![Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು](https://www.udayavani.com/wp-content/uploads/2025/01/maharastra-415x276.jpg)
ಮಾರ್ಚ್ಗೆ ಎತ್ತಿನಹೊಳೆಯಿಂದ ನೀರು
ಎತ್ತಿನಹೊಳೆ ಕಾಮಗಾರಿ ವೀಕ್ಷಿಸಿದ ಸಚಿವ ರಮೇಶ್ ಜಾರಕಿಹೊಳಿ ಭರವಸೆ
Team Udayavani, May 8, 2020, 5:25 PM IST
![ಮಾರ್ಚ್ಗೆ ಎತ್ತಿನಹೊಳೆಯಿಂದ ನೀರು](https://www.udayavani.com/wp-content/uploads/2020/05/Jarakiholi-620x465.jpg)
ಸಕಲೇಶಪುರ: ಮುಂದಿನ ಮಾರ್ಚ್ ಒಳಗೆ 37 ಕಿ.ಮೀ. ನೀರು ಹರಿಸಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭರವಸೆ ನೀಡಿದರು. ತಾಲೂಕಿನಲ್ಲಿ ನಡೆಯುತ್ತಿರುವ ಎತ್ತಿನ ಹೊಳೆ ಕಾಮಗಾರಿಯ ವೀಕ್ಷಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಣದ ವಿಚಾರದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಎದುರಾಗಬಹುದು ಆದರೆ ಮುಂದಿನ ದಿನಗಳಲ್ಲಿ ಎಲ್ಲವನ್ನು ಬಗೆಹರಿಸಲಾಗುವುದು ಎಂದರು.
ಎತ್ತಿನ ಹೊಳೆ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದ ನೀವೇ ಈಗ ಆ ಯೋಜನೆಯನ್ನು ಕಾರ್ಯಗತ ಮಾಡಲು ಹೊರಟಿದ್ದೀರಲ್ಲಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನೀರಿನ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ ಎಂದರು.
ನೀರಿನ ಸಮಸ್ಯೆಯಾಗದಂತೆ ಕ್ರಮ: ಕಳೆದ ಫೆಬ್ರವರಿಯಲ್ಲಿ ನಾನು ಜಲಸಂಪನ್ಮೂಲ ಸಚಿವ ನಾಗಿ ಅಧಿಕಾರ ಸ್ವೀಕರಿಸಿದ್ದು, ಅಂದಿನಿಂದ ಪ್ರತಿ ಜಲಾಶಯಕ್ಕೆ ಭೇಟಿ ನೀಡಿ ಅಲ್ಲಿನ
ಪರಿಸ್ಥಿತಿಯ ಅವಲೋಕನ ಮಾಡುತ್ತಿದ್ದೇನೆ. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾಜ್ಯದಲ್ಲಿ ನೀರಿನ ಸಮಸ್ಯೆ ಉಲ್ಬಣವಾಗದಂತೆ ಗಮನಹರಿಸಲು ಸೂಚನೆ ನೀಡಿದ್ದೇನೆ ಎಂದರು.
ಎತ್ತಿನ ಹೊಳೆಯನ್ನು ಉತ್ತರ ಭಾಗಕ್ಕೆ ಕೊಂಡೊಯ್ಯುವ ವಿಚಾರವಾಗಿ ಮಾತ ನಾಡಿದ ಅವರು ಕೇವಲ ಉತ್ತರ ಕರ್ನಾಟಕ ಭಾಗವಷ್ಟೇಯಲ್ಲ. ರಾಜ್ಯದ ಎಲ್ಲ ರೈತರು ನಮ್ಮವರೇ ಹಾಗಾಗಿ ಅವರ ಹಿತ ಕಾಪಾಡ ಬೇಕಾಗುತ್ತದೆ. ಜೊತೆಗೆ ನಮ್ಮ ಜವಾಬ್ದಾರಿ ಕೂಡಾ ಹಾಗಾಗಿ ರಾಜ್ಯದಲ್ಲಿ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸಲಾಗುವುದು ಎಂದರು.
