ಬುಡಕಟ್ಟುಗಳ ಅಭಿವೃದ್ಧಿ ಅನುದಾನ ‌ಮಾರ್ಚ್‌ನೊಳಗೆ ಬಳಸಿ


Team Udayavani, Nov 28, 2020, 1:46 PM IST

ಬುಡಕಟ್ಟುಗಳ ಅಭಿವೃದ್ಧಿ ಅನುದಾನ ‌ಮಾರ್ಚ್‌ನೊಳಗೆ ಬಳಸಿ

ಹೊಳೆನರಸೀಪುರ: ವಿವಿಧ ಇಲಾಖೆಗಳಿಂದ ವಿಶೇಷ ಘಟಕ ಯೋಜನೆಯಡಿ ಗಿರಿಜನ ಮತ್ತು ಬುಡಕಟ್ಟುಗಳ ಅಭಿವೃದ್ಧಿಗೆ ಬರುವ ವಿಶೇಷಅನುದಾನವನ್ನು ಮಾರ್ಚ್‌ ಅಂತ್ಯದೊಳಗೆಪೂರ್ಣಗೊಳಿಸಬೇಕೆಂದು ತಾಪಂ ಇಒ ಕೆ. ಯೋಗೇಶ್‌ ನುಡಿದರು.

ತಾಪಂ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಆರಂಭಕ್ಕೆ ಮುನ್ನ ಮಾತನಾಡಿದ ಅವರು, ಗಿರಿಜನ ಮತ್ತು ಬುಡಕಟ್ಟು ಜನಾಂಗಕ್ಕೆ ಸರ್ಕಾರದಿಂದ ಸಿಗುವ ಅನುದಾನವನ್ನು ತಪ್ಪದೇಫ‌ಲಾನುಭವಿಗಳಿಗೆ ತಲುಪಿಸುವಲ್ಲಿ ಎಲ್ಲಾ ಅಧಿಕಾರಿಗಳು ಸಹಕರಿಸಬೇಕೆಂದು ಮನವಿ ಮಾಡಿದರು.

ಇಲ್ಲಿಯವರೆಗೆ ಈ ವಿಶೇಷ ಸಭೆಗೆ ಅವಕಾಶ ಇರಲಿಲ್ಲ, ಸರ್ಕಾರ ಹೊಸ ನೀತಿಯನ್ನು ಜಾರಿಗೆತಂದಿದ್ದು, ಅದರಂತೆ ವಿವಿಧ ಇಲಾಖೆಗಳಲ್ಲಿ ಸಿಗುವಸೌಲಭ್ಯಗಳು ಸದುಪಯೋಗ ಆಗುತ್ತಿದೆಯೇ,ಇಲ್ಲವೇ ಎಂಬ ಬಗ್ಗೆ ಮಾಸಿಕ ಸಭೆಗಳನ್ನು ನಡೆಸುವಂತೆ ಸುತ್ತೋಲೆ ನೀಡಿದೆ. ಅದರಂತೆ ಪ್ರಥಮ ಸಭೆ ಮಾಡಲಾಗುತ್ತಿದೆ ಎಂದು ಹೇಳಿದರು.

ನಾಲ್ಕು ದಿನ ಮುಂಚೆ ಮಾಹಿತಿ ನೀಡಿ: ಇನ್ನು ಮುಂದೆ ಪ್ರತಿ ತಿಂಗಳು ಈ ಪರಾಮರ್ಶೆ ಸಭೆಯನ್ನು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ನಿಗದಿಗೊಳಿಸುತ್ತಾರೆ. ಆ ಸಭೆಗೆ ತಾಲೂಕಿನ ಬಹುತೇಕ ಇಲಾಖೆ ಅಧಿಕಾರಿಗಳುಬರಬೇಕಾಗಿದೆ. ಸಭೆಗೆ ಬರುವ ಮುನ್ನ ತಮ್ಮ ಇಲಾಖೆಯ ಸೌಲಭ್ಯ, ಅನುದಾನ ಬಳಕೆ, ಇತರೆಮಾಹಿತಿಯನ್ನು ಮೂರು ನಾಲ್ಕು ದಿನಗಳ ಮೊದಲುಲಿಖೀತವಾಗಿತಮಗೆತಲುಪಿಸಬೇಕೆಂದುಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳಲ್ಲಿ ಮನವಿ ಮಾಡಿದರು.

