ಆನೆ ಕಾರಿಡಾರ್ ಯೋಜನೆ ಗಗನ ಕುಸುಮ


Team Udayavani, Feb 6, 2019, 7:28 AM IST

aane-kari.jpg

ಹಾಸನ: ಜಿಲ್ಲೆಯ ಮಲೆನಾಡು ಪ್ರದೇಶಗಳಾದ ಸಕಲೇಶಪುರ ಮತ್ತು ಆಲೂರು ತಾಲೂಕಿನಲ್ಲಿ ಕಾಡಾನೆಗಳ ಉಪಟಳ ತಡೆಗೆ ಆನೆ ಕಾರಿಡಾರ್‌ ನಿರ್ಮಿಸಬೇಕೆಂಬುದು ಕಳೆದ ನಾಲ್ಕೈದು ವರ್ಷ ಗಳಿಂದಲೂ ಕೇಳಿ ಬರುತ್ತಿದೆ. ಆದರೆ ಸರ್ಕಾರಕ್ಕೆ ಇದು ವರೆಗೂ ಯೋಜನಾ ಪ್ರಸ್ತಾವನೆಯೇ ಸಲ್ಲಿಕೆಯಾಗಿಲ್ಲ. ಹಾಗಾಗಿ ಆನೆ ಕಾರಿಡಾರ್‌ ಬೇಡಿಕೆ ಅಂಗೈಯಲ್ಲಿನ ಅರಮನೆಯಂತಾಗಿದೆ.

ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ಯಲ್ಲಿ ಬಿಸಿಲೆ ರಕ್ಷಿತಾರಣ್ಯಕ್ಕೆ ಹೊಂದಿಕೊಂಡಂತೆ 15 ಸಾವಿರ ಎಕರೆಯಲ್ಲಿ ಆನೆ ಕಾರಿಡಾರ್‌ ನಿರ್ಮಿಸುವ ಪ್ರಸ್ತಾಪವಿದೆ. ಆನೆ ಕಾರಿಡಾರ್‌ ಪ್ರಸ್ತಾಪಿತ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸುಮಾರು 11 ಸಾವಿರ ಎಕರೆ ಯಿದ್ದರೆ. ರೈತರು ನ್ಯಾಯಯುತ ಪರಿಹಾರ ನೀಡಿದರೆ ತಮ್ಮ ಹಿಡುವಳಿಯ 3,300 ಎಕರೆ ಬಿಟ್ಟುಕೊಡಲು ಮುಂದೆ ಬಂದಿದ್ದಾರೆ. ಆದರೆ ರೈತರ ಭೂಮಿ ಸ್ವಾಧೀನ ಪಡಿಸಿಕೊಳ್ಳುವುದೂ ಸೇರಿದಂತೆ ಆನೆ ಕಾರಿಡಾರ್‌ ಸ್ಥಾಪನೆಯ ಪ್ರಾಮಾಣಿಕ ಪ್ರಯತ್ನ ಆಗುತ್ತಿಲ್ಲ.

273 ಕೋಟಿ ರೂ. ಯೋಜನೆ: 2014 -15ನೇ ಸಾಲಿನಲ್ಲಿ ಆನೆ ಕಾರಿಡಾರ್‌ ಸ್ಥಾಪನೆಗೆ 273 ಕೋಟಿ ರೂ. ಬೇಕಾಗಬಹುದೆಂದು ಅಂದಾಜು ಮಾಡ ಲಾಗಿತ್ತು. ರೈತರಿಂದ ಸ್ವಾಧೀನಪಡಿಸಿಕೊಳ್ಳುವ ಭೂಮಿಗೆ ಪರಿಹಾರ ನಿಗದಿಯ ಸಂಬಂಧ ಒಂದು ಸಭೆ ನಡೆದು ಎಕರೆಗೆ ಗರಿಷ್ಠ 8 ಲಕ್ಷ ರೂ. ನಿಗದಿ ಪಡಿಸುವ ಪ್ರಸ್ತಾಪ ವಾಗಿತ್ತು. ಆದರೆ ಅದಕ್ಕೆ ರೈತರು ಒಪ್ಪಿರಲಿಲ್ಲ. ಅಷ್ಟಕ್ಕೆ ನಿಂತ ಪ್ರಯತ್ನ ಮತ್ತೆ ಆರಂಭವಾಗಿಯೇ ಇಲ್ಲ.