ಯೋಜನೆ ಅನುಷ್ಠಾನಕ್ಕೆ ಆದ್ಯತೆ: ರಾಜ್ಯದ ಮುಖ್ಯಮಂತ್ರಿಗೆ ನೀರಾವರಿ ಬಗ್ಗೆ ಹೆಚ್ಚಿನ ಕಾಳಜಿ ಇರುವುದರಿಂದ ಯಾವುದೇ ರೀತಿಯ ಸಮಸ್ಯೆ ಆಗದು. ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು ಆದಷ್ಟು ಬೇಗ ಅವರಿಗೆ ಪರಿಹಾರ ನೀಡುವ ಮೂಲಕ ನೀರಾವರಿಗೆ ಬೇಕಾಗುವಂತಹ ಎಲ್ಲಾ ರೀತಿಯ ಹಣದ ಸಮಸ್ಯೆಯನ್ನು ನಾವು ಬಗೆಹರಿಸುತ್ತೇವೆ. ಜೊತೆಗೆ ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಮತ್ತು ಮುಖ್ಯಮಂತ್ರಿಗಳೊಂದಿಗೆ ವಿಶೇಷ ಸಭೆ ನಡೆಸಿದ್ದು ಯೋಜನೆ ಅನುಷ್ಠಾನಕ್ಕೆ ಮತ್ತಷ್ಟು ಹೆಚ್ಚಿನ ಒತ್ತು ನೀಡುತ್ತೇವೆ ಎಂದರು.
ಕೆಲವು ತಜ್ಞರ ಪ್ರಕಾರ ಇಲ್ಲಿ 8 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂದು ವರದಿ ಇದೆಯಲ್ಲ ಎಂಬ ಮಾತಿಗೆ ನಾವು ಕೂಡ ಸರ್ವೆ ಮಾಡಿಸಿದ್ದೇವೆ ಇಲ್ಲಿ 24.1 ಟಿಎಂಸಿ
ನೀರು ಬರುವ ಎಲ್ಲಾ ಸಾಧ್ಯತೆಗಳು ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಚೆಕ್ ಡ್ಯಾಮ್ ಕಾಮಗಾರಿ ಮುಗಿಯುವ ಹಂತಕ್ಕೆ ತಲುಪಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಎಚ್. ಕೆ.ಕುಮಾರಸ್ವಾಮಿ, ಅರಸೀಕೆರೆ ಶಾಸಕ ಶಿವಲಿಂಗೇಗೌಡ, ಬೇಲೂರು ಶಾಸಕ ಲಿಂಗೇಶ್, ಜಿ.ಪಂ ಅಧ್ಯಕ್ಷೆ ಶ್ವೇತಾ ದೇವರಾಜ್, ವಿಶ್ವೇಶ್ವರಯ್ಯ ನೀರಾವರಿ
ನಿಗಮದ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
![Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು](https://www.udayavani.com/wp-content/uploads/2025/01/maharastra-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ](https://www.udayavani.com/wp-content/uploads/2025/01/Suraj-Revanna-1-150x97.jpg)
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
![9-](https://www.udayavani.com/wp-content/uploads/2025/01/9--150x90.jpg)
ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
![Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ](https://www.udayavani.com/wp-content/uploads/2025/01/6-3-150x90.jpg)
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
![Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ](https://www.udayavani.com/wp-content/uploads/2025/01/byndoor-1-150x88.jpg)
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
![HD-Kumaraswmy](https://www.udayavani.com/wp-content/uploads/2024/12/HD-Kumaraswmy-1-150x90.jpg)
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ](https://www.udayavani.com/wp-content/uploads/2025/01/sari-150x87.jpg)
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
![7-dhaka](https://www.udayavani.com/wp-content/uploads/2025/01/7-dhaka-150x90.jpg)
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
![Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು](https://www.udayavani.com/wp-content/uploads/2025/01/maharastra-150x100.jpg)
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
![Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?](https://www.udayavani.com/wp-content/uploads/2025/01/roh-150x85.jpg)
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
![Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು](https://www.udayavani.com/wp-content/uploads/2025/01/ramag-150x87.jpg)
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.