ಹಸುವಿನ ಹೊಟ್ಟೆ ಸೇರಿದ್ದ ಕಬ್ಬಿಣದ ತಂತಿ ಹೊರ ತೆಗೆದ ವೈದ್ಯ


Team Udayavani, Oct 13, 2019, 3:00 AM IST

hasuvina

ಚನ್ನರಾಯಪಟ್ಟಣ/ಬಾಗೂರು: ಮೇವಿನೊಂದಿಗೆ ಹೊಟ್ಟೆಯ ಒಳಕ್ಕೆ ಸೇರಿದ್ದ ಕಬ್ಬಿಣದ ತಂತಿಯನ್ನು ಶಸ್ತ್ರಚಿಕಿತ್ಸೆ ಮಾಡಿ ಹೊರ ತೆಗೆದು ಹಸುವಿನ ಪ್ರಾಣ ಉಳಿಸುವಲ್ಲಿ ಅಣತಿ ಪಶು ಚಿಕಿತ್ಸಾಲಯದ ಪಶುವೈದ್ಯಾಧಿಕಾರಿ ಡಾ.ಎಸ್‌.ಪಿ.ಮಂಜುನಾಥ ಯಶಸ್ವಿಯಾಗಿದ್ದಾರೆ.

ತಾಲೂಕಿನ ಬಾಗೂರು ಹೋಬಳಿೂಂಡನಹಳ್ಳಿ ಗ್ರಾಮದ ನಿವಾಸಿ ನಿಂಗೇಗೌಡ ಅವರಿಗೆ ಸೇರಿದ್ದ ಎರಡು ವರ್ಷದ ಹಸು ಜಮೀನಿನಲ್ಲಿ ಮೇವು ಸೇವಿಸುವಾಗ ಕಬ್ಬಿಣದ ತಂತಿ ರಾಸಿನ ಹೊಟ್ಟೆ ಸೇರಿತ್ತು. ಹೊಟ್ಟೆ ಸೇರಿದ ಕಬ್ಬಿಣದ ತಂತಿಯು ಕರುಳಿನ ಒಳಗೆ ಚುಚ್ಚುತ್ತಿದ್ದ ಪರಿಣಾಮ ಹಸುವು ಮೇವು ಹಾಗೂ ನೀರನ್ನು ಬಿಟ್ಟು ಸಾವು ಬದುಕಿನ ನಡುವೆ ಹೋರಾಡುತ್ತಿತ್ತು.

ಒಂದೂವರೆ ಗಂಟೆ ಶಸ್ತ್ರ ಚಿಕಿತ್ಸೆ: ರಾಸಿಗೆ ಕಾಯಿಲೆ ಬಂದಿದೆ ಎಂದು ತಿಳಿದ ರೈತ ಅಣತಿ ಪಶು ಚಿಕಿತ್ಸಾಲಯಕ್ಕೆ ತೆರಳಿ ತನ್ನ ಹಸುವಿನಲ್ಲಿ ಕಂಡುಬಂದ ಸಮಸ್ಯೆಯ ಬಗ್ಗೆ ವೈದ್ಯರಲ್ಲಿ ತಿಳಿಸಿದಾಗ ಬೀಚಗೊಂಡನಹಳ್ಳಿ ಗ್ರಾಮಕ್ಕೆ ಆಗಮಿಸಿದ ಪಶುವೈದ್ಯಾಧಿಕಾರಿ ಹಸುವಿನ ಪರೀಕ್ಷೆ ನಡೆಸಿದರು. ಈ ವೇಳೆ ಹಸುವಿನ ಹೊಟ್ಟೆಯಲ್ಲಿ ಯಾವುದೋ ವಸ್ತು ಸೇರಿದೆ ಎಂದು ರೈತನಿಗೆ ತಿಳಿಸಿದ ಮರುಕ್ಷಣವೇ ಸುಮಾರು ಒಂದೂವರೆ ಗಂಟೆ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಹಸುವಿನ ಹೊಟ್ಟೆ ಭಾಗದಲ್ಲಿ ಇದ್ದ ತಂತಿಯನ್ನು ಪತ್ತೆ ಹಚ್ಚಿ ಹೊರತೆಗೆಯುವಲ್ಲಿ ಯಶಸ್ವಿಯಾದರು.

