ಅಪಘಾತ ರಹಿತ ಚಾಲನೆಗೆ ಆದ್ಯತೆ ಅಗತ್ಯ

ಡಿವೈಎಸ್ಪಿ ಎಂ.ಎಸ್‌.ಪಾಟೀಲ ಅಭಿಮತ ; ಚಾಲನಾ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

Team Udayavani, Jul 15, 2022, 5:10 PM IST

21

ಹಾವೇರಿ: ಅಪಘಾತ ರಹಿತ ವಾಹನ ಚಾಲನೆಯಿಂದ ಸಾರಿಗೆ ಸಂಸ್ಥೆಗಳಿಗೆ ಆರ್ಥಿಕ ಹೊರೆ ಕಡಿಮೆಯಾಗಿಸುವ ಜೊತೆಗೆ ಸಾರ್ವಜನಿಕರ ಪ್ರಾಣ ಹಾನಿ ತಡೆಯಬಹುದು. ಈ ಹಿನ್ನೆಲೆಯಲ್ಲಿ ವಾಹನ ಚಾಲಕರು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಡಿವೈಎಸ್ಪಿ ಎಂ.ಎಸ್‌.ಪಾಟೀಲ ಹೇಳಿದರು.

ನಗರದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹಾವೇರಿ ವಿಭಾಗೀಯ ಕಚೇರಿ ಸಭಾಂಗಣದಲ್ಲಿ ಅಪಘಾತ ರಹಿತ ಚಾಲನಾ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ವಾಹನ ಚಾಲಕರು ಅಪಘಾತಗಳು ಸಂಭವಿಸದಂತೆ ಬಹಳ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು. ಚಾಲಕರು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿದ್ದಲ್ಲಿ ಅಪಘಾತಗಳು ಸಂಭವಿಸುವುದು ವಿರಳ. ಆದ್ದರಿಂದ, ಚಾಲಕರು ಸರಿಯಾದ ಸಮಯಕ್ಕೆ ನಿದ್ದೆ ಮಾಡಿ, ವಿಶ್ರಾಂತಿ ಪಡೆದು ಸಮಚಿತ್ತದಿಂದ ವಾಹನ ಚಲಾಯಿಸಬೇಕೆಂದು ಹೇಳಿದರು.

ವಿಭಾಗೀಯ ಸಂಚಾರ ಅಧಿಕಾರಿ ಅಶೋಕ ಪಾಟೀಲ್‌ ಮಾತನಾಡಿ, ಅಪಘಾತ ಆಕಸ್ಮಿಕವಾಗಿ ಸಂಭವಿಸುತ್ತವೆ. ಚಾಲಕರು ನಿರ್ಲಕ್ಷ್ಯ ವಹಿಸದೇ ಜಾಗ್ರತೆಯಿಂದ ವಾಹನ ಚಲಾಯಿಸಬೇಕು. ಇತ್ತೀಚೆಗೆ ಕೆಲವು ವರ್ಷಗಳಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್‌ ಅಪಘಾತಗಳನ್ನು ತಪ್ಪಿಸಲು ಸಾಕಷ್ಟು ಮುಂಜಾಗ್ರತೆ ವಹಿಸುತ್ತಿದೆ. ಅಜಾಗರೂಕತೆ ಅಥವಾ ಮದ್ಯ ಸೇವಿಸಿ ಕರ್ತವ್ಯ ನಿರ್ವಹಿಸುವ ಚಾಲಕ ಮತ್ತು ನಿರ್ವಾಹಕರ ಮೇಲೆ ಹದ್ದಿನ ಕಣ್ಣಿರಿಸಲಾಗುತ್ತಿದೆ. ಹಾಗಾಗಿ, ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಗಳು ಅಪಘಾತಕ್ಕೀಡಾಗುವುದು ಕಡಿಮೆಯಾಗಿದೆ ಎಂದು ಹೇಳಿದರು.

