![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jun 13, 2020, 2:38 PM IST
ಶಿಗ್ಗಾವಿ: ಕೋಣನಕೇರಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಪದ್ದವ್ವ (ಪದ್ಮಾವತಿ) ಕಮ್ಮಾರ ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳ ದ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.
ಭದ್ರಾಪುರ ಗ್ರಾಮದ ಮಹಾಂತೇಶ ರಾಮನಕೊಪ್ಪ ಎಂಬವರು ತಮ್ಮ ಹೊಲದಲ್ಲಿ ಕೊರೆಸಿದ್ದ ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ಪಡೆಯಲು ಪಂಚಾಯಿತಿಯಿಂದ ಎನ್ಒಸಿ ನೀಡಲು ಅರ್ಜಿ ಸಲ್ಲಿಸಿದ್ದರು. ಕಳೆದ ಒಂದು ವರ್ಷದಿಂದ ಸತಾಯಿಸುತ್ತಿದ್ದ ಪಿಡಿಒ 6500 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಮಹಾಂತೇಶ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರಿಗೆ ದೂರು ನೀಡಿದ್ದರು. ಶುಕ್ರವಾರ 3500 ರೂ. ಲಂಚ ನೀಡುತ್ತಿದ್ದಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಪಿಡಿಒ ಪದ್ದವ್ವ ಅವರನ್ನು ವಶಕ್ಕೆ ಪಡೆದು, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಡಿವೈಎಸ್ಪಿ ಸೋಮಲಿಂಗ ನೇತೃತ್ವದಲ್ಲಿ ಎಸಿಬಿ ತಂಡ ದಾಳಿ ನಡೆಸಿತ್ತು. ಹಾವೇರಿ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.