ಕಾಡಾ ನೆಗಳಿಂದ ಬೆಳೆ ಹಾನಿಯಾದಾಗ, ಜೀವ ಹಾನಿಯಾ ದಾಗ ಮಾತ್ರ ಆನೆ ಕಾರಿಡಾರ್‌ ಆರಂಭಕ್ಕೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂಬ ಜನಪ್ರತಿನಿಧಿಗಳ ಮತ್ತು ರಾಜಕಾರಣಿಗಳ ಭರವಸೆ ಬಿಟ್ಟರೆ ಬೇರೇನೂ ಆಗಿಲ್ಲ. ಅರಣ್ಯ ಇಲಾಖೆಯೂ ಒಂದೆರೆಡು ಆನೆಗಳನ್ನು ಹಿಡಿದು ಸಾಗಿಸಿ ಜನರ ಆಕ್ರೋಶವನ್ನು ತಣ್ಣಗೆ ಮಾಡುವುದಕ್ಕಷೇ ಸೀಮಿತವಾಗಿದೆ.

ಭೂ ಪರಿಹಾರದ್ದೇ ಹೊರೆ: ಕಾಡಿನಂಚಿನಲ್ಲಿರುವ ಹೆತ್ತೂರು ಹೋಬಳಿಯ ಗ್ರಾಮಗಳ ಜನರು ಕಾಡಾನೆ ಗಳ ಹಾವಳಿಯಿಂದ ಬೇಸತ್ತು ಪುನರ್ವಸತಿ ಕಲ್ಪಿಸಿದರೆ ತಮ್ಮ ಗ್ರಾಮ ತೊರೆದು ಹೋಗಲು ಸಿದ್ಧರಿದ್ದಾರೆ. ಆದರೆ ಸ್ವಾಧೀನಪಡಿಸಿಕೊಳ್ಳಲಿರುವ 3, 300 ಎಕರೆ ಭೂಮಿಗೆ ನ್ಯಾಯಯುತ ಪರಿಹಾರ ನೀಡಿದರೆ ಸಾಕು ಎಂದು ಹೇಳುತ್ತಾರೆ. ಈ ಹಿಂದೆ ಎಕರೆಗೆ 8 ಲಕ್ಷ ರೂ. ಪರಿಹಾರ ನೀಡುವ ಪ್ರಸ್ತಾಪವಾಗಿತ್ತು. ಆದಕ್ಕೆ ಒಪ್ಪಿರಲಿಲ್ಲ.

ಕಳೆದೆರಡು ವರ್ಷಗಳಿಂದ ಜಾರಿಯಾಗು ತ್ತಿರುವ ಎತ್ತಿನಹೊಳೆ ಯೋಜನೆಗೆ ಸ್ವಾಧೀನಪಡಿಸಿ ಕೊಂಡ ಭೂಮಿಗೆ ಪ್ರತಿ ಎಕರೆಗೆ 30 ಲಕ್ಷ ರೂ. ಪರಿಹಾರ ನೀಡಲಾಗಿದೆ. ಈಗ ಅಷ್ಟು ಪರಿಹಾರವನ್ನು ಆನೆ ಕಾರಿಡಾರ್‌ ನಿರ್ಮಾಣದ ಭೂ ಸ್ವಾಧೀನದ ಭೂಮಿಗೂ ನೀಡಲೇಬೇಕಾಗಿದೆ. ಹಾಗಾಗಿ ಭೂ ಪರಿಹಾರದ ಹೊರೆ ನೋಡಿ ರಾಜ್ಯ ಸರ್ಕಾರ ಕೈ ಚೆಲ್ಲಿದೆ. ಕೇಂದ್ರ ಸರ್ಕಾರ ಕ್ಯಾಂಪ್ಕೊ ನಿಧಿಯಿಂದ ನೆರವು ನೀಡಬೇಕು ಎಂಬ ವರಸೆಯನ್ನು ರಾಜ್ಯ ಸರ್ಕಾರ ಈಗ ಆರಂಭಿಸಿದೆ.