ಕೆಎಸ್‌ಆರ್‌ಟಿಸಿ ಪ್ರಯಾಣಿಕರ ಪಾಲಿಗೆ ಸುರಕ್ಷಿತ ಸಾರಿಗೆ ವ್ಯವಸ್ಥೆಯಾಗಿ ಬದಲಾಗುತ್ತಿದೆ. ಚಾಲಕರಲ್ಲಿ ಸಮಯ ಪ್ರಜ್ಞೆ, ಮುಂಜಾಗರೂಕತೆಗಳ ಜತೆಗೆ ಸಂಸ್ಥೆ ಕಡೆಯಿಂದ ಕಾಲಕಾಲಕ್ಕೆ ನೀಡಲಾಗುತ್ತಿರುವ ತರಬೇತಿ ಹಾಗೂ ಕಟ್ಟು ನಿಟ್ಟಿನ ನಿಯಮಾವಳಿಗಳು ಪೂರಕವಾಗಿವೆ ಎಂದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂಬಾಬಾ ಮುದ್ದೇಬಿಹಾಳ ಮಾತನಾಡಿ, ದೇಶದಲ್ಲಿ ಅನಾರೋಗ್ಯದ ಹೊರತಾಗಿಯೂ ಹೆಚ್ಚಾಗಿ ರಸ್ತೆ ಅಪಘಾತದಲ್ಲಿ ಮರಣ ಹೊಂದುತ್ತಿರುವವರ ಸಂಖ್ಯೆ ಅಧಿ ಕವಾಗಿದೆ. ಇದಕ್ಕೆ ವಾಹನ ಚಾಲಕರ ನಿರ್ಲಕ್ಷ್ಯ ಮತ್ತು ಅಜಾಗರೂಕತೆ ಕಾರಣವಾಗಿದೆ. ವಾಹನಗಳನ್ನು ವೇಗವಾಗಿ ಚಲಾಯಿಸಬಾರದು. ಕುಟುಂಬದ ಸಮಸ್ಯೆ ಮತ್ತು ಕಚೇರಿ ಕೆಲಸದ ಒತ್ತಡದಲ್ಲಿ ವಾಹನ ಚಲಾಯಿಸುವುದರಿಂದ ಅಪಘಾತ ಸಂಭವಿಸುವುದು ಹೆಚ್ಚಾಗಿದೆ. ಕಾರಣ ವಾಹನ ಚಾಲಕರು ಏಕಾಗ್ರತೆಯಿಂದ ವಾಹನ ಚಲಾಯಿಸಬೇಕೆಂದು ಸಲಹೆ ನೀಡಿದರು.

ಒಂದೊಮ್ಮೆ ಅಪಘಾತ ಸಂಭವಿಸಿದಲ್ಲಿ ವಾಹನ ಚಾಲಕನ ಮೇಲೆ ಸೆಕ್ಷನ್‌ 279ರ ಅಡಿ ಕ್ರಿಮಿನಲ್‌ ಕೇಸ್‌ ದಾಖಲಿಸಿ ವಾಹನ ಚಾಲನಾ ಪರವಾನಗಿ ರದ್ದುಪಡಿಸಿ, ಜೈಲು ಶಿಕ್ಷೆ ವಿಧಿ ಸಲಾಗುತ್ತದೆ. ಆದ್ದರಿಂದ, ಚಾಲಕರು ಸುರಕ್ಷಿತವಾಗಿ ವಾಹನ ಚಲಾಯಿಸಬೇಕೆಂದು ಹೇಳಿದರು.

