ನೆರೆ ನಿರಾಶ್ರಿತರ ಮನೆ ನಿರ್ಮಾಣ ವಿಳಂಬವಾದರೆ ಕ್ರಮ


Team Udayavani, May 14, 2020, 4:58 AM IST

ನೆರೆ ನಿರಾಶ್ರಿತರ ಮನೆ ನಿರ್ಮಾಣ ವಿಳಂಬವಾದರೆ ಕ್ರಮ

ಹಾವೇರಿ: ನೆರೆಯಿಂದ ಹಾನಿಗೊಳಗಾದ ಮನೆ ನಿರ್ಮಾಣ ಕಾರ್ಯ ವಿಳಂಬ ಮಾಡಿದರೆ ತಹಶೀಲ್ದಾರರ ಮೇಲೆ ಶಿಸ್ತುಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಎಚ್ಚರಿಕೆ ನೀಡಿದರು.

ಬುಧವಾರ ಜಿಲ್ಲೆಯ ತಹಶೀಲ್ದಾರ್‌ ಹಾಗೂ ತಾಪಂ ಇಒಗಳು, ಪಟ್ಟಣ ಪಂಚಾಯತ್‌, ಪುರಸಭೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಜಿಲ್ಲಾಧಿಕಾರಿ ಈ ಸೂಚನೆ ನೀಡಿದರು. ನೆರೆಯಿಂದ ಹಾನಿಯಾದ ಮನೆಗಳಿಗೆ ಜಿಪಿಎಸ್‌ ಅಳವಡಿಕೆ, ಆಡಿಟ್‌ ವರದಿ, ಪರಿಹಾರ ವಿತರಣೆ ಹಾಗೂ ಮನೆ ನಿರ್ಮಾಣ ಕಾರ್ಯ ಆರಂಭಿಸದೇ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳ ಕುರಿತಂತೆ ಜಿಲ್ಲಾಧಿಕಾರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಮನೆ ನಿರ್ಮಾಣಕ್ಕೆ ಫಲಾನುಭವಿಗಳಿಂದ ಅಡ್ಡಿಯಾದರೆ ಎಫ್‌ಐಆರ್‌ ದಾಖಲಿಸಿ. ಯಾವುದೇ ಒತ್ತಡಗಳಿಗೆ ಒಳಗಾಗದೆ ನೈಜತೆ ಆಧಾರದ ಮೇಲೆ ಸಮಸ್ಯೆ ಇತ್ಯರ್ಥಪಡಿಸಿ. ಮಳೆಗಾಲ ಆರಂಭಗೊಂಡಿದೆ. ಇನ್ನೂ ಮನೆ ನಿರ್ಮಾಣಗೊಂಡಿಲ್ಲ ಎಂದರೆ ಮತ್ತೆ ಜನ ಸಮಸ್ಯೆಗೆ ಸಿಲುಕುತ್ತಾರೆ. ಪರಿಸ್ಥಿತಿ ಅರ್ಥ ಮಾಡಿಕೊಂಡು ಕೆಲಸ ನಿರ್ವಹಿಸಿ. ತಡಮಾಡಿದರೆ ನಿಮ್ಮ ವಿರುದ್ಧಸರ್ಕಾರಕ್ಕೆ ವರದಿ ಸಲ್ಲಿಸಬೇಕಾಗುತ್ತದೆ. ಇದರಲ್ಲಿ ಲೋಪ ಕಂಡುಬಂದರೆ ನಿಮ್ಮ ಮೇಲೆ ಗಂಭೀರ ಕ್ರಮಗಳಾಗುತ್ತವೆ ಎಂದು ಎಚ್ಚರಿಸಿದರು.

