ಜಲಮೂಲ ರಕ್ಷಣೆಗೆ ಮುಂದಾಗಿ: ಪರಮೇಶ್‌


Team Udayavani, Mar 18, 2020, 3:00 AM IST

jalmoola

ಚನ್ನರಾಯಪಟ್ಟಣ: ವಿಶ್ವ ಜಲದಿನ ಹಾಗೂ ವಿಶ್ವ ಭೂದಿನದಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಜಲಮೂಲ ರಕ್ಷಣೆಗೆ ಮುಂದಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್‌ ಹೇಳಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ನೇತೃತ್ವದಲ್ಲಿ ಹಸಿರು ಭೂಮಿ ಪ್ರತಿಷ್ಠಾನ ನಡೆಸಿದ ಜಲ ಸಂಕಷ್ಟದಿಂದ ಜಲ ಸಂಮೃದ್ಧಿಯಡೆಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾ.22 ರಂದು ವಿಶ್ವ ಜಲದಿನ ಮಾ.22 ರಂದು ವಿಶ್ವ ಭೂಮಿ ದಿನಾಚರಣೆಯನ್ನು ವಿನೂತನವಾಗಿ ಆಚರಿಸಬೇಕು ಎಂದು ಹೇಳಿದರು.

ಕೆರೆ, ಕಟ್ಟೆ, ಕಲ್ಯಾಣಿ ಸ್ವಚ್ಛಗೊಳಿಸಿ: ತಾಲೂಕು 41 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಲ್ಯಾಣಿ, ಕಟ್ಟೆಗಳ ಸ್ವಚ್ಛತೆ ಹಾಗೂ ಅಭಿವೃದ್ಧಿ ಪಡಿಸಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮುಂದಾಗಬೇಕು. ಕೆರೆ, ಕಲ್ಯಾಣಿಗಳ ಪುನಶ್ಚೇತನಕ್ಕೆ ಗ್ರಾಮಗಳ ಸ್ತ್ರೀಶಕ್ತಿ ಸಂಘಗಳು ಹಾಗೂ ಸಂಘ ಸಂಸ್ಥೆಗಳ ನೆರವು ಪಡೆಯಬೇಕು ಎಂದರು.

ನರೇಗಾ ಸದ್ಬಳಕೆಯಾಗಲಿ: ನರೇಗಾ ಮೂಲಕ ಜನಸಂವರ್ಧನೆಗೆ ಯೋಜನೆ ರೂಪಿಸುವುದರಿಂದ ಕೂಲಿ ಕಾರ್ಮಿಕರಿಗೆ ಹಾಗೂ ಜಾಬ್‌ ಕಾರ್ಡ್‌ ಹೊಂದಿರುವವರಿಗೆ ಉದ್ಯೋಗ ಖಾತ್ರಿ ಮೂಲಕ ಕೂಲಿ ಕೆಲಸ ನೀಡಬಹುದಾಗಿದೆ. ಜಿಲ್ಲೆಯಲ್ಲಿ 2.47 ಲಕ್ಷ ಮಂದಿ ಜಾಬ್‌ ಕಾರ್ಡ್‌ದಾರರಿದ್ದಾರೆ, ಇನ್ನು ಎಂಟರಿಂದ ಒಂಬತ್ತು ಲಕ್ಷ ಮಂದಿ ಕೂಲಿ ಕಾರ್ಮಿಕರು ಇದ್ದಾರೆ ಅವರಿಗೆ ವಾರ್ಷಿಕ 100 ದಿವಸ ಕೂಲಿ ಕೊಡಬೇಕಾಗಿದೆ ಎಂದು ಹೇಳಿದರು.

ಹಸಿರುಭೂಮಿ ಪ್ರತಿಷ್ಠಾನದಿಂದ ಬಹುಮಾನ: ಹಾಸನ ಜಿಲ್ಲೆಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜಲ ಮರುಪೂರಣ ಯೋಜನೆಯನ್ನು ಉತ್ತಮವಾಗಿ ಮಾಡಿದರೆ ಹಸಿರು ಭೂಮಿ ಪ್ರತಿಷ್ಠಾನದಿಂದ ಬಹುಮಾನ ನೀಡಲಾಗುವುದು. ಜಿಲ್ಲೆಯ ಅರಸೀಕೆರೆ ಹಾಗೂ ಚನ್ನರಾಯಪಟ್ಟಣ ತಾಲೂಕು ನೀರಿನ ಸಮಸ್ಯೆ ಹೊಂದಿದೆ ಅಲ್ಲಿನ ಪಿಡಿಒಗಳು ಉತ್ತಮ ಕೆಲಸ ಮಾಡಿ ನಗದು ಬಹುಮಾನ ಪಡೆಯಲಿ ಎನ್ನುವುದು ಸಂಸ್ಥೆಯ ಉದ್ದೇಶವಾಗಿದೆ ಎಂದು ಹೇಳಿದರು.