ಈಗೇನು ಮಾಡಬೇಕು?: ಆನೆ ಕಾರಿಡಾರ್‌ ನಿರ್ಮಾಣವಾಗಲೇಬೇಕೆಂಬ ಇಚ್ಛಾಶಕ್ತಿದ್ದರೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿ ಕ್ಯಾಂಪ್ಕೋ ನಿಧಿಯಿಂದ ನೆರವು ಪಡೆಯಲು ಯತ್ನಿಸಬೇಕು. ಏತನ್ಮಧ್ಯೆ ರೈತರ ಭೂ ಸ್ವಾಧೀನ ಪ್ರಕ್ರಿಯೆ ಆರಂಭಕ್ಕೆ ಸಕಲೇಶಪುರ ಉಪ ವಿಭಾಗಾಧಿ ಕಾರಿಯವರಿಗೆ ಜಿಲ್ಲಾಡಳಿತ ತಾಕೀತು ಮಾಡಿ ಭೂ ಸ್ವಾಧೀನದ ನಿಖರ ವೆಚ್ಚ ಎಷ್ಟಾಗುತ್ತದೆ ಎಂಬ ಅಂದಾಜು ಸಿದ್ಧಪಡಿಸಬೇಕು. ಈ ಪ್ರಕ್ರಿಯೆಗಳಾಗದ ಹೊರತು ಆನೆ ಕಾರಿಡಾರ್‌ ನಿರ್ಮಾಣ ಗಗನಕುಸುಮವಾದೀತು ಅಷ್ಟೇ.

ಮರ ಕಡಿಯಲು ಅನುಮತಿ: ಆನೆ ಕಾರಿಡಾರ್‌ ನಿರ್ಮಾಣಕ್ಕೆ ಭೂ ಸ್ವಾಧೀನವಾಗಲಿರುವ ಪ್ರದೇಶ ದಲ್ಲಿಯೇ ಹಿಡುವಳಿ ಪ್ರದೇಶದಲ್ಲಿ ಮರ ಕಡಿದು ಮಾರಾಟ ಮಾಡಲು ರೈತರಿಗೆ ಅನುಮತಿ ನೀಡಲು ಅರಣ್ಯ ಇಲಾಖೆ ಮುಂದಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಆದರೆ ಈ ಸಂಬಂಧ ಸ್ಪಷ್ಟನೆ ನೀಡಿರುವ ಹಾಸನ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಂಬಾಬು ಅವರು, ಆನೆಕಾರಿಡಾರ್‌ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಿರುವ 3,300 ಎಕರೆ ಪ್ರದೇಶ ಹೊರತುಪಡಿಸಿ ಏಲಕ್ಕಿ ತೋಟಗಳಲ್ಲಿನ ಮರ ಕಡಿಯಲು ಅನುಮತಿ ನೀಡಬೇಕೆಂಬ ಮನವಿ ರೈತರಿಂದ ಬಂದಿದೆ.

ಏಲಕ್ಕಿ ಬೆಳೆಗೆ ರೋಗ ಬಾಧೆ ಹೆಚ್ಚುತ್ತಿರುವುದರಿಂದ ಏಲಕ್ಕಿಗೆ ಪರ್ಯಾಯವಾಗಿ ಕಾಫಿ ಬೆಳೆಯುವುದಾಗಿ, ಈಗಿರುವ ಮರಗಳಿಂದ ನೆರಳು ಹೆಚ್ಚಾಗಿದ್ದು ಕಾಫಿ ಬೆಳೆಯಲು ಸಾಧ್ಯವಾಗದು. ಆದ್ದರಿಂದ ಮರ ಕಡಿದು ಮಾರಾಟ ಮಾಡಲು ಅನುಮತಿ ನೀಡಬೇಕೆಂದು ರೈತರ ಬೇಡಿಕೆ ಆಧರಿಸಿ ಹಿರಿಯ ಅಧಿಕಾರಿಗಳಿಗೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಹೇಳುತ್ತಾರೆ.