ಹುಬ್ಬಳ್ಳಿ ಪ್ರಾದೇಶಿಕ ತರಬೇತಿ ಕೇಂದ್ರದ ಪ್ರಾಂಶುಪಾಲ ನಾರಾಯಣಪ್ಪ ಕುರುಬರ ಮಾತನಾಡಿ, ಕೆಎಸ್‌ಆರ್‌ಟಿಸಿ ಸಂಸ್ಥೆ ಪ್ರತಿ ವರ್ಷ 30 ಕೋಟಿ ರೂ. ಅಪಘಾತ ಪರಿಹಾರ ಪಾವತಿಸುತ್ತಿದೆ. ಇದಕ್ಕೆ ಸಂಸ್ಥೆಯ ಚಾಲಕರ ನಿರ್ಲಕ್ಷ್ಯತನ, ಅಜಾಗರೂಕತೆಯೇ ಕಾರಣವಾಗಿದೆ. ಹಾವೇರಿ ವಿಭಾಗದಿಂದ ಕಳೆದ ಏಳು ವರ್ಷದಲ್ಲಿ 22.16 ಕೋಟಿ ರೂ. ಅಪಘಾತ ಪರಿಹಾರ ಪಾವತಿಸಿದೆ. ಇದೇ ರೀತಿ, ಮುಂದುವರೆದಲ್ಲಿ ಸಂಸ್ಥೆ ಆರ್ಥಿಕವಾಗಿ ನಷ್ಟ ಅನುಭವಿಸುತ್ತದೆ. ಆದ್ದರಿಂದ ಎಲ್ಲರೂ ಶಿಸ್ತುಬದ್ಧವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಹೇಳಿದರು.

ಕಾರ್ಯಾಗಾರದಲ್ಲಿ ಹುಬ್ಬಳ್ಳಿ ಕೇಂದ್ರ ಕಚೇರಿ ಉಪ ಮುಖ್ಯಯೋಜನಾ ಮತ್ತು ಅಂಕಿ ಸಂಖ್ಯಾಧಿಕಾರಿ ಮಹದೇವಪ್ಪ ಮುಂಜಿ, ಹಾವೇರಿ ವಿಭಾಗೀಯ ಭದ್ರತಾ ಮತ್ತು ಜಾಗೃತಾಧಿಕಾರಿ ವಿ.ಎಚ್‌.ಜಗದೀಶ, ಹಾವೇರಿ ವಿಭಾಗೀಯ ಕಚೇರಿ ಆಡಳಿತಾಧಿಕಾರಿ ದಿವಾಕರ ಕೆ., ಹಾವೇರಿ ಶಹರ ಸಿಪಿಐ ಸುರೇಶ ಸಗರಿ, ಅಂಕಿಸಂಖ್ಯೆ ಸಹಾಯಕ ಸಂಚಾರ ಶಾಖೆಯ ವಿವೇಕಾನಂದ, ವಿಭಾಗೀಯ ಕಾರ್ಯಾಗಾರದ ಸಹಾಯಕ ಕುಶಲಕರ್ಮಿ ಚಂದ್ರು ಲಿಂಗಣ್ಣನವರ, ಸತೀಶ ಕಾಡನವರ ಇದ್ದರು.

ಮಲ್ಲಿಕಾರ್ಜುನ ಹಿಂಚಿಗೇರಿ ನಿರೂಪಿಸಿದರು.ಇತ್ತೀಚಿನ ಕೆಲವು ವರ್ಷಗಳಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್‌ ಅಪಘಾತಗಳನ್ನು ತಪ್ಪಿಸಲು ಸಾಕಷ್ಟು ಮುಂಜಾಗ್ರತೆ ವಹಿಸುತ್ತಿದೆ. ಅಜಾಗರೂಕತೆ ಅಥವಾ ಮದ್ಯ ಸೇವಿಸಿ ಕರ್ತವ್ಯ ನಿರ್ವಹಿಸುವ ಚಾಲಕ ಮತ್ತು ನಿರ್ವಾಹಕರ ಮೇಲೆ ಹದ್ದಿನ ಕಣ್ಣಿರಿಸಲಾಗುತ್ತಿದೆ. ಹಾಗಾಗಿ, ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ ಗಳು ಅಪಘಾತಕ್ಕೀಡಾಗುವುದು ಕಡಿಮೆಯಾಗಿದೆ. –ಅಶೋಕ ಪಾಟೀಲ್‌, ವಿಭಾಗೀಯ ಸಂಚಾರ ಅಧಿಕಾರಿ

 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.