ನೆರೆಹಾನಿಗೆ ಒಳಗಾದ ಮನೆಗಳ ನಿರ್ಮಾಣ ಕಾರ್ಯದಲ್ಲಿ ಸಮಸ್ಯೆಗಳಿದ್ದರೆ ತಹಶೀಲ್ದಾರ್‌ಗಳ ಹಂತದಲ್ಲೇ ಪರಿಹರಿಸುವ ಅಧಿಕಾರವನ್ನು ಸರ್ಕಾರ ನೀಡಿದೆ. ಆದಾಗ್ಯೂ ಬಹಳಷ್ಟು ಪ್ರಕರಣಗಳು ತಹಶೀಲ್ದಾರ್‌ ಹಂತದಲ್ಲಿ ಬಾಕಿ ಉಳಿದುಕೊಂಡಿವೆ. ಹಾನಿಗೊಳಗಾದ ಮನೆಗಳ ದುರಸ್ತಿ ಪ್ರಕರಣಗಳು, ಪುನರ್‌ ನಿರ್ಮಾಣ ಮಾಡಬೇಕಾದ ಪ್ರಕರಣಗಳು, ಹಾನಿಗೊಳಗಾದ ಮನೆಯ ನಿವೇಶನ ಬದಲಾಯಿಸಿ ಬೇರೆಡೆ ಮನೆ ನಿರ್ಮಾಣ ಮಾಡುವ ಪ್ರಕರಣಗಳಿರಲಿ, ಪರಿಹಾರ ಪಡೆಯುವಲ್ಲಿ ಹಾಗೂ ಮನೆ ದುರಸ್ತಿ, ನಿರ್ಮಾಣದಲ್ಲಿ ಕುಟುಂಬಗಳ ಭಿನ್ನಾಭಿಪ್ರಾಯ ಪ್ರಕರಣಗಳಲ್ಲಿ ಯಾವುದೇ ಸಮಸ್ಯೆಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿ ಕ್ರಮವಹಿಸಬೇಕಾಗಿದೆ.  ಈ ವಿಚಾರದಲ್ಲಿ ವಿಳಂಬ ಮಾಡುವುದು, ಸಮಸ್ಯೆಗಳಿಗೆ ಅವಕಾಶ ಕಲ್ಪಿಸಿದಂತಾಗುತ್ತದೆ. ಆದ್ಯತೆಯ ಮೇರೆಗೆ ಈ ಕಾರ್ಯವನ್ನು ಕೈಗೊಳ್ಳಿ ಎಂದು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಎಸ್‌. ಯೋಗೇಶ್ವರ, ಉಪವಿಭಾಗಾಧಿಕಾರಿ ಡಾ| ದಿಲೀಷ್‌ ಶಶಿ, ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಇಲಾಖೆ ಉಪನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ಸಮಾಜ ಕಲ್ಯಾಣಾಧಿಕಾರಿ ಚೈತ್ರಾ, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ವೀರೇಂದ್ರ ಕುಂದಗೋಳ, ಪೌರಾಯುಕ್ತ ಬಸವರಾಜ ಜಿದ್ದಿ, ತಹಶೀಲ್ದಾರ್‌ ಶಂಕರ್‌, ತಾಪಂ ಇಒ ಬಸವರಾಜ ಹಾಗೂ ವಿವಿಧ ತಾಲೂಕಿನ ತಹಶೀಲ್ದಾರರು, ತಾಪಂ ಇಒಗಳು ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

Basavaraj Bommai: ನಮಗೆ ಕಾಂಗ್ರೆಸ್‌ ನೇರ ಎದುರಾಳಿ

Basavaraj Bommai: ನಮಗೆ ಕಾಂಗ್ರೆಸ್‌ ನೇರ ಎದುರಾಳಿ

Shiggaon; Ajjamfir Qadri said that Yasir Khan is a BJP agent

Shiggaon ‘ಕೈ’ ಭಿನ್ನಮತ; ಯಾಸಿರ್‌ ಖಾನ್‌ ಬಿಜೆಪಿ ಏಜೆಂಟ್‌ ಎಂದ ಅಜ್ಜಂಫೀರ್‌ ಖಾದ್ರಿ

Tragedy: ಹೃದಯಾಘಾತದಿಂದ ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತ್ಯು

Tragedy: ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.