ಕಲೆ ಸಾಬೀತುಪಡಿಸಿದರೆ ಕಲಾವಿದರು ಬಡವರಲ್ಲ
ಭಾವಚಿತ್ರ ಪ್ರಾತ್ಯಕ್ಷಿಕೆ-ವಿಶೇಷ ಉಪನ್ಯಾಸ ಕಾರ್ಯಕ್ರಮ
Team Udayavani, Mar 21, 2022, 5:08 PM IST
ಶಿಗ್ಗಾವಿ: ಕಲೆ ಅಪ್ಪಿಕೊಂಡು ಅದನ್ನು ಸಾಬೀತು ಪಡಿಸಿದರೆ ಯಾವ ಕಲಾವಿದರೂ ಬಡವರಲ್ಲ. ಏಕೆಂದರೆ ಅವರಿಗೆ ಅನೇಕ ರೀತಿಯ ಬೇಡಿಕೆ ಇದೆ. ಅಂಥಹದನ್ನು ಬಳಸಿಕೊಳ್ಳಬೇಕು ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ (ಪ್ರಭಾರ) ಪ್ರೊ| ಕೆ.ಎನ್. ಗಂಗಾನಾಯಕ ಹೇಳಿದರು.
ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಮಲ್ಲಿಗೆದಂಡೆ ಸಭಾಂಗಣದಲ್ಲಿ ದೃಶ್ಯಕಲೆ ಅಧ್ಯಯನ ವಿಭಾಗದಿಂದ ಆಯೋಜಿಸಿದ್ದ ಎರಡು ದಿನದ ಭಾವಚಿತ್ರ ಪ್ರಾತ್ಯಕ್ಷಿಕೆ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಯಶಸ್ಸನ್ನು ನಮ್ಮ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ ಎಂಬುದನ್ನು ಅವರು ಬಿಡಿಸಿದ ಚಿತ್ರ ನೋಡಿದಾಗ ಗೊತ್ತಾಯಿತು. ಸಂಪನ್ಮೂಲ ವ್ಯಕ್ತಿಯಾದ ಹರ್ಷದಾ ಕೆರಕರ ತರಬೇತಿ ಪ್ರಭಾವ ಬೀರಿದೆ ಎನ್ನುವುದು ಸ್ಪಷ್ಟವಾಯಿತು. ಹಾಗೆಯೇ ಗೋವಾದಿಂದ ಬಂದಿದ್ದ ಅಂತಾರಾಷ್ಟ್ರೀಯ ಕಲಾವಿದೆ ಹರ್ಷದಾ ಕರಕರೆ ಕಲೆಯ ಹೆಚ್ಚುಗಾರಿಕೆ ಪ್ರಶಂಸಿದರು.
ಮುಖ್ಯ ಅತಿಥಿಯಾಗಿ ಹಾಗೂ ಪ್ರಾತ್ಯಕ್ಷಿಕೆ ಸಂಪನ್ಮೂಲ ವ್ಯಕ್ತಿಯಾಗಿದ್ದ ಅಂತಾರಾಷ್ಟ್ರೀಯ ಕಲಾವಿದೆ ಹರ್ಷದಾ ಕೆರಕರ ಸೋನಕ್ ಎರಡು ದಿನ ತಮ್ಮ ಕಲೆ ಪ್ರಾತ್ಯಕ್ಷಿಕೆ ನೀಡಿ ಕೊನೆಗೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಎರಡು ದಿನ ನಾನು ಇಲ್ಲಿ ಸಂತಸದ ಕ್ಷಣ ಕಳೆದಿದ್ದೇನೆ. ಈ ವಿಶ್ವವಿದ್ಯಾಲಯದ ಆವರಣ ತುಂಬ ವಿಶಿಷ್ಟವಾಗಿದ್ದು ಕಲಾವಿದರನ್ನು ಸೃಷ್ಟಿಸುವಲ್ಲಿ ಕೊಡುಗೆ ನೀಡುತ್ತದೆ ಎಂದರು.
ವಿದ್ಯಾರ್ಥಿಗಳಾದ ಅಪ್ಪು ಕೆ. ಮತ್ತು ಅರ್ಪಿತಾ ಹಿರೇಮಠ ಅನಿಸಿಕೆ ಹಂಚಿಕೊಂಡರು. ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವರಾದ ಶಹಜಾನ ಮುದಕವಿ ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.
ದೃಶ್ಯ ಕಲಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ರವಿ ನಾಯಕ ಸ್ವಾಗತಿಸಿದರು. ವಿದ್ಯಾರ್ಥಿನಿ ಸುವರ್ಣಾ ನಾಯಕ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕ ಡಾ| ಶಂಕರ ಕುಂದಗೋಳ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.