ನೋಟಿಸ್‌ ನೀಡಲು ಸೂಚನೆ: ಈ ಸಭೆ ಪ್ರಥಮವಾಗಿರುವುದರಿಂದ ಬೆರಳೆಣಿಕೆಯಷ್ಟು ಅಧಿಕಾರಿಗಳು ಆಗಮಿಸಿದ್ದಾರೆ. ಮುಂದಿನ ಸಭೆಗೆ ಪ್ರತಿಯೊಬ್ಬರು ಕಡ್ಡಾಯವಾಗಿ ಹಾಜರಾಗುವಂತೆ ಕೋರಿದ ಅವರು, ಈ ಸಭೆಯಲ್ಲಿ ಹಾಜರಾಗದಅಧಿಕಾರಿಗಳಿಗೆ ಸಮಾಜ ಕಲ್ಯಾಣಇಲಾಖೆಯಿಂದನೋಟಿಸ್‌ ನೀಡುವಂತೆ ಅಧಿಕಾರಿ ಸಿದ್ಲಿಂಗುಗೆ ಸೂಚನೆ ನೀಡಿದರು.

ಇಒ ಅಧ್ಯಕ್ಷರು: ಈ ವಿಶೇಷ ಸಭೆಗೆ ತಾಪಂ ಇಒ ಅಧ್ಯಕ್ಷರು, ತಹಶೀಲ್ದಾರ್‌ ಕೆ.ಆರ್‌.ಶ್ರೀನಿವಾಸ್‌ ಉಪಾಧ್ಯಕ್ಷರಾಗಿದ್ದು, ಸದಸ್ಯ ಕಾರ್ಯದರ್ಶಿ ಆಗಿಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿದ್ಲಿಂಗುಇರುತ್ತಾರೆ. ಈ ಸಮಿತಿಗೆ ತಾಪಂನಿಂದ ಓರ್ವಸದಸ್ಯ ಚಂದ್ರಶೇಖರ್‌ ನಾಮನಿರ್ದೇಶಿತ ರಾಗಿರಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ದಿನದ ಸಭೆಯಲ್ಲಿ ನೀರಾವರಿ ಇಲಾಖೆ, ಪುರಸಭೆ ಅಧಿಕಾರಿಗಳು ನೀಡಿದ ಮಾಹಿತಿಯಂತೆಅನುದಾನ ಬಳಕೆ ಆಗಿಲ್ಲ, ಅದನ್ನು ಬರುವ ಮಾರ್ಚ್‌ 31 ರೊಳಗೆ ಫಲಾನುಭಗಳಿಗೆ ತಲುಪಿಸುವಲ್ಲಿ ಕಾರ್ಯಪ್ರವರ್ತರಾಗುವಂತೆ ಸೂಚನೆ ನೀಡಿದರು.

ಸಮಯ ಬದಲಾವಣೆ: ಸಭೆಯನ್ನು ಬೆಳಗ್ಗೆ 11 ಗಂಟೆಗೆ ನಿಗದಿಗೊಳಿಸಲಾಗಿತ್ತು. ಆದರೆ, ಇದೇ ಸಭಾಂಗಣದಲ್ಲಿ ತಾಪಂ ಉಪಾಧ್ಯಕ್ಷರ ಆಯ್ಕೆಪ್ರಕ್ರಿಯೆ ಉಪವಿಭಾಗಾಧಿಕಾರಿ ಜಗದೀಶ್‌ ಅವರನೇತೃತ್ವದಲ್ಲಿ ನಡೆಸಬೇಕಾದ ಅನಿವಾರ್ಯ ಇದ್ದರಿಂದ ಬೆಳಗಿನ ಸಭೆಯನ್ನು ಸಂಜೆ ಮೂರೂವರೆಗೆ ಬದಲು ಮಾಡಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಸಿದ್ಲಿಂಗುಕಾರ್ಯಕ್ರಮದಲ್ಲಿ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.