ಸರ್ಕಾರದ ಯೋಜನೆಗಳನ್ನು ಗುರಿ ಸಾಧನೆಗೆ ಮಾತ್ರ ಸೀಮಿತ ಮಾಡುತ್ತಿರುವುದರಿಂದ ಅಷ್ಟೊಂದು ಪರಿಣಾಮಕಾರಿಯಾಗಿ ಯೋಜನೆಗಳು ನಡೆಯುತ್ತಿಲ್ಲ. ಪ್ರತಿ ಮನೆಯಲ್ಲಿ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ನೀರಿನ ಬಜೆಟ್‌ ತಯಾರು ಮಾಡಿಕೊಳ್ಳುವುದು ಸೂಕ್ತ ಇದರಿಂದ ನೀರಿನ ಮಹತ್ವ ಪ್ರತಿಯೊಬ್ಬರಿಗೂ ತಿಳಿಯಲಿದೆ ಎಂದರು.

ತಾಲೂಕು ಪಂಚಾಯಿತಿ ಅಧ್ಯಕ್ಷೆ ಇಂದಿರಾ, ಸಿಇಒ ಮಹೇಶ್‌, ಯೋಜನಾಧಿಕಾರಿ ನಾಗರಾಜು, ಇಒ ಚಂದ್ರಶೇಖರ್‌, ಹಸಿರು ಭೂಮಿ ಪ್ರತಿಷ್ಠಾನದ ಅಧ್ಯಕ್ಷ ಅಪ್ಪಾಜಿಗೌಡ, ಸಿ.ಎನ್‌.ಅಶೋಕ, ಗ್ರಾಮ ಪಂಚಾಯಿತಿ ಪಿಡಿಒ, ತಾಲೂಕು ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಲ ಜಾಗೃತಿ ಮೂಡಿಸಲು ಕ್ರಮ: ಹಸಿರು ಭೂಮಿ ಪ್ರತಿಷ್ಠಾನ ಸಂಸ್ಥೆಯ ಸಂಸ್ಥಾಪಕಿ ರೂಪಾ ಹಾಸನ ಮಾತನಾಡಿ, ಮಾ.22 ರಿಂದ ಏ.22ರ ವರೆಗೆ ಒಂದು ತಿಂಗಳು ನಿರಂತರವಾಗಿ ಜಲದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಎಲ್ಲಾ ಗ್ರಾಮ ಪಂಚಾಯಿತಿ ಅಧಿಕಾರಿಗಳ ಸಭೆ ನಡೆಸಿ ಜಲ ಸಂವರ್ಧನೆಗೆ ಯಾವ ರೀತಿಯಲ್ಲಿ ಕಾರ್ಯೋನ್ಮುಖರಾಗ ಬೇಕು ಎನ್ನುವು ಬಗ್ಗೆ ಪಿಪಿಟಿ ಮೂಲಕ ಮಾಹಿತಿ ನೀಡಲಾಗುತ್ತಿದೆ ಇದನ್ನು ನೋಡಿದ ಪಿಡಿಒಗಳು ಇಂದಿನಿಂದ ಕಾರ್ಯಪ್ರವೃತ್ತರಾಗಬೇಕು ಎಂದು ಮನವಿ ಮಾಡಿದರು.

ಜಲ ಮರುಪೂರಣ ಮಾಡಿ: ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್‌ ಮಾತನಾಡಿ, ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಸಾವಿರಾರು ಲೀ. ಲಕ್ಷಾಂತ ಲೀಟರ್‌ ನೀರನ್ನು ಚರಂಡಿಗೆ ಹರಿಸುತ್ತಿದ್ದೇವೆ. ಗ್ರಾಮಗಳಲ್ಲಿ ಇರುವ ಶುದ್ಧ ಕುಡಿಯುವ ನೀರಿನ ಘಟಕದ ಬಳಿ ನೀರಿಂಗಿಸುವ ಮೂಲಕ ಅಂತರ್ಜಲ ಮರುಪೂರಣ ಮಾಡುವ ಬಗ್ಗೆ ಪಿಡಿಒಗಳು ಕ್ರಮ ಕೈಗೊಳ್ಳಬೇಕು. ಇದಕ್ಕೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಂಜಿನಿಯರ್‌ಗಳು ಸಹಕಾರ ನೀಡಬೇಕು ಎಂದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.