸ್ತನ ವಿರುದ್ಧವೇ ಎಫ್ಐಆರ್‌
ಸೂರಜ್‌ ವಿರುದ್ಧ ಗಂಭೀರ ಆರೋಪ ಮಾಡಿರುವ ಸಂತ್ರಸ್ತನ ವಿರುದ್ಧವೇ ಹೊಳೆನರಸೀಪುರ ನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 384, 506ರ ಅಡಿಯಲ್ಲಿ ಶುಕ್ರವಾರ ಎಫ್ಐಆರ್‌ ದಾಖಲಾಗಿದೆ. ಯುವಕ ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ ಆರೋಪ ಮತ್ತು ಸೂರಜ್‌ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ ಬಗ್ಗೆ ಎಂಎಲ್‌ಸಿ ಅವರ ಆಪ್ತ ಶಿವಕುಮಾರ್‌ ಎಂಬವರು ನೀಡಿರುವ ದೂರು ಆಧರಿಸಿ ಎಫ್ಐಆರ್‌ ದಾಖಲಾಗಿದೆ. 5 ಕೋಟಿ ರೂ. ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್‌ ದಾಖಲಿಸುತ್ತೇನೆಂದು ಯುವಕ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.

ಸೂರಜ್‌ ದೌರ್ಜನ್ಯ ಎಸಗಿದ್ದಾರೆ ಎಂದು ಹೇಳುತ್ತಿರುವ ಯುವಕ ಆರಂಭದಲ್ಲಿ 5 ಕೋ.ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ. ಅನಂತರ 3, ಬಳಿಕ 2 ಕೋಟಿ ರೂ.ಗೆ ಬಂದ. ಆದರೆ ಸೂರಜ್‌ ನಿರಾಕರಿಸಿದಾಗ ಆತ ದೂರು ನೀಡಿದ್ದಾನೆ ಎಂದು ಸೂರಜ್‌ ಬ್ರಿಗೇಡ್‌ ಖಜಾಂಚಿ ಶಿವಕುಮಾರ್‌ ದೂರಿನಲ್ಲಿ ತಿಳಿಸಿದ್ದಾರೆ.

ಯಾವ ಸೆಕ್ಷನ್‌? ಏನು ಶಿಕ್ಷೆ ?
-377-ಅಸಹಜ ಲೈಂಗಿಕ ಕ್ರಿಯೆ
(ಜೀವಾವಧಿ ಶಿಕ್ಷೆ ಅಥವಾ 10 ವರ್ಷ ಜೈಲು ಹಾಗೂ ದಂಡ)
-342-ವ್ಯಕ್ತಿಯ ಅಕ್ರಮ ಬಂಧನ
(1 ವರ್ಷದವರೆಗಿನ ಸಾಧಾರಣ ಜೈಲು ಶಿಕ್ಷೆ ಮತ್ತು ದಂಡ)
-506-ಬೆದರಿಕೆ (2 ವರ್ಷದವರೆಗೆ ಜೈಲಿನ ವಾಸ ಮತ್ತು ದಂಡ)
-34- ಪ್ರಕರಣದಲ್ಲಿ ಹಲವರು ಭಾಗಿ

ಆರೋಪವನ್ನು ಖಡಾಖಂಡಿತವಾಗಿ ನಿರಾಕರಿಸುತ್ತೇನೆ. ಈಗಾಗಲೇ ನನ್ನ ಮೇಲೆ ಎಫ್ಐಆರ್‌ ದಾಖಲಾಗಿರುವುದರಿಂದ ಈಗ ಹೆಚ್ಚಿಗೆ ಏನನ್ನೂ ಹೇಳಲಾರೆ. ಈ ನೆಲದ ಕಾನೂನಿನ ಮೇಲೆ ನನಗೆ ನಂಬಿಕೆ ಇದೆ. ದೂರಿನ ಕುರಿತು ತನಿಖೆ ನಡೆಯಲಿ. ನನ್ನ ಮೇಲಿನ ರಾಜಕೀಯ ಷಡ್ಯಂತ್ರಕ್ಕೆ ಕಾಲವೇ ಉತ್ತರ ನೀಡಲಿದೆ. ಈ ಎಲ್ಲ ಕುತಂತ್ರಗಳಿಗೆ ನಾನು ಜಗ್ಗುವುದಿಲ್ಲ.
– ಸೂರಜ್‌ ರೇವಣ್ಣ, ವಿಧಾನ ಪರಿಷತ್‌ ಸದಸ್ಯ

ಸೂರಜ್‌ ರೇವಣ್ಣ ವಿರುದ್ಧ ದಾಖಲಾದ ದೂರಿನ ಬಗ್ಗೆ ನನಗೇನೂ ಗೊತ್ತಿಲ್ಲ, ಅದರ ಬಗ್ಗೆ ಮಾಹಿತಿಯಿಲ್ಲ. ಅವರ ಕುಟುಂಬದಲ್ಲಿ ದೊಡ್ಡ ದೊಡ್ಡವರಿದ್ದಾರೆ. ಅವರು ಉತ್ತರ ಕೊಡುತ್ತಾರೆ.
-ಡಿ.ಕೆ. ಶಿವಕುಮಾರ್‌, ಉಪಮುಖ್ಯಮಂತ್ರಿ

ಈ ವಿಷಯವನ್ನೆಲ್ಲ ನನ್ನ ಹತ್ತಿರ ಏಕೆ ಚರ್ಚೆ ಮಾಡುತ್ತೀರಿ? ಅದರ ಆವಶ್ಯಕತೆ ಏನಿದೆ? ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳಿದ್ದರೆ ಚರ್ಚೆ ಮಾಡಿ. ಕಾನೂನಿದೆ, ಕಾನೂನು ನೋಡಿಕೊಳ್ಳುತ್ತದೆ. ಈ ರೀತಿಯ ದೂರುಗಳು ಏಕೆ ಬರುತ್ತವೆ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ. ತಲೆ ಕೆಡಿಸಿಕೊಳ್ಳಬೇಡಿ.
-ಎಚ್‌.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ

 

ಟಾಪ್ ನ್ಯೂಸ್

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

Suraj Revanna Case ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದ ವ್ಯಕ್ತಿ ನಾಪತ್ತೆ!

Suraj Revanna Case ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದ ವ್ಯಕ್ತಿ ನಾಪತ್ತೆ!

Police detained Revanna’s son suraj revanna

Hassan; ಅನೈಸರ್ಗಿಕ ಲೈಂಗಿಕ ಕ್ರಿಯೆ: ರೇವಣ್ಣ ಪುತ್ರ ಸೂರಜ್‌ ಪೊಲೀಸ್‌ ಬಲೆಗೆ

ಆರೋಪ ರಾಜಕೀಯ ಷಡ್ಯಂತ್ರ: ಸೂರಜ್‌ ರೇವಣ್ಣ

Suraj Revanna ಆರೋಪ ರಾಜಕೀಯ ಷಡ್ಯಂತ್ರ

Pickup vehicle collides with scooter at shantigrama of Hassan

Hassan; ಸ್ಕೂಟರ್ ಗೆ ಬೊಲೆರೋ ಪಿಕಪ್ ಡಿಕ್ಕಿ: ಸ್ಥಳದಲ್ಲೇ ಮೂವರ ಸಾವು

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.