ಚೇತರಿಸಿಕೊಂಡ ಹಸು: ಸದ್ಯ ಹಸುವು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಮೇವು ಹಾಗೂ ನೀರು ಸೇವಿಸುವ ಮೂಲಕ ಎಂದಿನಂತೆ ಆರೋಗ್ಯವಾಗಿದೆ.

ಚಮಚ ಹೊರತೆಗೆದಿದ್ದ ವೈದ್ಯರು: ಕಳೆದ 9 ತಿಂಗಳ ಹಿಂದೆ ಅರಸೀಕೆರೆ ತಾಲೂಕು ಕೆಂಕೆರೆ ಗ್ರಾಮದ ನಿವಾಸಿ ಕುಮಾರ್‌ ಎಂಬುವರ ಎಮ್ಮೆ ಕರುವೊಂದು ಕಲಗಚ್ಚು(ಕೂನಿ) ಕುಡಿಯುವ ವೇಳೆ ಚಮಚವೊಂದು ಅದರ ಹೊಟ್ಟೆ ಸೇರಿದ್ದು ಆ ವೇಳೆಯಲ್ಲಿಯೂ ಇದೇ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿ ಚಮಚ ಹೊರ ತೆಗೆದಿದ್ದರು.

ಅಲ್ಲದೇ ತಾಲೂಕಿನ ಬೀಚಗೊಂಡನಹಳ್ಳಿ ಗ್ರಾಮದ ಸ್ವಾಮಿ ಎಂಬುವರ ಹಸುವಿನ ಹೊಟ್ಟೆ ಸೇರಿದ್ದ ತಂತಿಯೊಂದನ್ನು 2 ತಿಂಗಳ ಹಿಂದೆಯಷ್ಟೇ ಶಸ್ತ್ರಚಿಕಿತ್ಸೆ ಮಾಡಿ ಹಸುವನ್ನು ಬದುಕಿಸಿದ್ದರು. ಮತ್ತೆ ಮೂರನೇ ಬಾರಿಗೆ ಶಸ್ತ್ರ ಚಿಕಿತ್ಸೆಯೊಂದಿಗೆ ತಂತಿ ತೆಗೆಯುವ ಮೂಲಕ ಬೀಚನಗೊಂಡನಹಳ್ಳಿ ಗ್ರಾಮದ ನಿವಾಸಿ ನಿಂಗೇಗೌಡರ ಹಸುವೊಂದನ್ನು ರಕ್ಷಿಸಿದ್ದು, ಸ್ಥಳೀಯರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ರೈತರು ತಮ್ಮ ಜಾನುವಾರುಗಳಿಗೆ ಮೇವು, ಪಶು ಆಹಾರ ಹಾಗೂ ನೀರನ್ನು ನೀಡುವಾಗ ಹೆಚ್ಚು ಗಮನ ಹರಿಸಿ ಪರಿಶೀಲಿಸಿ ಕೊಡುವುದು ಅತ್ಯಗತ್ಯ. ಜಾನುವಾರುಗಳಿಂದ ಆದಾಯ ನಿರೀಕ್ಷೆ ತಪ್ಪಲ್ಲ. ಆದರೆ ಅವುಗಳ ಆರೈಕೆಗೂ ಹೆಚ್ಚು ಆದ್ಯತೆ ನೀಡಬೇಕು.
-ಡಾ.ಮಂಜುನಾಥ, ಪಶುವೈದ್ಯ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

11

Hasan: 100 ರೂ.ಗೆ ಸ್ನೇಹಿನನ್ನೇ ಹತ್ಯೆಗೈದ ಕಿರಾತಕರು

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

ಸರಕಾರದ ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

State Govt ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

A vehicle caught fire at Shiradi Ghat

Shiradi ಘಾಟ್‌ನಲ್ಲಿ ವಾಹನ ಬೆಂಕಿಗೆ ಆಹುತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.