10 ದಿನದೊಳಗೆ ಎತ್ತಿನಹೊಳೆ ಯೋಜನೆ ಉದ್ಘಾಟನೆೆ: ಡಿ.ಕೆ. ಶಿವಕುಮಾರ್ ಪ್ರಕಟ
Team Udayavani, Aug 29, 2024, 11:41 PM IST
ಹಾಸನ: ಎತ್ತಿನ ಹೊಳೆ ಯೋಜನೆಯ ಚೆಕ್ ಡ್ಯಾಂಗಳಿಂದ ನೀರೆತ್ತುವ ಕಾರ್ಯ ಬಹುತೇಕ ಯಶಸ್ವಿ ಯಾಗಿದ್ದು ಮುಂದಿನ 10 ದಿನಗಳ ಒಳಗೆ ಎತ್ತಿನಹೊಳೆ ಯೋಜನೆ ಉದ್ಘಾಟನೆೆ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಬಳಿ 2ನೇ ದಿನವಾದ ಗುರುವಾರವೂ ಎತ್ತಿನಹೊಳೆ ಯೋಜನೆ ಕಾಮಗಾರಿ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಇವತ್ತೇ ಮುಖ್ಯಮಂತ್ರಿ ಜತೆ ಮಾತನಾಡುವೆ ಎಂದರು.
ಬುಧವಾರ ಸಂಜೆ ಕುಂಬರಡಿ ಬಳಿ ಒಂದನೇ ಚೆಕ್ ಡ್ಯಾಂನಿಂದ ಪ್ರಾಯೋಗಿಕವಾಗಿ ನೀರೆತ್ತುವ ಕಾರ್ಯಕ್ಕೆ ಚಾಲನೆ ನೀಡಿದ್ದೆ. ಉದ್ಘಾಟನೆ ಕಾರ್ಯಕ್ರಮ ಎಲ್ಲಿ ಮಾಡಬೇಕೆಂಬ ವಿಚಾರವಾಗಿ ಅಧಿಕಾರಿಗಳಿಗೆ ನಿರ್ದೇಶನ ಕೊಡಬೇಕಿತ್ತಾದ್ದರಿಂದ ಸಕಲೇಶಪುರದಲ್ಲೇ ಉಳಿದುಕೊಂಡಿದ್ದೆ. ಉದ್ಘಾಟನೆ ಕಾರ್ಯಕ್ರಮ ಐತಿಹಾಸಿಕವಾಗಲಿದೆ ಎಂದರು.
ಈಗ 550 ಕ್ಯುಸೆಕ್ ನೀರೆತ್ತಲಾಗುತ್ತಿದೆ. ಉದ್ಘಾಟನೆ ದಿನ ಇದರ 6 ಪಟ್ಟು ನೀರೆತ್ತಲಾಗುವುದು. ಯೋಜನೆಪೂರ್ಣಗೊಳ್ಳಲು ಸ್ವಲ್ಪ ತೊಡಕಿದೆ. ಹಾಗಾಗಿ ವಾಣಿವಿಲಾಸ ಸಾಗರ ಹಾಗೂ ಕೆರೆಗಳನ್ನು ತುಂಬಿಸಿಕೊಳ್ಳಲು ಈಗ ನೀರು ಹರಿಸುತ್ತಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.