ಈಗ ವಸತಿ ಶಾಲೆಗಳ ಪ್ರಸ್ತಾಪ: ಆನೆ ಕಾರಿಡಾರ್‌ ನಿರ್ಮಾಣದ ಬಗ್ಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಆಸಕ್ತಿ ಇದ್ದಂತಿಲ್ಲ. ಈ ಬಗ್ಗೆ ಅವರು ಹೆಚ್ಚು ಪ್ರಸ್ತಾಪ ಮಾಡುತ್ತಲೂ ಇಲ್ಲ. ಕಾಡಾನೆ ಗಳ ಹಾವಳಿಯಿಂದ ಶಾಲೆ, ಕಾಲೇಜುಗಳಿಗೆ ಬಂದು ಹೋಗಲು ಈಗ ಅರಣ್ಯ ಇಲಾಖೆ ವಿದ್ಯಾರ್ಥಿಗಳನ್ನು ಮನೆಯಿಂದ ಆಲೂರು ಮತ್ತು ಸಕಲೇಶಪುರ ಮತ್ತು ಅಯಾ ತಾಲೂಕಿನ ಶಿಕ್ಷಣ ಸಂಸ್ಥೆಗಳಿಗೆ ಕರೆ ತಂದು ಮತ್ತೆ ಮನೆಗೆ ಬಿಡುತ್ತಿದೆ. ಸಕಲೇಶಪುರ ತಾಲೂಕಿನಲ್ಲಿ 2 ವ್ಯಾನ್‌ಗಳನ್ನು ಬಾಡಿಗೆ ಪಡೆದು ಓಡಿಸುತ್ತಿದೆ. ಆಲೂರು ತಾಲೂಕಿನಲ್ಲಿ ಇಲಾಖೆಯ ಒಂದು ವಾಹನವನ್ನು ವಿದ್ಯಾರ್ಥಿಗಳಿಗಾಗಿ ಓಡಿಸುತ್ತಿದೆ.

ಆಲೂರು ಮತ್ತು ಸಕಲೇಶಪುರ ತಾಲೂಕಿನಲ್ಲಿ ಒಂದೊಂದು ವಸತಿ ಶಾಲೆ ಆರಂಭಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ. ರೇವಣ್ಣ ಮುಂದಾಗಿದ್ದಾರೆ. 1ನೇ ತರಗತಿಯಿಂದ ಪಿಯು ವರೆಗೂ ಶಿಕ್ಷಣ ನೀಡುವ ಸಂಸ್ಥೆ ಗಳನ್ನು ಸರ್ಕಾರದಿಂದ ನಿರ್ಮಿಸಲು ಸೂಕ್ತ ಸ್ಥಳ ಗುರ್ತಿಸಲು ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಈ ವಸತಿ ಶಾಲೆಗಳ ನಿರ್ಮಾಣ ಬಜೆಟ್‌ನಲ್ಲಿ ಘೋಷಣೆ ಆಗುವ ಸಾಧ್ಯತೆಯೂ ಇದೆ.

* ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Murder-Represent

Hasana: ಪತ್ನಿಯ ಕೊಂದ ಪಿಸಿಗೆ ಅಕ್ರಮ ಸಂಬಂಧ ?

Hassan ಕಾರು ಪಲ್ಟಿಯಾಗಿ ಮಹಿಳೆ ಸಾವು; ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ

Hassan ಕಾರು ಪಲ್ಟಿಯಾಗಿ ಮಹಿಳೆ ಸಾವು; ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-honnavara

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.